• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಣೆಯಾಗಿದ್ದ ಐಟಿ ಅಧಿಕಾರಿ ಪುತ್ರ ಶರತ್ ಶವವಾಗಿ ಪತ್ತೆ

TNN Correspondent Posted On September 22, 2017
0


0
Shares
  • Share On Facebook
  • Tweet It

ಬೆಂಗಳೂರು: ನಾಪತ್ತೆಯಾಗಿದ್ದ ಐಟಿ ಇಲಾಖೆ ಅಧಿಕಾರಿ ಪುತ್ರ ಶರತ್ ಶುಕ್ರವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಈಡುಮಾಡಿದೆ. ಅಲ್ಲದೆ ಹಣಕ್ಕಾಗಿ ಶರತ್ ಸ್ನೇಹಿತರೇ ಅವರನ್ನು ಅಪಹರಿಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭಿಸಿದೆ.

ಕೆಲ ದಿನಗಳ ಹಿಂದೆ ಮನೆಯಿಂದ ಹೊರಗೆ ಹೋಗಿದ್ದ ಶರತ್ ಮನೆಗೆ ಬಂದಿರಲಿಲ್ಲ. ಈಗ ಕೆಂಗೇರಿ ಬಳಿಯ ದೊಡ್ಡ ಆಲದ ಮರ ಸಮೀಪದ ರಾಮೋಹಳ್ಳಿ ಕರೆಯಲ್ಲಿ ಶರತ್ ಶವ ಸಿಕ್ಕಿದೆ.

ಕೆರೆಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಣಕ್ಕಾಗಿ ಅಪಹರಿಸಿ, ಕೊಲೆ ಮಾಡಿ ಕೆರೆಯಲ್ಲಿ ಎಸೆದು ಹೋದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಲ್, ವಿನಯ್, ವಿಕ್ಕಿ, ಕರ್ಣ ಹಾಗೂ ಕಿರಣ್ ಬಂಧಿತರು ಎಂದು ಮೂಲಗಳು ತಿಳಿಸಿವೆ..

ಹೆಬ್ಬಾಳದ ಆದಾಯ ತೆರಿಗೆ ಕಚೇರಿಯಲ್ಲಿ ನಿರಂಜನ್ ಎಂಬವರು ಕೆಲಸ ನಿರ್ವಹಿಸುತ್ತಿದ್ದು ಉಳ್ಳಾಲದಲ್ಲಿ ವಾಸಿಸುತ್ತಿದ್ದಾರೆ. ಅವರ ಪುತ್ರ ಶರತ್ ಹೊಸ ಬೈಕ್ ಖರೀದಿಸಿದ ಕಾರಣ ಸೆ.12ರಂದು ಸಂಜೆ ಗೆಳೆಯರಿಗೆ ಸಿಹಿ ಹಂಚಿ ಬರುವೆ ಎಂದು ಹೋಗಿದ್ದ. ಬಳಿಕ ತಡರಾತ್ರಿಯಾದರೂ ಮನೆಗೆ ಬಂದಿರಲಿಲ್ಲ.

ನಂತರ ಶರತ್ ಮಾತನಾಡುತ್ತಿದ್ದ ವಿಡಿಯೋ ಒಂದು ಕುಟುಂಬಸ್ಥರಿಗೆ ರವಾನೆಯಾಗಿದ್ದು, ಅದರಲ್ಲಿ ಶರತ್, ತನ್ನನ್ನು ಯಾರೋ ಅಪಹರಣ ಮಾಡಿದ್ದು, 50 ಲಕ್ಷ ರು. ಬೇಡಿಕೆ ಇಟ್ಟಿದ್ದಾರೆ. ಪೊಲೀಸರಿಗೆ ದೂರು ನೀಡದೆ, ಹಣ ಕೊಟ್ಟು ಬಿಡಿಸಿಕೊಳ್ಳಿ ಎಂದು ತಿಳಿಸಿದ್ದರು.

ಆದರೂ ಅವರ ತಂದೆ ಸೆ.14ರಂದು ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ ಹಿನ್ನೆಲೆಯಲ್ಲಿ ಶರತ್ ಅವರನ್ನು ಕೊಲೆ ಮಾಡಿ ಕೆರೆಗೆ ಎಸೆದಿದ್ದಾರೆ ಎಂದು ತಿಳಿದುಬಂದಿದೆ.

 

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search