• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭೂಕಂಪ ಆಗುತ್ತೆ ಎಂದು ಪ್ರಧಾನಿಗೆ ಪತ್ರ ಬರೆದ ವಿಜ್ಞಾನಿ!

Naresh Shenoy Posted On September 27, 2017
0


0
Shares
  • Share On Facebook
  • Tweet It

ಡಿಸೆಂಬರ್ 31 ರ ಒಳಗೆ ಭಾರತದ ಕಡಲ ತೀರಗಳಲ್ಲಿ ಆತಂಕಕಾರಿ ವಿದ್ಯಮಾನವೊಂದು ಘಟಿಸಲಿದೆ ಎನ್ನುವ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಇದನ್ನು ಮಾಧ್ಯಮಗಳು ಹಬ್ಬಿಸುತ್ತಿರುವ ಗಾಳಿಸುದ್ದಿ ಎಂದು ಪಕ್ಕಕ್ಕೆ ಸರಿಸುತ್ತಿರೋ ಅಥವಾ ಗಂಭೀರವಾಗಿ ತೆಗೆದುಕೊಳ್ಳುತ್ತಿರೋ ಎನ್ನುವುದು ನಿಮಗೆ ಬಿಟ್ಟಿದ್ದು. ಯಾಕೆಂದರೆ ದೇಶದಲ್ಲಿ ಪ್ರಳಯ ಆಗುತ್ತದೆ, ಸುನಾಮಿ ಬರುತ್ತದೆ, ದೇಶದಲ್ಲಿ ನೆಲ ಬಾಯಿ ಬಿಡುತ್ತದೆ ಎನ್ನುವ ಸುದ್ದಿ ಇದು ಮೊದಲನೇಯದ್ದು ಅಲ್ಲ, ಬಹುಶ: ಕೊನೆಯದ್ದೂ ಆಗಿರುವುದಿಲ್ಲ. ಯಾಕೆಂದರೆ ಅಂತದ್ದನ್ನು ಜನರು ಈಗ ನಂಬುವ ಸ್ಥಿತಿಯಲ್ಲಿ ಇಲ್ಲ. ಇಂತಹ ಸುದ್ದಿ ವರ್ಷದಲ್ಲಿ ನಾಲ್ಕು ಸಲ ಬರುತ್ತೆ. ಅದನ್ನು ನಂಬಿ ಕುಳಿತರೆ ಆಗುತ್ತಾ ಎನ್ನುವುದನ್ನು ನೀವು ಕೇಳಬಹುದು. ಆದರೆ ಈಗ ಬಂದಿರುವ ಮೂಲ ಕೇವಲ ಗಾಳಿಸುದ್ದಿ ಅಲ್ಲ. ಅದನ್ನು ಸುಮ್ಮನೆ ಹಾಗೆ ಪಕ್ಕಕ್ಕೆ ಸರಿಸುವಂತದ್ದು ಅಲ್ಲ.
ಭಾರತದ ಕಡಲ ತೀರಗಳಲ್ಲಿ ಮಾತ್ರವಲ್ಲ ಒಟ್ಟು 11 ರಾಷ್ಟ್ರಗಳಾದ ಚೀನಾ, ಜಪಾನ್, ಪಾಕಿಸ್ತಾನ, ನೇಪಾಲ, ಬಾಂಗ್ಲಾದೇಶ, ಥೈಲ್ಯಾಂಡ್, ಇಂಡೋನೇಶಿಯಾ, ಅಫಘಾನಿಸ್ತಾನ, ಶ್ರೀಲಂಕಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ಕೂಡ ಭೂಕಂಪ ಸಂಭವಿಸುತ್ತದೆ ಎಂದು ಬಿಕೆ ರಿಸರ್ಚ್ ಅಸೋಸಿಯೇಶನ್ ಆಫ್ ಇಎಸ್ ಪಿಯ ನಿರ್ದೇಶಕರಾದ ಬಾಬು ಕಲಾಯಿಲ್ ಅವರು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸೆಪ್ಟೆಂಬರ್ 20 ರಂದು ಪತ್ರ ಬರೆದಿದ್ದಾರೆ.
ಸೇಸ್ಮಾ ಎನ್ನುವ ಬಿರುಗಾಳಿ ಕಡಲ ತೀರಗಳನ್ನು ಅಪ್ಪಳಿಸಲಿದ್ದು 120ಕಿಲೋ ಮೀಟರ್ ನಿಂದ 180 ಕಿಲೋ ಮೀಟರ್ ವೇಗದಲ್ಲಿ ಧಾವಿಸುವ ಈ ಚಂಡ ಮಾರುತ ಕಡಲ ತೀರದ ಜನರ ಬದುಕನ್ನು ನಿರ್ನಾಮಗೊಳಿಸಲಿದೆ ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.
ಒಬ್ಬ ವಿಜ್ಞಾನಿ ನೇರವಾಗಿ ಪ್ರಧಾನ ಮಂತ್ರಿಗೆ ಪತ್ರ ಬರೆದು ದೇಶದ ಈ ಭಾಗಗಳಲ್ಲಿ ಇಂತಿಷ್ಟು ಸಮಯದ ಒಳಗೆ ಚಂಡ ಮಾರುತ ಬೀಸುತ್ತೆ ಎಂದು ಪತ್ರ ಬರೆದಿರುವುದು ಒಂದು ತೂಕವಾದರೆ ಇದೇ ಬಾಬು ಕಲಾಯಿಲ್ 2004 ರಲ್ಲಿ ಭಾರತದಲ್ಲಿ ಸುನಾಮಿ ಬೀಸಲಿದೆ ಎಂದು ಹೇಳಿದ್ದನ್ನು ಮತ್ತು ಅದು ನಿಜವಾದದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಈ ಮಾಹಿತಿ ಸುಳ್ಳಾಗಿ ಹೋಗಲೂಬಹುದು ಅಥವಾ ಒಂದಿಷ್ಟರ ಮಟ್ಟಿಗೆ ನಿಜವೂ ಆಗಬಹುದು. ಬಾಬು ಕಲಾಯಿಲ್ ಹೇಳಿದ ಈ ಸಂಗತಿ ನಿಜವಾಗುತ್ತಾ ಇಲ್ಲವಾ ಎನ್ನುವುದನ್ನು ಕಾಲವೇ ಹೇಳಲಿದೆ.

0
Shares
  • Share On Facebook
  • Tweet It


babu Kalayilearth quake


Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Naresh Shenoy September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Naresh Shenoy September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search