• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೌರಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಸೋನಿಯಾ ರಾಹುಲ್, ಯೆಚೂರಿ ವಿರುದ್ಧ ದಾವೆ

TNN Correspondent Posted On September 20, 2017


  • Share On Facebook
  • Tweet It

ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಹಿಂದೆ ಆರೆಸ್ಸೆಸ್ ಕೈವಾಡ ಇದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಮುಂಬೈನಲ್ಲಿರುವ ಆರೆಸ್ಸೆಸ್ ಕಾರ್ಯಕರ್ತ ಹಾಗೂ ವಕೀಲ ಧ್ರುತಿಮನ್ ಜೋಷಿ ದೂರು ನೀಡಿದ್ದಾರೆ.

ನಿರಾಧಾರವಾಗಿ ಆರೋಪ ಮಾಡುವ ಮೂಲಕ ಈ ಪ್ರಮುಖ ರಾಜಕಾರಣಿಗಳು ಸಂಘಟನೆಯ ಹೆಸರಿಗೆ ಕಪ್ಪು ಮಸಿ ಬಳಿಯಲು ಯತ್ನಿಸಿದ್ದಾರೆ. ಇದರಿಂದ ಸಾರ್ವಜನಿಕವಾಗಿ ಸಂಘಟನೆಗೆ ಅವಮಾನವಾಗಿದೆ. ಹಾಗಾಗಿ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕುರ್ಲಾದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇನೆ ಎಂದು ಜೋಷಿ ದಾವೆ ಹೂಡಿದ ಬಳಿಕ ಮಾಧ್ಯಮದವರಿಗೆ ತಿಳಿಸಿದ್ದಾರೆ.

“ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ಯಾರು ಏನು ಬೇಕಾದರೂ ಮಾಡಿಕೊಳ್ಳಲಿ, ಕಾನೂನಾತ್ಮಕವಾಗಿಯೇ ನಾನು ಹೋರಾಡುತ್ತೇನೆ” ಎಂದು ಸೀತಾರಾಮ್ ಯೆಚೂರಿ ಪ್ರತಿಕ್ರಿಯಿಸಿದ್ದಾರೆ.

ಗೌರಿ ಹತ್ಯೆ ಬಳಿಕ, “ಆರೆಸ್ಸೆಸ್, ಬಿಜೆಪಿಯನ್ನು ವಿರೋಧಿಸಿದರೆ ಸಾವೇ ಗತಿ’ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಸೋನಿಯಾ ಗಾಂಧಿ, ಸೀತಾರಾಮ್ ಯೆಚೂರಿ ಸಹ ಇದೇ ಧಾಟಿಯಲ್ಲಿ ಹೇಳಿಕೆ ನೀಡಿದ್ದರು.

  • Share On Facebook
  • Tweet It


- Advertisement -


Trending Now
ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
Tulunadu News December 6, 2023
9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
Tulunadu News December 6, 2023
Leave A Reply

  • Recent Posts

    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
  • Popular Posts

    • 1
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 2
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • 3
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 4
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 5
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search