• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗಡಿಯಲ್ಲಿ ರೋಹಿಂಗ್ಯಾಗಳ ಒಳನುಸುಳುವಿಕೆ ತಡೆಯಲು ಸೈನಿಕರ ಬಳಸುವ ತಂತ್ರ ಎಂಥಾದ್ದು?

TNN Correspondent Posted On September 25, 2017
0


0
Shares
  • Share On Facebook
  • Tweet It

ಕೋಲ್ಕತಾ: ರೋಹಿಂಗ್ಯಾ ಮುಸ್ಲಿಮರು ಗಡಿಯಲ್ಲಿ ಒಳನುಸುಳುವುದು ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿ ಬಿಎಸ್ಎಫ್ ಯೋಧರು ನಾನಾ ತಂತ್ರ ರೂಪಿಸುತ್ತದ್ದಾರೆ.

ಪಶ್ಚಿಮ ಬಂಗಾಳದ ಗಡಿಯ 22 ಸೂಕ್ಷ್ಮ ಪ್ರದೇಶದಲ್ಲಿ ಗಸ್ತು ಪಡೆ ನಿಯೋಜಿಸಿದ್ದು, ಭಾರಿ ಭದ್ರತೆ ಒದಗಿಸಿದ್ದಾರೆ. ಅಲ್ಲದೆ ಸ್ಥಳೀಯ ಬೆಂಗಾಳಿ ಭಾಷೆ ಬಳಸುವ ಮೂಲಕ ರೋಹಿಂಗ್ಯಾಗಳನ್ನು ಪತ್ತೆ ಹಚ್ಚಿ ಒಳನುಸುಳದಂತೆ ತಡೆಯುತ್ತಿದ್ದಾರೆ.

“ಗಡಿಯಲ್ಲಿ ಒಳನುಸುಳುವುದು ನಿಷಿದ್ಧ. ಹಾಗಾಗಿ ಒಳನುಸುಳುಲು ಯತ್ನಿಸುವ ಪ್ರತಿಯೊಬ್ಬನನ್ನು ಯೋಧರು ಪ್ರಶ್ನಿಸುತ್ತಾರೆ. ಕೆಲವೊಂದು ಬಾರಿ ರೋಹಿಂಗ್ಯಾಗಳು ನಾವು ಬಾಂಗ್ಲಾದೇಶಿಯರು ಎಂದು ಹೇಳುತ್ತಾರೆ. ಆದರೂ ಬೆಂಗಾಳಿ ಮೂಲಕ ಅವರ ಜತೆ ಮಾತನಾಡಿ ಒಳನುಸುಳದಂತೆ ತಡೆಯಲಾಗುತ್ತದ” ಎಂದು ಬಿಎಸ್ಎಫ್ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಉತ್ತರ 24 ಪರಗಣ, ಮುರ್ಷಿದಾಬಾದ್, ಕೃಷ್ಣನಗರ ಸೇರಿ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಸೈನಿಕರನ್ನು ನಿಯೋಜಿಸಿ, ಅವರೆಲ್ಲ ರೋಹಿಂಗ್ಯಾಗಳನ್ನು ಪತ್ತೆ ಹಚ್ಚಲು ಸ್ಥಳೀಯ ಭಾಷೆಯಲ್ಲಿಯೇ ಸಂಪರ್ಕ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

2017ರ ಆಗಸ್ಟ್ ಅಂತ್ಯದವರೆಗೆ 176 ರೋಹಿಂಗ್ಯಾ ಮುಸ್ಲಿಮರನ್ನು ದೇಶದೊಳಕ್ಕೆ ನುಸುಳುವುದನ್ನು ತಡೆಯಲಾಗಿದ್ದು, ಹೆಚ್ಚಿನ ಭದ್ರತೆ ಹಾಗೂ ಒಳನುಸುಳುವಿಕೆ ತಡೆಯಲು ಹೆಚ್ಚುವರಿ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶದಿಂದಲೂ ನುಸುಳುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಭಾರತ-ಬಾಂಗ್ಲಾದೇಶ ಗಡಿಯಲ್ಲಿ 4,096 ಚ.ಕೀ.ಮೀ. ಹಂಚಿಕೊಂಡಿದ್ದು, ಪಶ್ಚಿಮ ಬಂಗಾಳವೊಂದೇ 2,216.7 ಚ.ಕೀ.ಮೀ. ಗಡಿ ಹಂಚಿಕೊಂಡಿದೆ.

ಸುಮಾರು 40 ಸಾವಿರ ರೋಹಿಂಗ್ಯಾ ಮುಸ್ಲಿಮರು ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದು, ಕೇಂದ್ರ ಸರಕಾರ ಅವರ ಗಡಿಪಾರಿಗೆ ಸಹ ಚಿಂತನೆ ನಡೆಸಿದೆ.

 

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search