• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಅವರಿಗೆ ನೋಟ್ಯಂತರ ಪರಿಣಾಮವೇ ಗೊತ್ತಿಲ್ಲ ಎಂದರೆ…

TNN Correspondent Posted On September 23, 2017
0


0
Shares
  • Share On Facebook
  • Tweet It

ನೋಟುಗಳ ಅಮಾನ್ಯೀಕರಣ “ಅನವಶ್ಯಕ ಸಾಹಸ”…

ಕಲಬುರಗಿಯಲ್ಲಿ ಆಗಾಗ ಮಳೆಯಾದರೂ ಬರುತ್ತದೆ, ಆದರೆ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಮಾತುಗಳು ಕಲಬುರಗಿ ಮಳೆಗಿಂತ ವಿರಳ…

ಆದರೂ, ವರ್ಷದಲ್ಲೊಮ್ಮೆ ಬಾಯಿಬಿಟ್ಟರೆ, ಮೇಲಿನಂತ ಸಾಲುಗಳು ಹೊರಬೀಳುತ್ತವೆ…

ನಿಜವಾಗಿಯೂ ನೋಟು ನಿಷೇಧ ಅನವಶ್ಯಕ ಸಾಹಸವೇ? ಇದರಿಂದ ಯಾವುದೇ ಪ್ರಯೋಜನವಾಗಿಲ್ಲವೇ? ಭ್ರಷ್ಟರಿಗೆ ಬಿಸಿ ಮುಟ್ಟಿಲ್ಲವೇ? ಸಕಾರಾತ್ಮಕ ಪರಿಣಾಮ ಆಗಿಲ್ಲವೇ? ಮನಮೋಹನ್ ಸಿಂಗ್ ಅವರೇ, ಇಲ್ಲಿದೆ ನೋಡಿ ಅಂಕಿ-ಅಂಶ…

ವಿತ್ತೀಯ ಸಮೀಕ್ಷೆ ಪ್ರಕಾರ, 2016-17ನೇ ಸಾಲಿನಲ್ಲಿ 5.4 ಲಕ್ಷ ನೂತನ ತೆರಿಗೆದಾರರು ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೇಳಿ, ತೆರಿಗಾದರರ ಹಣದಿಂದ ಯಾರಿಗೆ ಲಾಭ? ಅದು ಯಾರ ಖಾತೆಗೆ ಜಮೆ ಆಗುತ್ತದೆ? ನೋಟು ನಿಷೇಧ ಮಾಡದಿದ್ದರೆ ಇಷ್ಟು ತೆರಿಗೆದಾರರು ನೋಂದಣಿ ಮಾಡಿಕೊಳ್ಳುತ್ತಿದ್ದರೆ?

ನೋಟ್ಯಂತರ ಬಳಿಕ ಶಂಕಿತ ಪಟ್ಟಿಗೆ ಸೇರಿಸಿದ 3 ಲಕ್ಷ ಕಂಪನಿಗಳಲ್ಲಿ 2.1 ಲಕ್ಷ ಕಂಪನಿಗಳು ನಕಲಿ ಎಂದು ತಿಳಿದುಬಂದಿದೆ. ಅವುಗಳ ನೋಂದಣಿಯನ್ನೂ ಸರಕಾರ ರದ್ದುಗೊಳಿಸಿದೆ. ಇದು ನೋಟು ನಿಷೇಧದ ಸಕಾರಾತ್ಮಕ ಪರಿಣಾಮವಲ್ಲವೇ? ಈ ಕಂಪನಿಗಳು ಬರೋಬ್ಬರಿ 13 ಸಾವಿರ ಕೋಟಿ ರೂಪಾಯಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದು ನಿಮಗೆ ಗೊತ್ತೇ? ಇದರಿಂದ ಯಾರಿಗೆ ನಷ್ಟವಾಗುತ್ತಿತ್ತು ಎಂಬುದು ತಿಳಿದಿದೆಯಾ?

ನೋಟು ಅಮಾನ್ಯೀಕರಣದ ಬಳಿಕ ಬ್ಯಾಂಕಿಗೆ ಠೇವಣಿಯಾದ 15.28 ಲಕ್ಷ ಕೋಟಿ ರೂಪಾಯಿಯಲ್ಲಿ ಎಲ್ಲವೂ ಸಕಾರಾತ್ಮಕ ಹಾದಿಯಲ್ಲಿ ಗಳಿಸಿದ ಹಣವಲ್ಲ. ಅದರ ಮೇಲೂ ನಿಗಾ ಇಟ್ಟಿದ್ದೇವೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿಯೇ ಹೇಳಿದ್ದಾರೆ. ಈ ಕಪ್ಪು ಹಣ ಬ್ಯಾಂಕಿಗೆ ಠೇವಣಿಯಾಗಿದ್ದು ನೋಟ್ಯಂತರದಿಂದಲೇ ಅಲ್ಲವೇ ಮನಮೋಹನ್ ಸಿಂಗ್ ಅವರೇ?

ಬಾಯಿಬಿಟ್ಟರೆ ನೋಟು ನಿಷೇಧದಿಂದ ಜಿಡಿಪಿ ಕುಸಿಯಿತು ಎಂದು ಹೇಳುತ್ತೀರಿ. ಆದರೆ, ಅದೇ ನರೆಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಜಿಡಿಪಿ ಔನ್ನತ್ಯಕ್ಕೇರಿದ್ದನ್ನು ಎಂದಾದರೂ ಹೇಳಿದ್ದೀರಾ? ನಿಮ್ಮ ಅವಧಿಯಲ್ಲಿ ಜಿಡಿಪಿ ಎಷ್ಟು ತಳ ಕಂಡಿತ್ತು ಎಂಬುದು ನಮಗೆ ಗೊತ್ತಿಲ್ಲ ಎಂದು ಭಾವಿಸಿದಿರಾ?

ಅಂಕಿ ಅಂಶಗಳ ಆಧಾರದ ಮೇಲೆ ನಿಮಗೆ ನೋಟು ನಿಷೇಧದ ಬಗ್ಗೆ ಗೊತ್ತಾಗಲಿಲ್ಲ ಎಂದರೆ, ಈ ನಿರ್ಧಾರ ಛಾತಿಯಿಂದ ಕೂಡಿದೆ ಎಂದು ವಿಶ್ವವೇ ಹಾಡಿಹೊಗಳಿದೆ. ಇಡೀ ದೇಶದ ಜನ ಸ್ವೀಕರಿಸಿದ್ದಾರೆ. ಆದರೂ ನೀವು ಅಪದ್ಧ ನುಡಿದಿದ್ದೀರಿ. ಇರಲಿ, ಮಾತೇ ಆಡದ ನೀವು ಬಾಯಿಬಿಟ್ಟಿದ್ದು ಯಾರ ಮನವೊಲಿಸಲು ಎಂದು ಗೊತ್ತು. ಆದರೆ, ನಿಮ್ಮಂಥ ಅರ್ಥಶಾಸ್ತ್ರಜ್ಞರಿಗೇ ಇದೆಲ್ಲ ಹೇಳಬೇಕಾಯಿತಲ್ಲ ಎಂಬ ಬೇಸರ ಕಾಡುತ್ತಿದೆ ಅಷ್ಟೆ.

-ರಾಕೇಶ್ ಹೆಗಡೆ, ಮಂಗಳೂರು

 

 

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search