• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹೇಗಿದ್ದ ಕಾಶ್ಮೀರ, ಹೇಗಾಗುತ್ತಿದೆ ಗೊತ್ತಾ?

TNN Correspondent Posted On September 24, 2017
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದಮೇಲೆ ಕಾಶ್ಮೀರದ ಚಹರೆಯೇ ಬದಲಾಗುತ್ತಿದೆ. ಪಾಕಿಸ್ತಾನಿ ಉಗ್ರರ ಉಪಟಳ ಕಡಿಮೆಯಾಗಿದೆ. ಕದನ ವಿರಾಮ ಉಲ್ಲಂಘನೆಯೂ ಕುಸಿದಿದೆ. ಆದಾಗ್ಯೂ ಕಾಶ್ಮೀರದಲ್ಲಿರುವ ಪಾಕ್ ಕೃಪಾಪೋಷಿತ ಉಗ್ರರನ್ನು ಹುಡುಕಿ ಹುಡುಕಿ ಹತ್ಯೆ ಮಾಡಲಾಗುತ್ತಿದೆ. ಪ್ರತ್ಯೇಕತಾವಾದಿಗಳಿಗೂ ಎನ್ ಐಎ ಉರುಳು ಬಿಗಿಯಾಗಿದೆ.

ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಸರಕಾರ, ಕಾಶ್ಮೀರದಲ್ಲಿ ಕಲ್ಲು ತೂರಾಟದ ಆರೋಪದಲ್ಲಿ ಬಂಧಿತರಾಗಿರುವ ಹಾಗೂ ಶಂಕಿತರನ್ನು ಗುರುತಿಸಿ, ಅವರಿಗೆ ಶಿಕ್ಷಣ, ಉದ್ಯೋಗ ತರಬೇತಿ ನೀಡಲು ಮುಂದಾಗಿದೆ.

ಇತ್ತೀಚೆಗೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಕಾಶ್ಮೀರಕ್ಕೆ ಭೇಟಿ ನೀಡಿದ ವೇಳೆ ನೀಡಿದ ನಿರ್ದೇಶನದಂತೆ ಈ ಬದಲಾವಣೆ ಕಾರ್ಯಕ್ಕೆ ರಾಜ್ಯದ ಪೊಲೀಸರು ಅಣಿಯಾಗುತ್ತಿದ್ದಾರೆ.

ಅದರಲ್ಲೂ ವಿಶೇಷವಾಗಿ ದಕ್ಷಿಣ ಕಾಶ್ಮೀರದಲ್ಲಿ ಈ ಕಾರ್ಯ ಕೈಗೊಳ್ಳುತ್ತಿದ್ದು, ಶಂಕಿತ ಉಗ್ರರು, ಕಲ್ಲು ತೂರಾಟದ ಹಿನ್ನೆಲೆಯುಳ್ಳವರು, ಕೈದಿಗಳ ಮನವೊಲಿಸಿ ಅವರಿಗೆ ಶಿಕ್ಷಣ ನೀಡಲು, ಉದ್ಯೋಗ ತರಬೇತಿ ನೀಡಲು, ರಾಷ್ಟ್ರವಿರೋಧಿ ಚಟುವಟಿಕೆಗಳಿಂದ ದೂರವಿರುವಂತೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಕಾರಾಗೃಹ ಪೊಲೀಸ್ ಮಹಾ ನಿರ್ದೇಶಕ ಎಸ್.ಕೆ. ಮಿಶ್ರಾ ತಿಳಿಸಿದ್ದಾರೆ.

ಇವರಲ್ಲೇ 18 ವರ್ಷದವರಿಗಿಂತ ಕೆಳಗಿನ ಬಾಲಾಪರಾಧಿಗಳನ್ನು ಪ್ರತ್ಯೇಕಗೊಳಿಸಿ, ಅವರಿಗೆ ಶಿಕ್ಷಣ ನೀಡಲು ಶಿಕ್ಷಕರನ್ನು ನೇಮಿಸುವ ಹಾಗೂ ಅವರಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಚಿಂತನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದಕ್ಕಾಗಿ 200 ಕೈದಿಗಳು ವಾಸಿಸುವ ಸೌಲಭ್ಯವಿರುವ “ಗೃಹ’ವೊಂದನ್ನು ನಿರ್ಮಿಸಲಾಗಿದ್ದು, ಆಟವಾಡಲು ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅವರನ್ನು ನಾಗರಿಕರನ್ನಾಗಿಸುವುದೇ ನಮ್ಮ ಗುರಿಯಾಗಿದೆ ಎಂದಿದ್ದಾರೆ.

ಒಟ್ಟಿನಲ್ಲಿ ಉಗ್ರರ ಬೀಡಾಗಿದ್ದ, ಗಲಭೆಯ ನಾಡಾಗಿದ್ದ, ಅಶಾಂತಿಯ ತಾಣವಾಗಿದ್ದ ಜಮ್ಮು-ಕಾಶ್ಮೀರದಲ್ಲಿ ಸಹಜ ಸ್ಥಿತಿಯ ಮೊಗ್ಗುಗಳು ಟಿಸಿಲೊಡೆಯುತ್ತಿರುವುದು ಸಂತಸದ ಸಂಗತಿ. ಅದು ಹೂವಾಗಿ ಅರಳಲಿ ಎಂಬುದು ನಮ್ಮ ಆಶಯ.

 

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search