• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚುನಾವಣೆಗಳಾಚೆಗೆ ಪ್ರಜಾಪ್ರಭುತ್ವ ಕಾಣಿರಿ : ಮೋದಿ ಕಿವಿಮಾತು

TNN Correspondent Posted On September 26, 2017


  • Share On Facebook
  • Tweet It

*ಕಾರ್ಯಕಾರಣಿಯಲ್ಲಿ ಬಿಜೆಪಿ ಬಲ *

13 ಸಿಎಂಗಳು, 6 ಡಿಸಿಎಂಗಳು, 232 ಸಚಿವರು, 65 ಕೇಂದ್ರ ಸಚಿವರು, 1515 ಶಾಸಕರು/ಎಂಎಲ್ಸಿಗಳು, 334 ಸಂಸದರು

>> ಪಕ್ಷಕ್ಕಿಂತ ದೇಶ ಮುಖ್ಯ.
>> ಭ್ರಷ್ಟಾಚಾರ , ಕಪ್ಪುಹಣ ಶೇಖರಣೆಗೆ ಕ್ಷಮೆಯಿಲ್ಲ.
>> ಮುಲಾಜಿಲ್ಲದೇ ಕ್ರಮ, ನನಗೆ ಯಾರೂ ಸಂಬಂಧಿಕರಲ್ಲ. ಸಂಬಂಧಿಕರೂ ಇಲ್ಲ.

ನವದೆಹಲಿ : ನನಗೆ ಯಾರೂ ಸಂಬಂಧಿಗಳಿಲ್ಲ. ಪಕ್ಷಕ್ಕಿಂತ ನನಗೆ ದೇಶವೇ ಮುಖ್ಯ. ಯಾರೇ ಭ್ರಷ್ಟಾಚಾರ ಮತ್ತು ಕಪ್ಪು ಹಣ ಶೇಖರಣ ಪ್ರಕರಣದಲ್ಲಿ ಸಿಕ್ಕಿಬಿದ್ದರೂ ಕಾಪಾಡುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಸಂಸದರು, ಶಾಸಕರು ಮತ್ತು ಕಾರ್ಯಕರ್ತರೆಂದು ಮುಲಾಜಿಲ್ಲದೇ ಯಾರೇ ಭ್ರಷ್ಟರಾದರೂ ಅವರ ವಿರುದ್ಧ ಕ್ರಮ ನಿಶ್ಚಿತ ಎಂದು ಮೋದಿ ಗುಡುಗಿದ್ದಾರೆ.

ಸುಮಾರು 2 ಸಾವಿರಕ್ಕೂ ಅಧಿಕ ಬಿಜಪೆಇ ಮುಖಂಡರು ಭಾಗವಹಿಸಿದ್ದ ಕಾರ್ಯಕಾರಿಣಿಯಲ್ಲಿ ಮೋದಿ ಅವರ ಮಾತುಗಳನ್ನು ಮಾಧ್ಯಮದವರಿಗೆ ಕಾರ್ಯಕಾರಿಣಿಯ ನಂತರ ವಿತ್ತ ಸಚಿವ ಅರುಣ್ ಜೇಟ್ಲಿ ಗೋಷ್ಠಿಯಲ್ಲಿ ವಿವರಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಭ್ರಷ್ಟಾಚಾರ ವಿರುದ್ಧ ಹೋರಾಟ ಮತ್ತು ಕಪ್ಪುಹಣ ನಿಗ್ರಹ ಅಜೆಂಡಾದಲ್ಲಿಯೇ ಇರಲಿಲ್ಲ. ಕೆಲವೊಮ್ಮೆ ನಮ್ಮ ಸರ್ಕಾರವನ್ನು ಟೀಕಿಸಲು ಪದಗಳೇ ಸಿಗದಿದ್ದಾಗ ಕಾಂಗ್ರೆಸ್‍ನ ಹಿರಿಯ ಮುಖಂಡರೂ ಸೇರಿದಂತೆ ಅನೇಕರು ನಿಕೃಷ್ಟ ಪದ ಬಳಕೆಯಿಂದ ನಿಂದಿಸಿ ತೃಪ್ತಿಪಟ್ಟುಕೊಳ್ಳುತ್ತಾರೆ ಎಂದು ಮೋದಿ ದಿಗ್ವಿಜಯ್ ಮತ್ತು ಮನೀಷ್ ತಿವಾರಿ ಟ್ವೀಟ್‍ಗೆ ಕುಟುಕಿದ್ದಾರೆ.

ಮೋದಿ ಮಾತುಗಳು—>
* ಕೇವಲ ಚುನಾವಣೆಯ ಗೆಲುವಿಗಾಗಿ ಶ್ರಮಿಸಬೇಡಿ. ಕಾರ್ಯಕರ್ತರು, ಶಾಸಕರು, ಸಂಸದರೆಲ್ಲರೂ ಎನ್‍ಡಿಎ ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಲು ಶ್ರಮಿಸಿ.

* ಜನರ ಪಾಲ್ಗೊಳ್ಳುವಿಕೆ ಇಲ್ಲದೇ ಯಾವುದೇ ಯೋಜನೆಯೂ ಯಶಸ್ವಿಯಾಗುವುದಿಲ್ಲ.

………………………………………………………………….

ಸೌಭಾಗ್ಯ ಯೋಜನೆಗೆ ಚಾಲನೆ, ಉರ್ಜಾ ಭವನ ಉದ್ಘಾಟನೆ

ಡಿಸೆಂಬರ್2018ರೊಳಗೆ ನಾಲ್ಕು ಕೋಟಿಗೂ ಅಧಿಕ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದ ಸೌಲಭ್ಯ ಕಲ್ಪಿಸುವ ಮೂಲಕ ಮಾರ್ಚ್ 2019ರೊಳಗೆ ದೇಶಾದ್ಯಂತ ಎಲ್ಲ ನಾಗರಿಕರಿಗೂ 100% ವಿದ್ಯುತ್ ನೀಡುವ ಗುರಿಯೊಂದಿಗೆ ಸೌಭಾಗ್ಯ ಹೆಸರಿನ ಯೋಜನೆಗೆ ಮೋದಿ ಚಾಲನೆ ನೀಡಿದ್ದಾರೆ.

ರು. 16, 320 ಕೋಟಿ ವೆಚ್ಚದ ಯೋಜನೆ ಇದು. ಪ್ರಧಾನ ಮಂತ್ರಿ ಸಹಜ ಬಿಜ್ಲಿ ಹರ್ ಘರ್ ಯೋಜನೆ ಅಥವಾ ಸೌಭಾಗ್ಯ ಯೋಜನೆಗಿಂತ ಮುಂಚೆ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಮೂಲಕ 18 ಸಾವಿರ ಹಳ್ಳಿಗಳ ಪೈಕಿ 78% ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು. ಸರ್ಕಾರಿ ಸ್ಚಾಮ್ಯದ ತೈಲ ಕಂಪನಿ ಒಎನ್‍ಜಿಸಿಯ ನೂತನ ಕಾರ್ಪೊರೇಟ್ ಕಚೇರಿ ದೀನ್ ದಯಾಳ್ ಉಪಾಧ್ಯಾಯ ಉರ್ಜಾ ಭವನವನ್ನು ದೆಹಲಿಯಲ್ಲಿ ಪ್ರಧಾನಿ ಉದ್ಘಾಟಿಸಿದರು.

 

  • Share On Facebook
  • Tweet It


- Advertisement -
bjpcongressgaslpgmodinational executivendasaubhagya


Trending Now
ಮುಸ್ಲಿಮರು ಹೆಚ್ಚಿರುವ ಕಡೆ ಸಾವರ್ಕರ್ ಫೋಟೋ ಹಾಕಿದ್ದೇ ತಪ್ಪು ಎಂದ ಸಿದ್ದು!
Tulunadu News August 17, 2022
ಪರೇಶ್ ಮೇಸ್ತಾ ಬಿಜೆಪಿಯವರನ್ನು ಕ್ಷಮಿಸಿಬಿಡಪ್ಪ!
Tulunadu News August 15, 2022
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

  • Recent Posts

    • ಮುಸ್ಲಿಮರು ಹೆಚ್ಚಿರುವ ಕಡೆ ಸಾವರ್ಕರ್ ಫೋಟೋ ಹಾಕಿದ್ದೇ ತಪ್ಪು ಎಂದ ಸಿದ್ದು!
    • ಪರೇಶ್ ಮೇಸ್ತಾ ಬಿಜೆಪಿಯವರನ್ನು ಕ್ಷಮಿಸಿಬಿಡಪ್ಪ!
    • ಉಗುರು ಸಿಕ್ಕಿದರೆ ದೇಹ ನುಂಗುವವರಿಗೆ ಈದ್ಗಾ ಮೈದಾನ ಉದಾಹರಣೆ!
    • ಎಸಿಬಿ ರದ್ದು ಮಾಡಿದ್ದು ಕೋರ್ಟ್, ಬೆನ್ನು ತಟ್ಟಿಕೊಳ್ಳುವ ಅವಕಾಶ ಬಿಜೆಪಿಗೆ ಮಿಸ್!
    • ಹಲಾಲ್-ಜಟ್ಕಾ ವಿಷಯದಲ್ಲಿ ಪ್ರವೀಣ್ ಹತ್ಯೆಯಾಯಿತಾ ಎನ್ನುವ ತನಿಖೆ ಆಗಲಿ!
    • ಸಿಎಂ ಬದಲಾವಣೆಯಿಂದ ರಾಜ್ಯದ ಜನರಿಗೆ ಆಗುವಂತದ್ದು ಏನೂ ಇಲ್ಲ!!
    • ಸಿಬಲ್ ಅರಳು ಮರಳಿನ ಹೇಳಿಕೆ ಅವರ ಇವತ್ತಿನ ಪರಿಸ್ಥಿತಿ ಸೂಚಿಸುತ್ತದೆ!
    • ಹೆಣ್ಣುಮಕ್ಕಳು ನೇತಾಡಿ ಹೋಗುವ ಪರಿಸ್ಥಿತಿ ಬರಬಾರದಾಗಿತ್ತು!!
    • ಅಕ್ರಮ ಮರಳು ಗುತ್ತಿಗೆದಾರರು ಸಿಕ್ಕಿಬಿದ್ದರೆ ಶಿಕ್ಷೆ ಎಲ್ಲಿ ಆಗಿದೆ?
    • ಯಡ್ಡಿ ಭೇಟಿ ಮಾಡಿದ ಶಾ ಕೊಟ್ಟ ಸಂದೇಶ ಕುತೂಹಲಕಾರಿ!
  • Popular Posts

    • 1
      ಮುಸ್ಲಿಮರು ಹೆಚ್ಚಿರುವ ಕಡೆ ಸಾವರ್ಕರ್ ಫೋಟೋ ಹಾಕಿದ್ದೇ ತಪ್ಪು ಎಂದ ಸಿದ್ದು!
    • 2
      ಪರೇಶ್ ಮೇಸ್ತಾ ಬಿಜೆಪಿಯವರನ್ನು ಕ್ಷಮಿಸಿಬಿಡಪ್ಪ!
    • 3
      ಉಗುರು ಸಿಕ್ಕಿದರೆ ದೇಹ ನುಂಗುವವರಿಗೆ ಈದ್ಗಾ ಮೈದಾನ ಉದಾಹರಣೆ!
    • 4
      ಎಸಿಬಿ ರದ್ದು ಮಾಡಿದ್ದು ಕೋರ್ಟ್, ಬೆನ್ನು ತಟ್ಟಿಕೊಳ್ಳುವ ಅವಕಾಶ ಬಿಜೆಪಿಗೆ ಮಿಸ್!
    • 5
      ಹಲಾಲ್-ಜಟ್ಕಾ ವಿಷಯದಲ್ಲಿ ಪ್ರವೀಣ್ ಹತ್ಯೆಯಾಯಿತಾ ಎನ್ನುವ ತನಿಖೆ ಆಗಲಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search