• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರೆಸಾರ್ಟ್ ಮೋಜಿನಲ್ಲಿರುವ 18 ಎಐಎಡಿಎಂಕೆ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

TNN Correspondent Posted On September 18, 2017


  • Share On Facebook
  • Tweet It

ಚೆನ್ನೈ : ಎಐಎಡಿಎಂಕೆ ಮಾಜಿ ಉಪ ಪ್ರಧಾನಕಾರ್ಯದರ್ಶಿ ಹಾಗೂ ಶಶಿಕಲಾ ಸಂಬಂಧಿ ಟಿ.ಟಿ.ವಿ ದಿನಕರನ್ ಬಣದಲ್ಲಿ ಗುರುತಿಸಿಕೊಂಡು ತಮಿಳುನಾಡು ಸಿಎಂ ಇ.ಪಳನಿಸಾಮಿ ಬಹುಮತ ಸಾಬೀತಿಗೆ ರಾಜಕೀಯ ಚದುರಂಗದ ದಾಳಗಳಾಗಿ ಮಡಿಕೇರಿಯ ರೆಸಾರ್ಟ್‍ಗಳಲ್ಲಿ ಮೋಜು-ಮಸ್ತಿಯಲ್ಲಿದ್ದ 18 ಶಾಸಕರನ್ನು ವಿಧಾನಸಭೆ ಸ್ಪೀಕರ್ ಪಿ.ಧನಪಾಲ್ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಪಳನಿಸಾಮಿ ಮತ್ತು ಪನ್ನೀರ್ ಸೆಲ್ವಂ ಬಣಗಳು ಒಂದಾಗಿ ಸರ್ಕಾರ ರಚಿಸಿದ ನಂತರ ಬಹುಮತದ ಸಂಖ್ಯಾಬಲ ದಕ್ಕಬಾರದೆಂದು ದಿನಕರನ್ ಈ ಶಾಸಕರನ್ನು ರೆಸಾರ್ಟ್ ವಾಸದಲ್ಲಿ ಇರಿಸಿದ್ದರು. ಶುಕ್ರವಾರದೊಳಗೆ ಪಕ್ಷ ವಿರೋಧಿ ಚಟುವಟಿಕೆ ನಿಲ್ಲಿಸಿ ತವರು ಕ್ಷೇತ್ರಗಳಿಗೆ ಮರಳುವಂತೆ ಕಳೆದ ವಾರ ಸ್ಪೀಕರ್ ಸೂಚಿಸಿದ್ದರು. ಈ ಮಾತನ್ನು ಮೀರಿಯೂ ಮಜಾ ಉಡಾಯಿಸುತ್ತಿದ್ದ ಶಾಸಕರು ಈಗ ಅನರ್ಹರಾಗಿದ್ದಾರೆ. ಶಾಸಕರು ಪ್ರಜಾಪ್ರಭುತ್ವದ ಲೇವಡಿ ಮಾಡುತ್ತಿದ್ದಾರೆ ಎಂದು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಮಿಳುನಾಡು ರಾಜಕೀಯದ ಬಗ್ಗೆ ಜನರಲ್ಲಿ ಹೇಸಿಗೆ ಮೂಡಿತ್ತು.

ಸಿಎಂ ಪಳನಿಸಾಮಿ ವಿಶ್ವಾಸಮತ ಯಾಚನೆಗೆ ಮುಂದಾಗಬೇಕೆ ಬೇಡವೇ ಎಂದು ಮದ್ರಾಸ್ ಹೈಕೋರ್ಟ್ ಇನ್ನೂ ನಿರ್ಧರಿಸಬೇಕಿದೆ.

ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ಮತ್ತು ದಿನಕರನ್ ಬೆಂಬಲಿತ ಶಾಸಕರೊಂದಿಗೆ ಕೆಲ ವಾರಗಳ ಹಿಂದೆ ತಮಿಳುನಾಡು ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಭೇಟಿ ಮಾಡಿ ಸಿಎಂ ಪಳನಿಗೆ ವಿಶ್ವಾಸಮತ ಸಾಬೀತಿಗೆ ಸೂಚಿಸುವಂತೆ ಮನವಿ ಸಲ್ಲಿಸಿದ್ದರು.

  • Share On Facebook
  • Tweet It


- Advertisement -
aiadmkdhanpaldinakarangovernormlasasikalaspeakertamilnaduttvvidyasagar


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Tulunadu News March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
You may also like
ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!
October 7, 2017
ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!
October 5, 2017
ಜಯಾ ಸಾವಿನ ಮಹಾರಹಸ್ಯ ಸ್ಫೋಟ!
September 24, 2017
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search