• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪ್ರಧಾನಿ ಮೋದಿಯಿಂದ ರಾಮಾಯಣ ಕುರಿತ ಅಂಚೆ ಚೀಟಿ ಬಿಡುಗಡೆ

TNN Correspondent Posted On September 25, 2017
0


0
Shares
  • Share On Facebook
  • Tweet It

ಲಖನೌ: ಭಾರತೀಯ ಅಂಚೆ ಇದೇ ಮೊದಲ ಬಾರಿಗೆ ರಾಮಯಣದ ಅಂಶ ಸಾರುವ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚೆಗೆ ವಾರಣಾಸಿಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ತುಳಸಿ ಮಾನಸ ಮಂದಿರದಲ್ಲಿ ಅಂಚೆ ಚೀಟಿ ಬಿಡುಗಡೆಗೊಳಿಸಿದ್ದಾರೆ.

ಬಳಿಕ ಮಾತನಾಡಿ, “ಭಗವಾನ್ ರಾಮನ ಜೀವನ ಶೈಲಿ ಹಾಗೂ ಅವರ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿದಾಯಕ. ಮಹಾತ್ಮ ಗಾಂಧೀಜಿ ಅವರು ಸಹ ರಾಮನ ತತ್ತ್ವಗಳನ್ನು ಅಳವಡಿಸಿಕೊಂಡಿದ್ದರು’ ಎಂದು ತಿಳಿಸಿದರು.

ನಾನು ಪ್ರಧಾನಿಯ ನಿವಾಸ ಅಥವಾ ವಿಜ್ಞಾನ ಮಂದಿರದಲ್ಲಿ ಅಂಚೆ ಚೀಟಿಗಳನ್ನು ಬಿಡುಗಡೆಗೊಳಿಸಬಹುದಾಗಿತ್ತು. ಆದರೆ ನವರಾತ್ರಿಯಂಥ ಸಂದರ್ಭದಲ್ಲಿ ತುಳಸಿ ಮಾನಸ ಮಂದಿರದಲ್ಲಿ ಬಿಡುಗಡೆ ಮಾಡುವುದಕ್ಕಿಂತ ಬೇರೆ ಪ್ರಾಶಸ್ತ್ಯವಾದ ಸ್ಥಳ ಇಲ್ಲ. ಹಾಗಾಗಿ ದೇವಾಲಯದಲ್ಲಿ ಬಿಡುಗಡೆಗೊಳಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನವರಾತ್ರಿ ಹಾಗೂ ವಿಜಯ ದಶಮಿ ರಾಮನ ಜೀವನದಲ್ಲಿ ಮಹತ್ತರ ಪಾತ್ರ ನಿರ್ವಹಿಸಿರುವುದರಿಂದ, ಈ ಸಂದರ್ಭದಲ್ಲಿ ರಾಮಾಯಣದ ಕುರಿತ ಅಂಚೆ ಚೀಟಿ ಬಿಡುಗಡೆಗೊಳಿಸುತ್ತಿರುವುದು ಸಂತಸ ತಂದಿದೆ ಎಂದಿದ್ದಾರೆ.

ಅಂಚೆ ಚೀಟಿಗಳು ಬರೀ ಚೀಟಿಗಳಲ್ಲ ಅಥವಾ ಪತ್ರ ತಲುಪಲು ಇರುವ ಗುರುತುಗಳಲ್ಲ. ಅವು ದೇಶದ ಇತಿಹಾಸ, ಪರಂಪರೆ, ಸಂಪ್ರದಾಯ, ಮೌಲ್ಯಗಳನ್ನು ಸಾರುವ ಪ್ರತೀಕಗಳು ಎಂದು ಅಭಿಪ್ರಾಯಪಟ್ಟಿದ್ದಾರೆ.

 

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search