• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೊನೆಗೂ ಬುದ್ಧಿ ಕಲಿತ ಪಾಕ್, ಹಫೀಜ್ ಬೆಂಬಲಿತ ಪಕ್ಷ ನಿಷೇಧಿಸಲು ಚುನಾವಣೆ ಆಯೋಗಕ್ಕೆ ಮನವಿ

TNN Correspondent Posted On September 30, 2017


  • Share On Facebook
  • Tweet It

ಇಸ್ಲಾಮಾಬಾದ್: ಲಷ್ಕರೆ ತಯ್ಯಬಾ, ಹಿಜ್ಬುಲ್ ಮುಜಾಹಿದ್ದೀನ್ ಸೇರಿ ಹಲವು ಉಗ್ರ ಸಂಘಟನೆಗಳನ್ನು ತನ್ನ ಒಡಲಲ್ಲಿಟ್ಟುಕೊಂಡು ಸಾಕುತ್ತಿರುವ ಪಾಕಿಸ್ತಾನಕ್ಕೆ ಇತ್ತೀಚೆಗೆ ಜಾಗತಿಕವಾಗಿ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಬುದ್ಧಿ ಕಲಿತಿದೆ.

ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಸಂಸ್ಥಾಪಕ ಹಫೀಜ್ ಸಯೀದ್ ಬೆಂಬಲಿತ ಮಿಲ್ಲಿ ಮುಸ್ಲಿಂ ಲೀಗ್ ಎಂಬ ಪಕ್ಷವನ್ನು ನಿಷೇಧಿಸಬೇಕು ಎಂದು ಪಾಕಿಸ್ತಾನದ ಆಂತರಿಕ ವ್ಯವಹಾರಗಳ ಸಚಿವಾಲಯ ಚುನಾವಣೆ ಆಯೋಗಕ್ಕೆ ಶಿಫಾರಸು ಮಾಡಿದೆ.

ಸೆ.22ರಂದು ಚುನಾವಣೆ ಆಯೋಗ ಹೊರಡಿಸಿದ ಅಧಿಸೂಚನೆಯಂತೆ ಎಂಎಂಎಲ್ ರಾಜಕೀಯ ಪಕ್ಷ ಎಂದು ತಿಳಿದುಬಂದಿದೆ. ಆದರೆ ಇದು ಲಷ್ಕರೆ ತಯ್ಯಬಾ ಉಗ್ರ ಸಂಘಟನೆ ಬೆಂಬಲಿತ ಪಕ್ಷವಾಗಿರುವುದರಿಂದ ನಿಷೇಧಗೊಳಿಸಬೇಕು ಎಂದು ಪಾಕಿಸ್ತಾನ ಶಿಫಾರಸಿನಲ್ಲಿ ತಿಳಿಸಿದೆ.

ಅಷ್ಟೇ ಅಲ್ಲ, ಈ ಪಕ್ಷ ಲಾಹೋರಿನಲ್ಲಿ ಸೆಪ್ಟೆಂಬರ್ 17ರಂದು ನಡೆದ ಉಪ ಚುನಾವಣೆಯಲ್ಲಿ ಶೇ.5ರಷ್ಟು ಮತ ಗಳಿಸಿದ್ದು ಸಹ ಪಾಕಿಸ್ತಾನ ಸರಕಾರಕ್ಕೆ ನುಂಗಲಾರದ ತುತ್ತಾದ ಕಾರಣ ನಿಷೇಧಕ್ಕಾಗಿ ಶಿಫಾರಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಹಫೀಜ್ ಸಯೀದ್ ಗೃಹ ಬಂಧನದಲ್ಲಿದ್ದಾನೆ. ಈತನನ್ನು ಅಮೆರಿಕ ಉಗ್ರ ಎಂದು ಘೋಷಿಸಿದ್ದು, 2008ರಂದು ಮುಂಬೈ ಮೇಲೆ ನಡೆದ ಬಾಂಬ್ ದಾಳಿಯ ರೂವಾರಿ ಎಂದು ಸಹ ಘೋಷಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search