• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗಡಿಯಲ್ಲಿ ರೋಹಿಂಗ್ಯಾಗಳ ಒಳನುಸುಳುವಿಕೆ ತಡೆಯಲು ಸೈನಿಕರ ಬಳಸುವ ತಂತ್ರ ಎಂಥಾದ್ದು?

TNN Correspondent Posted On September 25, 2017
0


0
Shares
  • Share On Facebook
  • Tweet It

ಕೋಲ್ಕತಾ: ರೋಹಿಂಗ್ಯಾ ಮುಸ್ಲಿಮರು ಗಡಿಯಲ್ಲಿ ಒಳನುಸುಳುವುದು ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿ ಬಿಎಸ್ಎಫ್ ಯೋಧರು ನಾನಾ ತಂತ್ರ ರೂಪಿಸುತ್ತದ್ದಾರೆ.

ಪಶ್ಚಿಮ ಬಂಗಾಳದ ಗಡಿಯ 22 ಸೂಕ್ಷ್ಮ ಪ್ರದೇಶದಲ್ಲಿ ಗಸ್ತು ಪಡೆ ನಿಯೋಜಿಸಿದ್ದು, ಭಾರಿ ಭದ್ರತೆ ಒದಗಿಸಿದ್ದಾರೆ. ಅಲ್ಲದೆ ಸ್ಥಳೀಯ ಬೆಂಗಾಳಿ ಭಾಷೆ ಬಳಸುವ ಮೂಲಕ ರೋಹಿಂಗ್ಯಾಗಳನ್ನು ಪತ್ತೆ ಹಚ್ಚಿ ಒಳನುಸುಳದಂತೆ ತಡೆಯುತ್ತಿದ್ದಾರೆ.

“ಗಡಿಯಲ್ಲಿ ಒಳನುಸುಳುವುದು ನಿಷಿದ್ಧ. ಹಾಗಾಗಿ ಒಳನುಸುಳುಲು ಯತ್ನಿಸುವ ಪ್ರತಿಯೊಬ್ಬನನ್ನು ಯೋಧರು ಪ್ರಶ್ನಿಸುತ್ತಾರೆ. ಕೆಲವೊಂದು ಬಾರಿ ರೋಹಿಂಗ್ಯಾಗಳು ನಾವು ಬಾಂಗ್ಲಾದೇಶಿಯರು ಎಂದು ಹೇಳುತ್ತಾರೆ. ಆದರೂ ಬೆಂಗಾಳಿ ಮೂಲಕ ಅವರ ಜತೆ ಮಾತನಾಡಿ ಒಳನುಸುಳದಂತೆ ತಡೆಯಲಾಗುತ್ತದ” ಎಂದು ಬಿಎಸ್ಎಫ್ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಉತ್ತರ 24 ಪರಗಣ, ಮುರ್ಷಿದಾಬಾದ್, ಕೃಷ್ಣನಗರ ಸೇರಿ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಸೈನಿಕರನ್ನು ನಿಯೋಜಿಸಿ, ಅವರೆಲ್ಲ ರೋಹಿಂಗ್ಯಾಗಳನ್ನು ಪತ್ತೆ ಹಚ್ಚಲು ಸ್ಥಳೀಯ ಭಾಷೆಯಲ್ಲಿಯೇ ಸಂಪರ್ಕ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

2017ರ ಆಗಸ್ಟ್ ಅಂತ್ಯದವರೆಗೆ 176 ರೋಹಿಂಗ್ಯಾ ಮುಸ್ಲಿಮರನ್ನು ದೇಶದೊಳಕ್ಕೆ ನುಸುಳುವುದನ್ನು ತಡೆಯಲಾಗಿದ್ದು, ಹೆಚ್ಚಿನ ಭದ್ರತೆ ಹಾಗೂ ಒಳನುಸುಳುವಿಕೆ ತಡೆಯಲು ಹೆಚ್ಚುವರಿ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶದಿಂದಲೂ ನುಸುಳುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಭಾರತ-ಬಾಂಗ್ಲಾದೇಶ ಗಡಿಯಲ್ಲಿ 4,096 ಚ.ಕೀ.ಮೀ. ಹಂಚಿಕೊಂಡಿದ್ದು, ಪಶ್ಚಿಮ ಬಂಗಾಳವೊಂದೇ 2,216.7 ಚ.ಕೀ.ಮೀ. ಗಡಿ ಹಂಚಿಕೊಂಡಿದೆ.

ಸುಮಾರು 40 ಸಾವಿರ ರೋಹಿಂಗ್ಯಾ ಮುಸ್ಲಿಮರು ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದು, ಕೇಂದ್ರ ಸರಕಾರ ಅವರ ಗಡಿಪಾರಿಗೆ ಸಹ ಚಿಂತನೆ ನಡೆಸಿದೆ.

 

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search