• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಚಿವ ಖಾದರ್ ಸ್ವಕ್ಷೇತ್ರದಲ್ಲಿ ಜರ್ಮನಿ ಯುವತಿಯ ಅತ್ಯಾಚಾರ ಯತ್ನ

nayak ullal Posted On September 23, 2017
0


0
Shares
  • Share On Facebook
  • Tweet It

ಕರ್ನಾಟಕ ಘನ ಸರಕಾರದ ಆಹಾರ ಸಚಿವ ಯು.ಟಿ.ಖಾದರ್ರ ಸ್ವಕ್ಷೇತ್ರ ಉಳ್ಳಾಲದಲ್ಲಿ ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಜರ್ಮನಿ ಮೂಲದ ಯುವತಿಯೋರ್ವಳನ್ನು ಸಾರ್ವಜನಿಕವಾಗಿ ಅತ್ಯಾಚಾರಗೊಳಿಸಲು ಯತ್ನಿಸಿದ ಅಪ್ರಾಪ್ತ ಬಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ಸಂಜೆ ಕೋಟೆಕಾರು ಪಟ್ಟಣದ ಪಾನೀರು ಎಂಬಲ್ಲಿ ನಡೆದಿದೆ.

ಪಾನೀರು ಚರ್ಚ್ಗೆ ಸಂಬಂಧಿಸಿದ ಮರ್ಸಿ ಡೇ ಅನಾಥ ಮಕ್ಕಳ ಆಶ್ರಮಕ್ಕೆ ಅಧ್ಯಯನ ನಡೆಸಲು ಬಂದಿದ್ದ ಜರ್ಮನ್ ಮೂಲದ ಚೈಲೊಟ್ಟೊ ಇಟರ್(18)ಎಂಬ ಯುವತಿಯೇ ಅತ್ಯಾಚಾರ ಯತ್ನಕ್ಕೊಳಗಾದವಳು.ಶನಿವಾರ ಸಂಜೆ ಪಾನೀರಿನ ರಸ್ತೆಯಲ್ಲಿ ಯುವತಿ ನಡೆದುಕೊಂಡು ಆಶ್ರಮಕ್ಕೆ ತೆರಳುತ್ತಿದ್ದ ಸಂಧರ್ಭದಲ್ಲಿ ಪಾವೂರು ನಿವಾಸಿ 13 ರ ಅಪ್ರಾಪ್ತ ಬಾಲಕ ಯುವತಿಯ ಮೇಲೆರಗಿ ಅತ್ಯಾಚಾರಕ್ಕೆ ಯತ್ನಿಸಿದ್ದು ಈ ವೇಳೆ ಗಾಬರಿಗೊಂಡ ವಿದೇಶಿ ಯುವತಿ ಬಾಲಕನ ಹಿಡಿತದಿಂದ ತಪ್ಪಿಸಿ ಆಶ್ರಮಕ್ಕೆ ಓಡಿದ್ದಾಳೆ.ಸ್ಥಳದಲ್ಲಿದ್ದ ಸಾರ್ವಜನಿಕರು ಬಾಲಕನಿಗೆ ತಪರಾಕಿ ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಬಾಲಕ ಈಗ ಉಳ್ಳಾಲ ಪೊಲೀಸರ ವಶದಲ್ಲಿದ್ದು,ಅತ್ಯಾಚಾರ ಯತ್ನಕ್ಕೊಳಗಾದ ವಿದೇಶಿ ಯುವತಿ ಇನ್ನಷ್ಟೆ ದೂರು ದಾಖಲು ಮಾಡಬೇಕಾಗಿದೆ. ಖಾದರ್ ಅವರು ಪ್ರತಿನಿಧಿಸುತ್ತಿರುವ ಉಳ್ಳಾಲ ಕ್ಷೇತ್ರದಲ್ಲಿ ಈಗಾಗಲೇ ಅನೇಕ ಮತೀಯ ಗಲಭೆಗಳು ಉಂಟಾಗಿ ಕೊಲೆಗಳಾಗಿದ್ದು.

ವಿದೇಶಿ ಯುವತಿಯೋರ್ವಳನ್ನು ಅಲ್ಪಸಂಖ್ಯಾತ ಅಪ್ರಾಪ್ತನೋರ್ವ ಹಾಡು ಹಗಲೇ ಸಾರ್ವಜನಿಕವಾಗಿ ಅತ್ಯಾಚಾರಗೈಯಲು ಯತ್ನಿಸಿದ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು ಸ್ವತ: ಸಚಿವ ಖಾದರ್ಗೆ ಮುಜುಗರ ಉಂಟು ಮಾಡಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
nayak ullal March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
nayak ullal March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search