• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಶ್ವಸಂಸ್ಥೆಯಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ಮುಖಭಂಗ: ಭಾರತದ ಟೊಮ್ಯಾಟೋ ಬೇಡ ಎಂದ ಪಾಕಿ

TNN Correspondent Posted On September 27, 2017


  • Share On Facebook
  • Tweet It

ಈ ಪಾಕಿಸ್ತಾನವೇ ಹೀಗೆ, ನೇರಾ ನೇರ ಯುದ್ಧ ಮಾಡುವುದಿಲ್ಲ. ಹುರುಳಿರುವ ವಾದ ಮಾಡುವುದಿಲ್ಲ. ಬೆಟ್ಟಕ್ಕೆ ನಾಯಿ ಬೊಗಳಿ ಸತ್ತಿತು ಎಂಬ ಮಾತಿನಂತೆ ಭಾರತದ ವಿರುದ್ಧ ಆಗಾಗ ಗುಟುರು ಹಾಕುತ್ತದೆ. ಗುರ್ ಎನ್ನುತ್ತದೆ. ನಾವೇನು ಸುಮ್ಮನೆ ಇರುತ್ತೇವೆಯೇ? ಪಾಕಿಸ್ತಾನದ ತಲೆಗೊಂದು ಮೊಟಕುತ್ತೇವೆ. ಆಗ ಪಾಕಿಸ್ತಾನ ತೋಯ್ದ ಕೋಳಿಯಂತಾಗುತ್ತದೆ. ಅದಾದ ಬಳಿಕ ಮತ್ತೆ ಕೈಲಾಗದ ನರಿಯಂತೆ ಮೆಲ್ಲಗೆ ಹಿಂಬಾಗಿಲಿನಿಂದ ಏನು ಕುತಂತ್ರ ಮಾಡಬೇಕು ಎಂದು ಹೊಂಚು ಹಾಕುತ್ತದೆ.

ಈ ಅದೇ ಪಾಕಿಸ್ತಾನ ಎಂಬ ಕಳ್ಳಬೆಕ್ಕು ಮತ್ತೊಂದು ಹೊಂಚು ಹಾಕಿದೆ.

ಹೌದು, ವಿಶ್ವಸಂಸ್ಥೆಯಲ್ಲಿ ಭಾರತದಿಂದ ಭಾರಿ ಮುಖಭಂಕ್ಕೀಡಾಗಿರುವ ಪಾಕಿಸ್ತಾನ ಈಗ ಭಾರತದಿಂದ ಟೊಮ್ಯಾಟೊ ಆಮದು ಮಾಡಿಕೊಳ್ಳುವುದಿಲ್ಲ ಎಂಬ ಮೊಂಡು ವಾದ ಮುಂದಿಟ್ಟಿದೆ. ಈ ಕುರಿತು ಆಹಾರ ಸಚಿವ ಸಿಕಂದರ್ ಹಯಾತ್ ಬೋಸನ್ ತಿಳಿಸಿದ್ದಾರೆ.

ಆದರೆ ಇಂಥ ಮೊಂಡು ಹಾಗೂ ಅಹಂಕಾರದ ನಿರ್ಧಾರದಿಂದ ಪಾಕಿಸ್ತಾನಕ್ಕೇ ನಷ್ಟ. ಏಕೆಂದರೆ ಸದ್ಯ ಪಾಕಿಸ್ತಾನದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೊ, ಈರುಳ್ಳಿ ಬೆಲೆ 300 ರೂಪಾಯಿಗೆ ಏರಿಕೆಯಾಗಿತ್ತು. ಇದನ್ನು ಸರಿದೂಗಿಸಲು ಪಾಕಿಸ್ತಾನ ಭಾರತದಿಂದ ಟೊಮ್ಯಾಟೊ, ಈರುಳ್ಳಿ ಆಮದು ಮಾಡಿಕೊಂಡು, 150-160 ರೂಪಾಯಿಗೆ ಕೆ.ಜಿ.ಯಂತೆ ಮಾರಾಟ ಮಾಡುತ್ತಿತ್ತು.

ಆದರೆ ಈಗ ಯಾವುದೋ ಕಾರಣಕ್ಕೆ ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಆದರೆ ಇದರಿಂದ ಪಾಕಿಸ್ತಾನಕ್ಕೇ ನಷ್ಟ ಎಂಬದನ್ನು ನೆರೆರಾಷ್ಟ್ರ ಮರೆತಂತಿದೆ. ಆದಾಗ್ಯೂ, ಈ ಆಮದು ಸ್ಥಗಿತದಿಂದ ಭಾರತಕ್ಕೇನು ನಷ್ಟವಿಲ್ಲದಿದ್ದರೂ, ದ್ವಿಪಕ್ಷೀಯ ಸಂಬಂಧ ಬಿಗಡಾಯಿಸುವ ಸಾಧ್ಯತೆಯಿದೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search