• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೆಸಾರ್ಟ್ ಮೋಜಿನಲ್ಲಿರುವ 18 ಎಐಎಡಿಎಂಕೆ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

TNN Correspondent Posted On September 18, 2017
0


0
Shares
  • Share On Facebook
  • Tweet It

ಚೆನ್ನೈ : ಎಐಎಡಿಎಂಕೆ ಮಾಜಿ ಉಪ ಪ್ರಧಾನಕಾರ್ಯದರ್ಶಿ ಹಾಗೂ ಶಶಿಕಲಾ ಸಂಬಂಧಿ ಟಿ.ಟಿ.ವಿ ದಿನಕರನ್ ಬಣದಲ್ಲಿ ಗುರುತಿಸಿಕೊಂಡು ತಮಿಳುನಾಡು ಸಿಎಂ ಇ.ಪಳನಿಸಾಮಿ ಬಹುಮತ ಸಾಬೀತಿಗೆ ರಾಜಕೀಯ ಚದುರಂಗದ ದಾಳಗಳಾಗಿ ಮಡಿಕೇರಿಯ ರೆಸಾರ್ಟ್‍ಗಳಲ್ಲಿ ಮೋಜು-ಮಸ್ತಿಯಲ್ಲಿದ್ದ 18 ಶಾಸಕರನ್ನು ವಿಧಾನಸಭೆ ಸ್ಪೀಕರ್ ಪಿ.ಧನಪಾಲ್ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಪಳನಿಸಾಮಿ ಮತ್ತು ಪನ್ನೀರ್ ಸೆಲ್ವಂ ಬಣಗಳು ಒಂದಾಗಿ ಸರ್ಕಾರ ರಚಿಸಿದ ನಂತರ ಬಹುಮತದ ಸಂಖ್ಯಾಬಲ ದಕ್ಕಬಾರದೆಂದು ದಿನಕರನ್ ಈ ಶಾಸಕರನ್ನು ರೆಸಾರ್ಟ್ ವಾಸದಲ್ಲಿ ಇರಿಸಿದ್ದರು. ಶುಕ್ರವಾರದೊಳಗೆ ಪಕ್ಷ ವಿರೋಧಿ ಚಟುವಟಿಕೆ ನಿಲ್ಲಿಸಿ ತವರು ಕ್ಷೇತ್ರಗಳಿಗೆ ಮರಳುವಂತೆ ಕಳೆದ ವಾರ ಸ್ಪೀಕರ್ ಸೂಚಿಸಿದ್ದರು. ಈ ಮಾತನ್ನು ಮೀರಿಯೂ ಮಜಾ ಉಡಾಯಿಸುತ್ತಿದ್ದ ಶಾಸಕರು ಈಗ ಅನರ್ಹರಾಗಿದ್ದಾರೆ. ಶಾಸಕರು ಪ್ರಜಾಪ್ರಭುತ್ವದ ಲೇವಡಿ ಮಾಡುತ್ತಿದ್ದಾರೆ ಎಂದು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಮಿಳುನಾಡು ರಾಜಕೀಯದ ಬಗ್ಗೆ ಜನರಲ್ಲಿ ಹೇಸಿಗೆ ಮೂಡಿತ್ತು.

ಸಿಎಂ ಪಳನಿಸಾಮಿ ವಿಶ್ವಾಸಮತ ಯಾಚನೆಗೆ ಮುಂದಾಗಬೇಕೆ ಬೇಡವೇ ಎಂದು ಮದ್ರಾಸ್ ಹೈಕೋರ್ಟ್ ಇನ್ನೂ ನಿರ್ಧರಿಸಬೇಕಿದೆ.

ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ಮತ್ತು ದಿನಕರನ್ ಬೆಂಬಲಿತ ಶಾಸಕರೊಂದಿಗೆ ಕೆಲ ವಾರಗಳ ಹಿಂದೆ ತಮಿಳುನಾಡು ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಭೇಟಿ ಮಾಡಿ ಸಿಎಂ ಪಳನಿಗೆ ವಿಶ್ವಾಸಮತ ಸಾಬೀತಿಗೆ ಸೂಚಿಸುವಂತೆ ಮನವಿ ಸಲ್ಲಿಸಿದ್ದರು.

0
Shares
  • Share On Facebook
  • Tweet It


aiadmkdhanpaldinakarangovernormlasasikalaspeakertamilnaduttvvidyasagar


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
You may also like
ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!
October 7, 2017
ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!
October 5, 2017
ಜಯಾ ಸಾವಿನ ಮಹಾರಹಸ್ಯ ಸ್ಫೋಟ!
September 24, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search