• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹೇಗಿದ್ದ ಕಾಶ್ಮೀರ, ಹೇಗಾಗುತ್ತಿದೆ ಗೊತ್ತಾ?

TNN Correspondent Posted On September 24, 2017
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದಮೇಲೆ ಕಾಶ್ಮೀರದ ಚಹರೆಯೇ ಬದಲಾಗುತ್ತಿದೆ. ಪಾಕಿಸ್ತಾನಿ ಉಗ್ರರ ಉಪಟಳ ಕಡಿಮೆಯಾಗಿದೆ. ಕದನ ವಿರಾಮ ಉಲ್ಲಂಘನೆಯೂ ಕುಸಿದಿದೆ. ಆದಾಗ್ಯೂ ಕಾಶ್ಮೀರದಲ್ಲಿರುವ ಪಾಕ್ ಕೃಪಾಪೋಷಿತ ಉಗ್ರರನ್ನು ಹುಡುಕಿ ಹುಡುಕಿ ಹತ್ಯೆ ಮಾಡಲಾಗುತ್ತಿದೆ. ಪ್ರತ್ಯೇಕತಾವಾದಿಗಳಿಗೂ ಎನ್ ಐಎ ಉರುಳು ಬಿಗಿಯಾಗಿದೆ.

ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಸರಕಾರ, ಕಾಶ್ಮೀರದಲ್ಲಿ ಕಲ್ಲು ತೂರಾಟದ ಆರೋಪದಲ್ಲಿ ಬಂಧಿತರಾಗಿರುವ ಹಾಗೂ ಶಂಕಿತರನ್ನು ಗುರುತಿಸಿ, ಅವರಿಗೆ ಶಿಕ್ಷಣ, ಉದ್ಯೋಗ ತರಬೇತಿ ನೀಡಲು ಮುಂದಾಗಿದೆ.

ಇತ್ತೀಚೆಗೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಕಾಶ್ಮೀರಕ್ಕೆ ಭೇಟಿ ನೀಡಿದ ವೇಳೆ ನೀಡಿದ ನಿರ್ದೇಶನದಂತೆ ಈ ಬದಲಾವಣೆ ಕಾರ್ಯಕ್ಕೆ ರಾಜ್ಯದ ಪೊಲೀಸರು ಅಣಿಯಾಗುತ್ತಿದ್ದಾರೆ.

ಅದರಲ್ಲೂ ವಿಶೇಷವಾಗಿ ದಕ್ಷಿಣ ಕಾಶ್ಮೀರದಲ್ಲಿ ಈ ಕಾರ್ಯ ಕೈಗೊಳ್ಳುತ್ತಿದ್ದು, ಶಂಕಿತ ಉಗ್ರರು, ಕಲ್ಲು ತೂರಾಟದ ಹಿನ್ನೆಲೆಯುಳ್ಳವರು, ಕೈದಿಗಳ ಮನವೊಲಿಸಿ ಅವರಿಗೆ ಶಿಕ್ಷಣ ನೀಡಲು, ಉದ್ಯೋಗ ತರಬೇತಿ ನೀಡಲು, ರಾಷ್ಟ್ರವಿರೋಧಿ ಚಟುವಟಿಕೆಗಳಿಂದ ದೂರವಿರುವಂತೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಕಾರಾಗೃಹ ಪೊಲೀಸ್ ಮಹಾ ನಿರ್ದೇಶಕ ಎಸ್.ಕೆ. ಮಿಶ್ರಾ ತಿಳಿಸಿದ್ದಾರೆ.

ಇವರಲ್ಲೇ 18 ವರ್ಷದವರಿಗಿಂತ ಕೆಳಗಿನ ಬಾಲಾಪರಾಧಿಗಳನ್ನು ಪ್ರತ್ಯೇಕಗೊಳಿಸಿ, ಅವರಿಗೆ ಶಿಕ್ಷಣ ನೀಡಲು ಶಿಕ್ಷಕರನ್ನು ನೇಮಿಸುವ ಹಾಗೂ ಅವರಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಚಿಂತನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದಕ್ಕಾಗಿ 200 ಕೈದಿಗಳು ವಾಸಿಸುವ ಸೌಲಭ್ಯವಿರುವ “ಗೃಹ’ವೊಂದನ್ನು ನಿರ್ಮಿಸಲಾಗಿದ್ದು, ಆಟವಾಡಲು ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅವರನ್ನು ನಾಗರಿಕರನ್ನಾಗಿಸುವುದೇ ನಮ್ಮ ಗುರಿಯಾಗಿದೆ ಎಂದಿದ್ದಾರೆ.

ಒಟ್ಟಿನಲ್ಲಿ ಉಗ್ರರ ಬೀಡಾಗಿದ್ದ, ಗಲಭೆಯ ನಾಡಾಗಿದ್ದ, ಅಶಾಂತಿಯ ತಾಣವಾಗಿದ್ದ ಜಮ್ಮು-ಕಾಶ್ಮೀರದಲ್ಲಿ ಸಹಜ ಸ್ಥಿತಿಯ ಮೊಗ್ಗುಗಳು ಟಿಸಿಲೊಡೆಯುತ್ತಿರುವುದು ಸಂತಸದ ಸಂಗತಿ. ಅದು ಹೂವಾಗಿ ಅರಳಲಿ ಎಂಬುದು ನಮ್ಮ ಆಶಯ.

 

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search