• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರ ಭಾರತ-ಪಾಕಿಸ್ತಾನದ ಮಾತುಕತೆಗೆ ಬಿಟ್ಟದ್ದು, ತಲೆ ಹಾಕಲ್ಲ: ಚೀನಾ

TNN Correspondent Posted On September 23, 2017
0


0
Shares
  • Share On Facebook
  • Tweet It

 

>> ಪಾಕ್ ಕೈಗೊಂಬೆಯಂತೆ ವರ್ತಿಸಿದ ಒಐಸಿಗೆ ಮುಖಭಂಗ

>> ಜಾಗತಿಕವಾಗಿ ಪಾಕಿಸ್ತಾನ ಮರ್ಯಾದೆ ಹರಾಜು

ಬೀಜಿಂಗ್ : ಕಾಶ್ಮೀರ ಸಮಸ್ಯೆ ಭಾರತ ಮತ್ತು ಪಾಕಿಸ್ತಾನಗಳ ಇತಿಹಾಸಕ್ಕೆ ನಂಟು ಹೊಂದಿರುವಂಥದ್ದು. ಹಾಗಾಗಿ ದ್ವಿಪಕ್ಷೀಯ ಮಾತುಕತೆಗಳ ಮೂಲಕ ಉಭಯ ದೇಶಗಳೇ ಪರಿಹರಿಸಕೊಳ್ಳಬೇಕು ಎಂದು ಚೀನಾ ತನ್ನ ಹಸತಕ್ಷೇಪ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇಸ್ಲಾಮಿಕ್ ಸಹಕಾರ ಸಂಸ್ಥೆ (ಒಐಸಿ) ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಸ್ಥಿಕೆಗೆ ಆಗ್ರಹಿಸಲು ಚೀನಾ ಬೆಂಬಲ ಕೋರಿದ್ದಕ್ಕೆ ಹಿಂದೇಟು ಹಾಕುವ ಮೂಲಕ ಚೀನಾ ಪಾಕಿಸ್ತಾನವನ್ನು ಜಾಗತಿಕವಾಗಿ ಒಬ್ಬಂಟಿಯಾಗಿಸಿದೆ.
ಚೀನಾ ವಿದೇಶಾಂಗ ವಕ್ತಾರ ಲು ಕ್ಯಾಂಗ್ ” ಪ್ರಾದೇಶಿಕ ಸ್ಥಿರತೆ ಮತ್ತು ಶಾಂತಿಯನ್ನು ಗಮನದಲ್ಲಿರಿಸಿ ಪಾಕಿಸ್ತಾನ ಇನ್ನೂ ಹೆಚ್ಚು ಮಾತುಕತೆಗೆ ಭಾರತದತ್ತ ಹಸ್ತ ಚಾಚಬೇಕಿದೆ” ಎಂದಿದ್ದಾರೆ.

ನ್ಯೂಯಾರ್ಕ್‍ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಹಲವು ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ಮತ್ತು ರಾಜತಾಂತ್ರಿಕ ಒಪ್ಪಂದಗಳಲ್ಲಿ ಭಾರತ ತಲ್ಲೀನವಾಗಿದ್ದರೆ, ಪಾಕಿಸ್ತಾನ ಪ್ರಧಾನಿ ಮಾತ್ರ ಕಾಶ್ಮೀರ ಮಂತ್ರ ಜಪ ಮಾಡುತ್ತಾ ಭಾರತವನ್ನು ಹಳಿಯುವುದರಲ್ಲಿಯೇ ನಿರತರಾಗಿದ್ದಾರೆ. ವಿಶ್ವಸಂಸ್ಥೆ ಕಾಶ್ಮೀರದಲ್ಲಿ ವೀಕ್ಷಕರನ್ನು ನೇಮಿಸಿ ಭದ್ರತಾ ಮಂಡಳಿಯಿಂದ ನಿಗಾ ಇರಿಸಬೇಕು. ಅಲ್ಲಿ ಭಾರತ ಮಾನವ ಹಕ್ಕು ಉಲ್ಲಂಘಿಸಿದೆ ಎಂದು ಪಾಕ್ ಪ್ರಧಾನಿ ಶಾಹಿದ್ ಖಕ್ವಾನ್ ಅಬ್ಬಾಸಿ ಗುರುವಾರ ಹೇಳಿದ್ದರು. ಇದರ ಬೆನ್ನಲ್ಲೇ 57 ಮುಸ್ಲಿಂ ರಾಷ್ಟ್ರಗಳ ಒಕ್ಕೂಟ ಐಒಸಿ ಕೂಡ ಚೀನಾಕ್ಕೆ ಬೆಂಬಲ ಕೋರಿತ್ತು. ಇದನ್ನು ಚೀನಾ ನಿರಾಕರಿಸಿರುವುದರಿಂದ ಜಾಗತಿಕ ವಿಶ್ವಸಂಸ್ಥೆ ವೇದಿಕೆಯಲ್ಲಿ ಪಾಕಿಸ್ತಾನ ಮಾನ ಮೂರಾಬಟ್ಟೆಯಾಗಿದೆ.

0
Shares
  • Share On Facebook
  • Tweet It


- Advertisement -
abbasichinacpecindiamodipakistanun


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search