• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರ ಭಾರತ-ಪಾಕಿಸ್ತಾನದ ಮಾತುಕತೆಗೆ ಬಿಟ್ಟದ್ದು, ತಲೆ ಹಾಕಲ್ಲ: ಚೀನಾ

TNN Correspondent Posted On September 23, 2017


  • Share On Facebook
  • Tweet It

 

>> ಪಾಕ್ ಕೈಗೊಂಬೆಯಂತೆ ವರ್ತಿಸಿದ ಒಐಸಿಗೆ ಮುಖಭಂಗ

>> ಜಾಗತಿಕವಾಗಿ ಪಾಕಿಸ್ತಾನ ಮರ್ಯಾದೆ ಹರಾಜು

ಬೀಜಿಂಗ್ : ಕಾಶ್ಮೀರ ಸಮಸ್ಯೆ ಭಾರತ ಮತ್ತು ಪಾಕಿಸ್ತಾನಗಳ ಇತಿಹಾಸಕ್ಕೆ ನಂಟು ಹೊಂದಿರುವಂಥದ್ದು. ಹಾಗಾಗಿ ದ್ವಿಪಕ್ಷೀಯ ಮಾತುಕತೆಗಳ ಮೂಲಕ ಉಭಯ ದೇಶಗಳೇ ಪರಿಹರಿಸಕೊಳ್ಳಬೇಕು ಎಂದು ಚೀನಾ ತನ್ನ ಹಸತಕ್ಷೇಪ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇಸ್ಲಾಮಿಕ್ ಸಹಕಾರ ಸಂಸ್ಥೆ (ಒಐಸಿ) ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಸ್ಥಿಕೆಗೆ ಆಗ್ರಹಿಸಲು ಚೀನಾ ಬೆಂಬಲ ಕೋರಿದ್ದಕ್ಕೆ ಹಿಂದೇಟು ಹಾಕುವ ಮೂಲಕ ಚೀನಾ ಪಾಕಿಸ್ತಾನವನ್ನು ಜಾಗತಿಕವಾಗಿ ಒಬ್ಬಂಟಿಯಾಗಿಸಿದೆ.
ಚೀನಾ ವಿದೇಶಾಂಗ ವಕ್ತಾರ ಲು ಕ್ಯಾಂಗ್ ” ಪ್ರಾದೇಶಿಕ ಸ್ಥಿರತೆ ಮತ್ತು ಶಾಂತಿಯನ್ನು ಗಮನದಲ್ಲಿರಿಸಿ ಪಾಕಿಸ್ತಾನ ಇನ್ನೂ ಹೆಚ್ಚು ಮಾತುಕತೆಗೆ ಭಾರತದತ್ತ ಹಸ್ತ ಚಾಚಬೇಕಿದೆ” ಎಂದಿದ್ದಾರೆ.

ನ್ಯೂಯಾರ್ಕ್‍ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಹಲವು ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ಮತ್ತು ರಾಜತಾಂತ್ರಿಕ ಒಪ್ಪಂದಗಳಲ್ಲಿ ಭಾರತ ತಲ್ಲೀನವಾಗಿದ್ದರೆ, ಪಾಕಿಸ್ತಾನ ಪ್ರಧಾನಿ ಮಾತ್ರ ಕಾಶ್ಮೀರ ಮಂತ್ರ ಜಪ ಮಾಡುತ್ತಾ ಭಾರತವನ್ನು ಹಳಿಯುವುದರಲ್ಲಿಯೇ ನಿರತರಾಗಿದ್ದಾರೆ. ವಿಶ್ವಸಂಸ್ಥೆ ಕಾಶ್ಮೀರದಲ್ಲಿ ವೀಕ್ಷಕರನ್ನು ನೇಮಿಸಿ ಭದ್ರತಾ ಮಂಡಳಿಯಿಂದ ನಿಗಾ ಇರಿಸಬೇಕು. ಅಲ್ಲಿ ಭಾರತ ಮಾನವ ಹಕ್ಕು ಉಲ್ಲಂಘಿಸಿದೆ ಎಂದು ಪಾಕ್ ಪ್ರಧಾನಿ ಶಾಹಿದ್ ಖಕ್ವಾನ್ ಅಬ್ಬಾಸಿ ಗುರುವಾರ ಹೇಳಿದ್ದರು. ಇದರ ಬೆನ್ನಲ್ಲೇ 57 ಮುಸ್ಲಿಂ ರಾಷ್ಟ್ರಗಳ ಒಕ್ಕೂಟ ಐಒಸಿ ಕೂಡ ಚೀನಾಕ್ಕೆ ಬೆಂಬಲ ಕೋರಿತ್ತು. ಇದನ್ನು ಚೀನಾ ನಿರಾಕರಿಸಿರುವುದರಿಂದ ಜಾಗತಿಕ ವಿಶ್ವಸಂಸ್ಥೆ ವೇದಿಕೆಯಲ್ಲಿ ಪಾಕಿಸ್ತಾನ ಮಾನ ಮೂರಾಬಟ್ಟೆಯಾಗಿದೆ.

  • Share On Facebook
  • Tweet It


- Advertisement -
abbasichinacpecindiamodipakistanun


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search