• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಣೆಯಾಗಿದ್ದ ಐಟಿ ಅಧಿಕಾರಿ ಪುತ್ರ ಶರತ್ ಶವವಾಗಿ ಪತ್ತೆ

TNN Correspondent Posted On September 22, 2017


  • Share On Facebook
  • Tweet It

ಬೆಂಗಳೂರು: ನಾಪತ್ತೆಯಾಗಿದ್ದ ಐಟಿ ಇಲಾಖೆ ಅಧಿಕಾರಿ ಪುತ್ರ ಶರತ್ ಶುಕ್ರವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಈಡುಮಾಡಿದೆ. ಅಲ್ಲದೆ ಹಣಕ್ಕಾಗಿ ಶರತ್ ಸ್ನೇಹಿತರೇ ಅವರನ್ನು ಅಪಹರಿಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭಿಸಿದೆ.

ಕೆಲ ದಿನಗಳ ಹಿಂದೆ ಮನೆಯಿಂದ ಹೊರಗೆ ಹೋಗಿದ್ದ ಶರತ್ ಮನೆಗೆ ಬಂದಿರಲಿಲ್ಲ. ಈಗ ಕೆಂಗೇರಿ ಬಳಿಯ ದೊಡ್ಡ ಆಲದ ಮರ ಸಮೀಪದ ರಾಮೋಹಳ್ಳಿ ಕರೆಯಲ್ಲಿ ಶರತ್ ಶವ ಸಿಕ್ಕಿದೆ.

ಕೆರೆಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಣಕ್ಕಾಗಿ ಅಪಹರಿಸಿ, ಕೊಲೆ ಮಾಡಿ ಕೆರೆಯಲ್ಲಿ ಎಸೆದು ಹೋದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಲ್, ವಿನಯ್, ವಿಕ್ಕಿ, ಕರ್ಣ ಹಾಗೂ ಕಿರಣ್ ಬಂಧಿತರು ಎಂದು ಮೂಲಗಳು ತಿಳಿಸಿವೆ..

ಹೆಬ್ಬಾಳದ ಆದಾಯ ತೆರಿಗೆ ಕಚೇರಿಯಲ್ಲಿ ನಿರಂಜನ್ ಎಂಬವರು ಕೆಲಸ ನಿರ್ವಹಿಸುತ್ತಿದ್ದು ಉಳ್ಳಾಲದಲ್ಲಿ ವಾಸಿಸುತ್ತಿದ್ದಾರೆ. ಅವರ ಪುತ್ರ ಶರತ್ ಹೊಸ ಬೈಕ್ ಖರೀದಿಸಿದ ಕಾರಣ ಸೆ.12ರಂದು ಸಂಜೆ ಗೆಳೆಯರಿಗೆ ಸಿಹಿ ಹಂಚಿ ಬರುವೆ ಎಂದು ಹೋಗಿದ್ದ. ಬಳಿಕ ತಡರಾತ್ರಿಯಾದರೂ ಮನೆಗೆ ಬಂದಿರಲಿಲ್ಲ.

ನಂತರ ಶರತ್ ಮಾತನಾಡುತ್ತಿದ್ದ ವಿಡಿಯೋ ಒಂದು ಕುಟುಂಬಸ್ಥರಿಗೆ ರವಾನೆಯಾಗಿದ್ದು, ಅದರಲ್ಲಿ ಶರತ್, ತನ್ನನ್ನು ಯಾರೋ ಅಪಹರಣ ಮಾಡಿದ್ದು, 50 ಲಕ್ಷ ರು. ಬೇಡಿಕೆ ಇಟ್ಟಿದ್ದಾರೆ. ಪೊಲೀಸರಿಗೆ ದೂರು ನೀಡದೆ, ಹಣ ಕೊಟ್ಟು ಬಿಡಿಸಿಕೊಳ್ಳಿ ಎಂದು ತಿಳಿಸಿದ್ದರು.

ಆದರೂ ಅವರ ತಂದೆ ಸೆ.14ರಂದು ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ ಹಿನ್ನೆಲೆಯಲ್ಲಿ ಶರತ್ ಅವರನ್ನು ಕೊಲೆ ಮಾಡಿ ಕೆರೆಗೆ ಎಸೆದಿದ್ದಾರೆ ಎಂದು ತಿಳಿದುಬಂದಿದೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search