• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೆಸಾರ್ಟ್ ಮೋಜಿನಲ್ಲಿರುವ 18 ಎಐಎಡಿಎಂಕೆ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

TNN Correspondent Posted On September 18, 2017
0


0
Shares
  • Share On Facebook
  • Tweet It

ಚೆನ್ನೈ : ಎಐಎಡಿಎಂಕೆ ಮಾಜಿ ಉಪ ಪ್ರಧಾನಕಾರ್ಯದರ್ಶಿ ಹಾಗೂ ಶಶಿಕಲಾ ಸಂಬಂಧಿ ಟಿ.ಟಿ.ವಿ ದಿನಕರನ್ ಬಣದಲ್ಲಿ ಗುರುತಿಸಿಕೊಂಡು ತಮಿಳುನಾಡು ಸಿಎಂ ಇ.ಪಳನಿಸಾಮಿ ಬಹುಮತ ಸಾಬೀತಿಗೆ ರಾಜಕೀಯ ಚದುರಂಗದ ದಾಳಗಳಾಗಿ ಮಡಿಕೇರಿಯ ರೆಸಾರ್ಟ್‍ಗಳಲ್ಲಿ ಮೋಜು-ಮಸ್ತಿಯಲ್ಲಿದ್ದ 18 ಶಾಸಕರನ್ನು ವಿಧಾನಸಭೆ ಸ್ಪೀಕರ್ ಪಿ.ಧನಪಾಲ್ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಪಳನಿಸಾಮಿ ಮತ್ತು ಪನ್ನೀರ್ ಸೆಲ್ವಂ ಬಣಗಳು ಒಂದಾಗಿ ಸರ್ಕಾರ ರಚಿಸಿದ ನಂತರ ಬಹುಮತದ ಸಂಖ್ಯಾಬಲ ದಕ್ಕಬಾರದೆಂದು ದಿನಕರನ್ ಈ ಶಾಸಕರನ್ನು ರೆಸಾರ್ಟ್ ವಾಸದಲ್ಲಿ ಇರಿಸಿದ್ದರು. ಶುಕ್ರವಾರದೊಳಗೆ ಪಕ್ಷ ವಿರೋಧಿ ಚಟುವಟಿಕೆ ನಿಲ್ಲಿಸಿ ತವರು ಕ್ಷೇತ್ರಗಳಿಗೆ ಮರಳುವಂತೆ ಕಳೆದ ವಾರ ಸ್ಪೀಕರ್ ಸೂಚಿಸಿದ್ದರು. ಈ ಮಾತನ್ನು ಮೀರಿಯೂ ಮಜಾ ಉಡಾಯಿಸುತ್ತಿದ್ದ ಶಾಸಕರು ಈಗ ಅನರ್ಹರಾಗಿದ್ದಾರೆ. ಶಾಸಕರು ಪ್ರಜಾಪ್ರಭುತ್ವದ ಲೇವಡಿ ಮಾಡುತ್ತಿದ್ದಾರೆ ಎಂದು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಮಿಳುನಾಡು ರಾಜಕೀಯದ ಬಗ್ಗೆ ಜನರಲ್ಲಿ ಹೇಸಿಗೆ ಮೂಡಿತ್ತು.

ಸಿಎಂ ಪಳನಿಸಾಮಿ ವಿಶ್ವಾಸಮತ ಯಾಚನೆಗೆ ಮುಂದಾಗಬೇಕೆ ಬೇಡವೇ ಎಂದು ಮದ್ರಾಸ್ ಹೈಕೋರ್ಟ್ ಇನ್ನೂ ನಿರ್ಧರಿಸಬೇಕಿದೆ.

ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ಮತ್ತು ದಿನಕರನ್ ಬೆಂಬಲಿತ ಶಾಸಕರೊಂದಿಗೆ ಕೆಲ ವಾರಗಳ ಹಿಂದೆ ತಮಿಳುನಾಡು ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಭೇಟಿ ಮಾಡಿ ಸಿಎಂ ಪಳನಿಗೆ ವಿಶ್ವಾಸಮತ ಸಾಬೀತಿಗೆ ಸೂಚಿಸುವಂತೆ ಮನವಿ ಸಲ್ಲಿಸಿದ್ದರು.

0
Shares
  • Share On Facebook
  • Tweet It


aiadmkdhanpaldinakarangovernormlasasikalaspeakertamilnaduttvvidyasagar


Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
You may also like
ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!
October 7, 2017
ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!
October 5, 2017
ಜಯಾ ಸಾವಿನ ಮಹಾರಹಸ್ಯ ಸ್ಫೋಟ!
September 24, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search