• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಶೇಖರ್ ಕೋಟ್ಯಾನ್ ದಕ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ?

Satish Acharya Posted On September 30, 2017
0


0
Shares
  • Share On Facebook
  • Tweet It

ಪರಮೇಶ್ವರ್ ಅವರು ಮುಂದಿನ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಲಿ, ಭವಿಷ್ಯದಲ್ಲಿ ರಾಷ್ಟ್ರಪತಿಯಾಗಲಿ ಎಂದು ಹಾರೈಸಿದ್ರು ಬಿ ಜನಾರ್ಧನ ಪೂಜಾರಿ. ಹಾಗೇ ಪ್ರಧಾನಿ ಕೂಡ ಆಗಲಿ ಎಂದು ಹಾರೈಸಬಹುದಿತ್ತೇನೋ, ಆದರೆ ಹಾಗೆ ಹಾರೈಸಿದಂತೆ ಕಾಣಲಿಲ್ಲ. ಇದರ ಅರ್ಥ ಇಷ್ಟೇ. ಪ್ರಧಾನ ಮಂತ್ರಿಯಾಗುವುದಾದರೆ ಮತ್ತೆ ಕಾಂಗ್ರೆಸ್ ರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಬೇಕು. ಆ ಬಗ್ಗೆ ಪೂಜಾರಿಯವರಿಗೆ ಅನುಮಾನಗಳಿರಬಹುದು. ಇನ್ನು ಒಂದು ವೇಳೆ ಯಾವತ್ತಾದರೂ ಬಂದ್ರೂ ಕೂಡ ರಾಹುಲ್ ಗಾಂಧಿಯವರಷ್ಟು ಅರ್ಹ ವ್ಯಕ್ತಿ ಕಾಂಗ್ರೆಸ್ ನಲ್ಲಿ ಬೇರೆ ಯಾರೂ ಇಲ್ಲದೇ ಇರುವುದರಿಂದ ಪೂಜಾರಿಯವರು ಪರಮೇಶ್ವರ್ ಪ್ರಧಾನಿಯಾಗಲಿ ಎಂದು ಹೇಳಿರಲಿಕ್ಕಿಲ್ಲ.
ಪರಮೇಶ್ವರ್ ಅವರ ಮೇಲೆ ಪೂಜಾರಿಯವರಿಗೆ ಎಷ್ಟು ಪ್ರೀತಿ ಇದೆಯೋ ಗೊತ್ತಿಲ್ಲ, ಆದರೆ ಅವರಿಗೆ ಆದಷ್ಟು ಬೇಗ ಸಿದ್ಧರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಎನ್ನುವ ಆಸೆ ಇದೆ. ಆದ್ದರಿಂದ ಚುನಾವಣೆ ಆದ ಬಳಿಕ ಶಾಸಕಾಂಗ ಸಭೆಯಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವ ಸಲಹೆ ಕೇಳಿ ನಂತರ ಅದಕ್ಕೆ ಹೈಕಮಾಂಡ್ ಒಪ್ಪಿಗೆ ಸಿಗಬೇಕು ಎನ್ನುವುದು ಗೊತ್ತಿದ್ದರೂ ಪೂಜಾರಿಯವರು ಪರಮೇಶ್ವರ್ ಸಿಎಂ ಆಗಲಿ ಎನ್ನುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಇನ್ನು ಜನಾರ್ಧನ ಪೂಜಾರಿಯವರಿಗೆ ಮುಂದಿನ ಬಾರಿ ಲೋಕಸಭೆಗೆ ಕಾಂಗ್ರೆಸ್ ಟಿಕೇಟ್ ಸಿಗುವುದು ನೂರಕ್ಕೆ ನೂರು ಸಾಧ್ಯವಿಲ್ಲದಿರುವುದರಿಂದ ಮತ್ತು ಪ್ರಸ್ತುತ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ಸಿನಿಂದ ಲೋಕಸಭೆಗೆ ಸಮರ್ಥ ಅಭ್ಯರ್ಥಿ ಇಲ್ಲದಿರುವುದರಿಂದ ಕಾಂಗ್ರೆಸ್ ಹೊಸ ಮುಖವೊಂದಕ್ಕೆ ಗಾಳ ಹಾಕಿದೆ. ಅವರ ಹೆಸರು ರಾಜಶೇಖರ್ ಕೋಟ್ಯಾನ್.
ಸಿನೆಮಾ ನಟ, ನಿರ್ಮಾಪಕ, ಬಿಲ್ಲವ ಮುಖಂಡ ರಾಜಶೇಖರ್ ಕೋಟ್ಯಾನ್ ಅವರನ್ನು ವಿದ್ಯುಕ್ತವಾಗಿ ಕಾಂಗ್ರೆಸ್ ಗೆ ಸೇರಿಸಿಕೊಂಡಿರುವ ಕಾಂಗ್ರೆಸ್ ಅವರಿಗೆ ದಕ್ಷಿಣ ಕನ್ನಡ ಲೋಕಸಭೆಗೆ ಟಿಕೇಟ್ ಕೊಡಲು ನಿರ್ಧರಿಸಿದೆ ಎಂದು ಪಕ್ಷದ ಒಳಗಿನ ಮೂಲಗಳಿಂದ ತಿಳಿದು ಬಂದಿದೆ. ಭರ್ಥಿ ಒಂದೂವರೆ ವರ್ಷ ಲೋಕಸಭಾ ಚುನಾವಣೆಗೆ ಸಮಯ ಇರುವುದರಿಂದ ಈಗಿನಿಂದಲೇ ತಯಾರಿ ನಡೆಸಲು ಅವರಿಗೆ ಸೂಚನೆ ಕೊಡಲಾಗಿದೆ ಎಂದು ಹೇಳಲಾಗುತ್ತಿದೆ. ಜನಾರ್ಧನ ಪೂಜಾರಿ ಬಿಟ್ಟು ಹೋಗಲಿರುವ ಸ್ಥಾನಕ್ಕೆ ರಾಜಶೇಖರ್ ಕೋಟ್ಯಾನ್ ಎಷ್ಟರಮಟ್ಟಿಗೆ ತಮ್ಮ ಪ್ರಭಾವ ತೋರಿಸಬಲ್ಲರು ಎನ್ನುವುದು ಬರುವ ದಿನಗಳಲ್ಲಿ ಗೊತ್ತಾಗಲಿದೆ. ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾಗಿ ಕಾಂಗ್ರೆಸ್ ನಿಂದ ಯಾರೂ ಗೆಲ್ಲದೆ ಎರಡು ದಶಕಗಳ ಮೇಲಾಗಿದೆ. ಹೀಗಿರುವಾಗ ಈಗ ಮತ್ತೆ ಜನರು ಕಾಂಗ್ರೆಸ್ಸಿಗೆ ಮಣೆ ಹಾಕುತ್ತಾರಾ ಎನ್ನುವುದು ಕಾಣುವ ಪ್ರಶ್ನೆ. ಮುಂದಿನ ಬಾರಿಯೂ ನರೇಂದ್ರ ಮೋದಿಯವರೇ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿರುವುದರಿಂದ ಮತ್ತು ಉಳಿದ ಒಂದೂವರೆ ವರ್ಷದಲ್ಲಿ ರಾಷ್ಟ್ರದ ಆರ್ಥಿಕ ಸ್ಥಿತ್ಯಂತರಗಳನ್ನು ಮರಳಿ ಟ್ರಾಕ್ ಗೆ ತಂದರೆ ಮೋದಿಯವರನ್ನು ಹಿಡಿಯುವುದು ಕಷ್ಟ. ಆಗ ಇದೇ ಫಲಿತಾಂಶ ಪುನರಾವರ್ತನೆ ಆದರೂ ಆಗಬಹುದು.

0
Shares
  • Share On Facebook
  • Tweet It


Rajshekhar Kotian


Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Satish Acharya November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Satish Acharya October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search