• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹೇಗಿದ್ದ ಕಾಶ್ಮೀರ, ಹೇಗಾಗುತ್ತಿದೆ ಗೊತ್ತಾ?

TNN Correspondent Posted On September 24, 2017
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದಮೇಲೆ ಕಾಶ್ಮೀರದ ಚಹರೆಯೇ ಬದಲಾಗುತ್ತಿದೆ. ಪಾಕಿಸ್ತಾನಿ ಉಗ್ರರ ಉಪಟಳ ಕಡಿಮೆಯಾಗಿದೆ. ಕದನ ವಿರಾಮ ಉಲ್ಲಂಘನೆಯೂ ಕುಸಿದಿದೆ. ಆದಾಗ್ಯೂ ಕಾಶ್ಮೀರದಲ್ಲಿರುವ ಪಾಕ್ ಕೃಪಾಪೋಷಿತ ಉಗ್ರರನ್ನು ಹುಡುಕಿ ಹುಡುಕಿ ಹತ್ಯೆ ಮಾಡಲಾಗುತ್ತಿದೆ. ಪ್ರತ್ಯೇಕತಾವಾದಿಗಳಿಗೂ ಎನ್ ಐಎ ಉರುಳು ಬಿಗಿಯಾಗಿದೆ.

ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಸರಕಾರ, ಕಾಶ್ಮೀರದಲ್ಲಿ ಕಲ್ಲು ತೂರಾಟದ ಆರೋಪದಲ್ಲಿ ಬಂಧಿತರಾಗಿರುವ ಹಾಗೂ ಶಂಕಿತರನ್ನು ಗುರುತಿಸಿ, ಅವರಿಗೆ ಶಿಕ್ಷಣ, ಉದ್ಯೋಗ ತರಬೇತಿ ನೀಡಲು ಮುಂದಾಗಿದೆ.

ಇತ್ತೀಚೆಗೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಕಾಶ್ಮೀರಕ್ಕೆ ಭೇಟಿ ನೀಡಿದ ವೇಳೆ ನೀಡಿದ ನಿರ್ದೇಶನದಂತೆ ಈ ಬದಲಾವಣೆ ಕಾರ್ಯಕ್ಕೆ ರಾಜ್ಯದ ಪೊಲೀಸರು ಅಣಿಯಾಗುತ್ತಿದ್ದಾರೆ.

ಅದರಲ್ಲೂ ವಿಶೇಷವಾಗಿ ದಕ್ಷಿಣ ಕಾಶ್ಮೀರದಲ್ಲಿ ಈ ಕಾರ್ಯ ಕೈಗೊಳ್ಳುತ್ತಿದ್ದು, ಶಂಕಿತ ಉಗ್ರರು, ಕಲ್ಲು ತೂರಾಟದ ಹಿನ್ನೆಲೆಯುಳ್ಳವರು, ಕೈದಿಗಳ ಮನವೊಲಿಸಿ ಅವರಿಗೆ ಶಿಕ್ಷಣ ನೀಡಲು, ಉದ್ಯೋಗ ತರಬೇತಿ ನೀಡಲು, ರಾಷ್ಟ್ರವಿರೋಧಿ ಚಟುವಟಿಕೆಗಳಿಂದ ದೂರವಿರುವಂತೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಕಾರಾಗೃಹ ಪೊಲೀಸ್ ಮಹಾ ನಿರ್ದೇಶಕ ಎಸ್.ಕೆ. ಮಿಶ್ರಾ ತಿಳಿಸಿದ್ದಾರೆ.

ಇವರಲ್ಲೇ 18 ವರ್ಷದವರಿಗಿಂತ ಕೆಳಗಿನ ಬಾಲಾಪರಾಧಿಗಳನ್ನು ಪ್ರತ್ಯೇಕಗೊಳಿಸಿ, ಅವರಿಗೆ ಶಿಕ್ಷಣ ನೀಡಲು ಶಿಕ್ಷಕರನ್ನು ನೇಮಿಸುವ ಹಾಗೂ ಅವರಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಚಿಂತನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದಕ್ಕಾಗಿ 200 ಕೈದಿಗಳು ವಾಸಿಸುವ ಸೌಲಭ್ಯವಿರುವ “ಗೃಹ’ವೊಂದನ್ನು ನಿರ್ಮಿಸಲಾಗಿದ್ದು, ಆಟವಾಡಲು ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅವರನ್ನು ನಾಗರಿಕರನ್ನಾಗಿಸುವುದೇ ನಮ್ಮ ಗುರಿಯಾಗಿದೆ ಎಂದಿದ್ದಾರೆ.

ಒಟ್ಟಿನಲ್ಲಿ ಉಗ್ರರ ಬೀಡಾಗಿದ್ದ, ಗಲಭೆಯ ನಾಡಾಗಿದ್ದ, ಅಶಾಂತಿಯ ತಾಣವಾಗಿದ್ದ ಜಮ್ಮು-ಕಾಶ್ಮೀರದಲ್ಲಿ ಸಹಜ ಸ್ಥಿತಿಯ ಮೊಗ್ಗುಗಳು ಟಿಸಿಲೊಡೆಯುತ್ತಿರುವುದು ಸಂತಸದ ಸಂಗತಿ. ಅದು ಹೂವಾಗಿ ಅರಳಲಿ ಎಂಬುದು ನಮ್ಮ ಆಶಯ.

 

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search