• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮದರಸಾಗಳಲ್ಲಿ ಪ್ರತಿದಿನ ರಾಷ್ಟ್ರಗೀತೆ ಕಡ್ಡಾಯ: ಮಧ್ಯಪ್ರದೇಶ ಸರಕಾರ

TNN Correspondent Posted On September 24, 2017
0


0
Shares
  • Share On Facebook
  • Tweet It

ಭೋಪಾಲ್: ಸ್ವಾತಂತ್ರ್ಯ ದಿನಾಚರಣೆಯಂದು ಉತ್ತರಪ್ರದೇಶದ ಎಲ್ಲ ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಡಬೇಕು ಎಂದು ಆದೇಶ ಹೊರಡಿಸಿದ್ದ ಬೆನ್ನಲ್ಲೇ, ಮಧ್ಯಪ್ರದೇಶದ ಮದರಸಾಗಳಲ್ಲಿ ಪ್ರತಿನಿತ್ಯ ರಾಷ್ಟ್ರ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ ಹಾಡಬೇಕು ಎಂದು ರಾಜ್ಯ ಶಿಕ್ಷಣ ಸಚಿವ ವಿಜಯ್ ಶಾ ಹೇಳಿದ್ದಾರೆ.

ಮದರಸಾ ಮಂಡಳಿಯ 20ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿ, “ಎಲ್ಲ ಮದರಸಾಗಳಲ್ಲೂ ರಾಷ್ಟ್ರಗೀತೆ ಹಾಗೂ ಧ್ವಜಾರೋಹಣ ಮಾಡಬೇಕು. ಸರಕಾರಿ ಶಾಲೆಗಳಲ್ಲಿ ಈ ನಿಯಮ ಜಾರಿಯಲ್ಲಿದ್ದು, ಮದರಸಾಗಳಲ್ಲೂ ಪಾಲಿಸಬೇಕು’ ಎಂದಿದ್ದಾರೆ.

ಇದು ರಾಷ್ಟ್ರದ ಘನತೆಯ ವಿಷಯವಾಗಿದ್ದು, ರಾಷ್ಟ್ರಗೀತೆ ಹಾಡಿಸುವ ಮೂಲಕ ಮಕ್ಕಳಲ್ಲಿ ದೇಶಭಕ್ತಿ ಮೂಡಿಸಬೇಕು. ಇಲ್ಲದಿದ್ದರೆ ಇದು ದೇಶಕ್ಕೆ ಮಾಡುವ ಮೋಸವಾಗುತ್ತದೆ ಎಂದು ಹೇಳಿದ್ದಾರೆ.

ಶೈಕ್ಷಣಿಕ ಏಳಿಗೆ ದೃಷ್ಟಿಯಿಂದ ಮದರಸಾಗಳಲ್ಲಿ ಕಂಪ್ಯೂಟರ್ ಶಿಕ್ಷಣ ನೀಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 15ರಂದು ಸಹ ಉತ್ತರಪ್ರದೇಶದಲ್ಲಿ ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜಾರೋಹಣ ಕಡ್ಡಾಯಗೊಳಿಸಲಾಗಿತ್ತು. ಬಹುತೇಕ ಮದರಸಾಗಳಲ್ಲಿ ಅದೇಶ ಪಾಲಿಸಿದ್ದರೆ, ಕೆಲವೊಂದು ಉಲ್ಲಂಘಿಸಿದ್ದವು.

 

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search