• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಯಾವುದೋ ಪ್ರಶ್ನೆಗೆ ಇನ್ಯಾವುದೋ ಉತ್ತರ ನೀಡುವ ರಾಹುಲ್ ಗಾಂಧಿಯಂತೆ ಆಗಿ ಬಿಟ್ರಾ ರಮಾನಾಥ ರೈ ಗಳು?

shrinatha maane Posted On September 23, 2017
0


0
Shares
  • Share On Facebook
  • Tweet It

ಭಾರತದ ಪ್ರಥಮ ಪ್ರಧಾನಿ ಎಂಬ ಮಹತ್ತರ ಜವಾಬ್ದಾರಿಯನ್ನು ಅರಿಯದೇ ತನ್ನ ಮೂರ್ಖತನದ ರೊಮ್ಯಾಂಟಿಕ್ ಐಡಿಯಾಗಳಿಂದ (ಇತಿಹಾಸಕಾರರೇ ಹೇಳಿರುವಂತೆ) ಚೀನಾ ಮುಂದೆ ತಲೆ ತಗ್ಗಿಸಿ ನಿಲ್ಲುವಂತೆ ಮಾಡಿದರಲ್ಲಾ ನೆಹರೂ! ಭಾರತೀಯರು ಎಷ್ಟು ನೋವನುಭವಿಸಿರಬೇಕು?
ಚಕ್ರವರ್ತಿಯವರು ಇದೇ ವಿಚಾರಕ್ಕೆ ಸಂಬಂಧಿಸಿದಂತೆ “ನೆಹರೂ ಪರದೆ ಸರಿಯಿತು” ಎಂಬ ಪುಸ್ತಕದಲ್ಲಿ ಹಾಗೂ ತಮ್ಮ ಭಾಷಣಗಳಲ್ಲಿ ನೆಹರೂ ಅವರನ್ನು ಪ್ರಶ್ನಿಸುತ್ತಾರೆಯೇ ಹೊರತು ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ ಪಾತ್ರದ ಬಗ್ಗೆಯಲ್ಲ.
ಚಕ್ರವರ್ತಿ ಸೂಲಿಬೆಲೆಯವರು ನೆಹರೂ ಆಡಳಿತದ ವೈಫಲ್ಯದಿಂದ ಭಾರತ ಎದುರಿಸಿದ ಅವಮಾನ, ಸಮಸ್ಯೆಗಳ ಉಗಮ, ಅನುಭವಿಸಿದ ನಷ್ಟ, ಕಳೆದುಕೊಂಡ ಭೂಮಿ, ಹೀಗೆ ಪ್ರಮುಖ ವಿಚಾರಗಳ ಬಗ್ಗೆ ಈ ಹಿಂದೆ ಎತ್ತಿರುವ ಪ್ರಶ್ನೆಗಳಿಗೆ ಸಮರ್ಥ ಉತ್ತರ ಕೊಟ್ಟಿದ್ದರೆ ರೈ ಯವರನ್ನು ಮೆಚ್ಚಬಹುದಾಗಿತ್ತು.
https://tulunadunews.com/wp-content/uploads/2017/09/whatsapp-video-2017-09-23-at-19.16.46.mp4
ಆದರೆ ನೆಹರೂ ಅವರನ್ನು ಈ ವಿಷಯದಲ್ಲಿ ಸಮರ್ಥಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದರಿತಿರುವ ರೈ ಯವರು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ನೆಹರೂ ಅವರನ್ನು ಟೀಕಿಸುವವರು ದೇಶದ್ರೋಹಿಗಳು ಎಂದು ಭಾಷಣ ಮಾಡಿ ಮಾಮರವೆಲ್ಲೋ ಕೋಗಿಲೆ ಎಲ್ಲೋ ಎಂಬಂತೆ ಸೇಫ್ ಗೇಮ್ ಆಡಿದ್ದಾರೆ..
ರಮಾನಾಥ ರೈಗಳು ಹೇಳುವ ಪ್ರಕಾರ “ಸ್ವಾತಂತ್ರ್ಯ ಹೋರಾಟಕ್ಕಾಗಿ ಹೋರಾಡಿ ಒಂದೇ ಒಂದು ದಿನ ಜೈಲಿನಲ್ಲಿದ್ದ ವ್ಯಕ್ತಿಯಾದರೂ ಸರಿ, ಅವರನ್ನು ಟೀಕಿಸುವವರು ದೇಶದ್ರೋಹಿಗಳಿಗೆ ಸಮ”.
ಇದು ಖಂಡಿತವಾಗಿಯೂ ಒಪ್ಪಿಕೊಳ್ಳುವ ಮಾತು.ಹಾಗಾದರೆ ವೀರ್ ಸಾವರ್ಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಅಂಡಮಾನಿನ ಜೈಲಿನಲ್ಲಿ ಚಿತ್ರ ಹಿಂಸೆ ಅನುಭವಿಸಿದವರು. ಅಂತಹವರನ್ನು ಟೀಕಿಸುತ್ತಿರುವುದು ಸ್ವತಃ  ಕಾಂಗ್ರೆಸ್ಸಿನ ಯುವರಾಜ ರಾಹುಲ್ ಗಾಂಧಿ. ಇವರಿಗೆ ದೇಶದ್ರೋಹಿಗಳ ಪಟ್ಟಿಯಲ್ಲಿ ಎಷ್ಟನೇ ಸ್ಥಾನ ಕೊಡಬಹುದು?
ಕಮ್ಯೂನಿಸ್ಟ್ ಬುದ್ಧಿಜೀವಿಗಳು ದಿನ ಬೆಳಗಾದರೆ ಸಾವರ್ಕರ್ ಅವರನ್ನು ಟೀಕಿಸುತ್ತಾರೆ. ಈ ದೇಶದ್ರೋಹಿಗಳನ್ನು ಏನು ಮಾಡಬಹುದು?
ರೈ ಯವರೇ ಇಷ್ಟೇ ಆಗಿದ್ದರೆ ನಿಮ್ಮದು ರಾಜಕೀಯ ಅಂದುಕೊಂಡು ಸುಮ್ಮನಾಗಬಹುದಿತ್ತು. ಆದರೆ ಚಕ್ರವರ್ತಿ ಸೂಲಿಬೆಲೆಯವರನ್ನು ಟೀಕಿಸುವ ಭರದಲ್ಲಿ ಕರ್ನಾಟಕ ರಾಜ್ಯದ ಒಂದು ಊರಿನ ಹೆಸರನ್ನು ಅವಮಾನಿಸಿದಿರಿ. ಸಾಲದ್ದಕ್ಕೆ ನೆರೆದಿದ್ದ ಜನರಿಂದಲೂ ಪದೇಪದೇ ಅವಮಾನಿಸಿ ಪ್ರಚಂಡ ದಿಗ್ವಿಜಯ ಸಾಧಿಸಿದಂತೆ ಗೆಲುವಿನ ನಗೆ ಬೀರಿದಿರಿ. ತಮ್ಮ ಹೆಸರು ಬಿ.ರಮಾನಾಥ ರೈ.  “ಬಿ” ಅಂದರೆ ಬೆಳ್ಳಿಪಾಡಿ ಎಂಬ ಊರಿನ ಹೆಸರು. ಅದೇ “ಬಿ”ಯನ್ನು ಉಪಯೋಗಿಸಿ ಅದೆಷ್ಟು ಅವಹೇಳನಕಾರಿ ಪದ ಪ್ರಯೋಗ ನಿಮ್ಮ ವಿರುದ್ಧವೂ ಮಾಡಬಹುದೆಂಬುದನ್ನು ಮರೆತು ಬಿಟ್ರಾ ಹೇಗೆ?
ರಮಾನಾಥ ರೈ ಗಳೇ ಈಗಾಗಲೇ ನಿಮ್ಮ ಹಿಂದೂ ವಿರೋಧಿ ನೀತಿಯಿಂದ ಸ್ವಕ್ಷೇತ್ರದಲ್ಲೇ ಜನ ರೊಚ್ಚಿಗೆದ್ದಿದ್ದಾರೆ. ಅದೂ ಸಾಲದೆಂಬಂತೆ ಸ್ವಪಕ್ಷದವರೇ ನಿಮ್ಮ ಗೃಹಮಂತ್ರಿ ಸ್ಥಾನಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಇವೆಲ್ಲದರ ಪರಿಣಾಮವೋ ಏನೋ, ನಿಮ್ಮನ್ನು ನಾಡಿಗೆ (ಗೃಹ ಸಚಿವ) ತರುವ ಬದಲು ಕಾಡಿನಲ್ಲೇ (ಅರಣ್ಯ ಸಚಿವ) ಇರಿಸಲಾಗಿದೆ.
ಬಂಟ್ವಾಳದ ನಕಲಿ ಹುಲಿ ಆದಷ್ಟು ಶೀಘ್ರದಲ್ಲಿ ವನವಾಸ ಮುಗಿಸಿ ನಾಡಿಗೆ ಬರುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥನೆ..
0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
shrinatha maane April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
shrinatha maane March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search