• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಚಿವ ಖಾದರ್ ಸ್ವಕ್ಷೇತ್ರದಲ್ಲಿ ಜರ್ಮನಿ ಯುವತಿಯ ಅತ್ಯಾಚಾರ ಯತ್ನ

nayak ullal Posted On September 23, 2017
0


0
Shares
  • Share On Facebook
  • Tweet It

ಕರ್ನಾಟಕ ಘನ ಸರಕಾರದ ಆಹಾರ ಸಚಿವ ಯು.ಟಿ.ಖಾದರ್ರ ಸ್ವಕ್ಷೇತ್ರ ಉಳ್ಳಾಲದಲ್ಲಿ ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಜರ್ಮನಿ ಮೂಲದ ಯುವತಿಯೋರ್ವಳನ್ನು ಸಾರ್ವಜನಿಕವಾಗಿ ಅತ್ಯಾಚಾರಗೊಳಿಸಲು ಯತ್ನಿಸಿದ ಅಪ್ರಾಪ್ತ ಬಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ಸಂಜೆ ಕೋಟೆಕಾರು ಪಟ್ಟಣದ ಪಾನೀರು ಎಂಬಲ್ಲಿ ನಡೆದಿದೆ.

ಪಾನೀರು ಚರ್ಚ್ಗೆ ಸಂಬಂಧಿಸಿದ ಮರ್ಸಿ ಡೇ ಅನಾಥ ಮಕ್ಕಳ ಆಶ್ರಮಕ್ಕೆ ಅಧ್ಯಯನ ನಡೆಸಲು ಬಂದಿದ್ದ ಜರ್ಮನ್ ಮೂಲದ ಚೈಲೊಟ್ಟೊ ಇಟರ್(18)ಎಂಬ ಯುವತಿಯೇ ಅತ್ಯಾಚಾರ ಯತ್ನಕ್ಕೊಳಗಾದವಳು.ಶನಿವಾರ ಸಂಜೆ ಪಾನೀರಿನ ರಸ್ತೆಯಲ್ಲಿ ಯುವತಿ ನಡೆದುಕೊಂಡು ಆಶ್ರಮಕ್ಕೆ ತೆರಳುತ್ತಿದ್ದ ಸಂಧರ್ಭದಲ್ಲಿ ಪಾವೂರು ನಿವಾಸಿ 13 ರ ಅಪ್ರಾಪ್ತ ಬಾಲಕ ಯುವತಿಯ ಮೇಲೆರಗಿ ಅತ್ಯಾಚಾರಕ್ಕೆ ಯತ್ನಿಸಿದ್ದು ಈ ವೇಳೆ ಗಾಬರಿಗೊಂಡ ವಿದೇಶಿ ಯುವತಿ ಬಾಲಕನ ಹಿಡಿತದಿಂದ ತಪ್ಪಿಸಿ ಆಶ್ರಮಕ್ಕೆ ಓಡಿದ್ದಾಳೆ.ಸ್ಥಳದಲ್ಲಿದ್ದ ಸಾರ್ವಜನಿಕರು ಬಾಲಕನಿಗೆ ತಪರಾಕಿ ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಬಾಲಕ ಈಗ ಉಳ್ಳಾಲ ಪೊಲೀಸರ ವಶದಲ್ಲಿದ್ದು,ಅತ್ಯಾಚಾರ ಯತ್ನಕ್ಕೊಳಗಾದ ವಿದೇಶಿ ಯುವತಿ ಇನ್ನಷ್ಟೆ ದೂರು ದಾಖಲು ಮಾಡಬೇಕಾಗಿದೆ. ಖಾದರ್ ಅವರು ಪ್ರತಿನಿಧಿಸುತ್ತಿರುವ ಉಳ್ಳಾಲ ಕ್ಷೇತ್ರದಲ್ಲಿ ಈಗಾಗಲೇ ಅನೇಕ ಮತೀಯ ಗಲಭೆಗಳು ಉಂಟಾಗಿ ಕೊಲೆಗಳಾಗಿದ್ದು.

ವಿದೇಶಿ ಯುವತಿಯೋರ್ವಳನ್ನು ಅಲ್ಪಸಂಖ್ಯಾತ ಅಪ್ರಾಪ್ತನೋರ್ವ ಹಾಡು ಹಗಲೇ ಸಾರ್ವಜನಿಕವಾಗಿ ಅತ್ಯಾಚಾರಗೈಯಲು ಯತ್ನಿಸಿದ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು ಸ್ವತ: ಸಚಿವ ಖಾದರ್ಗೆ ಮುಜುಗರ ಉಂಟು ಮಾಡಿದೆ.

0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
nayak ullal July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
nayak ullal July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search