• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಾಂಧೀಜಿ ಕನಸು ನನಸಾಗುವತ್ತ, ಬದಲಾಗುತ್ತಿದೆ ಭಾರತ

TNN Correspondent Posted On October 2, 2017


  • Share On Facebook
  • Tweet It

ಅಕ್ಟೋಬರ್ 02

ಸರಿಯಾಗಿ ಮೂರು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧೀಜಿ ಕಂಡ ಸ್ವಚ್ಛ ಕನಸು ನನಸು ಮಾಡುವ ದಿಸೆಯಲ್ಲಿ ಸ್ವಚ್ಛ ಭಾರತ ಯೋಜನೆ ಜಾರಿಗೆ ತಂದರು. ಬರೀ ಯೋಜನೆ ಘೋಷಣೆ ಮಾಡಿ ಸುಮ್ಮನಿರದೇ, ತಾವೇ ರಸ್ತೆಗಿಳಿದು ಕಸ ಗುಡಿಸಿದರೆ.

ಇಷ್ಟಾದರೂ ಟೀಕೆಗಳು ವ್ಯಕ್ತವಾದವು. ಒಂದು ದಿನ ಪೊರಕೆ ಹಿಡಿದು ನಿಂತರೆಲ್ಲ ದೇಶ ಸ್ವಚ್ಛವಾಗಲ್ಲ ಎಂದರು. ಯೋಜನೆ ಯಶಸ್ಸಾಗಲು ಸಾಧ್ಯವಿಲ್ಲ ಎಂದು ಅಡ್ಡಬಾಯಿ ಹಾಕಿದರು. ಇದು ಪ್ರಚಾರದ ಗಿಮಿಕ್ ಎಂದು ಕಟಕಿಯಾಡಿದರು.

ಆದರೆ ಏನಾಯಿತು?

ಆದರೆ ಈ ಮೂರು ವರ್ಷಗಳಲ್ಲಿ ಯೋಜನೆ ಯಶಸ್ಸಿನತ್ತ ಸಾಗುತ್ತಿದೆ. ಈ ಅವಧಿಯಲ್ಲಿ ಸ್ವಚ್ಛ ಭಾರತ ಯೋಜನೆ ಜನರಲ್ಲಿ ಜಾಗೃತಿ ಮೂಡಿಸಿದೆ ಎಂದು ಲೋಕಲ್ ಸರ್ಕಲ್ಸ್ ಎಂಬ ಸಂಸ್ಥೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಸಿದ ಸಮೀಕ್ಷೆಯಿಂದ ತಿಳಿದುಬಂದಿದೆ.

ಈ ಸಂಸ್ಥೆ ಸಾಮಾಜಿಕ ಜಾಲತಾಣಗಳ ಮೂಲಕ 11 ಪ್ರಶ್ನೆ ಕೇಳಿದ್ದು, ಎಲ್ಲದರಲ್ಲೂ ಯೋಜನೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದೆ ಎಂದೇ ಹೇಳಿದ್ದಾರೆ.

2014ಕ್ಕೆ ಹೋಲಿಸಿದರೆ ನಿಮ್ಮ ಸುತ್ತಲಿನ ವಾತಾವರಣ ಸ್ವಚ್ಛತೆಯಿಂದ ಕೂಡಿದೆಯೇ? ಎಂಬ ಪ್ರಶ್ನೆಗೆ ಪರವಾಗಿಲ್ಲ ಎಂದು ಶೇ.29ರಷ್ಟು ಜನ, ಶೇ.18ರಷ್ಟು ಮಂದಿ ಉತ್ತಮವಾಗಿ ಆಗಿದೆ ಎಂದರೆ ಶೇ.9ರಷ್ಟು ಜನ ಸಂಪೂರ್ಣವಾಗಿ ಸ್ವಚ್ಛವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶೇ.18ರಷ್ಟು ಜನ ಸಾರ್ವಜನಿಕ ಶೌಚಾಲಯಗಳ ಲಭ್ಯತೆ ಹೆಚ್ಚಾಗಿದೆ ಎಂದು ಅಭಿಪ್ರಾಯ ತಿಳಿಸಿದ್ದಾರೆ. ಆದಾಗ್ಯೂ, ಶೇ.22ರಷ್ಟು ಮಂದಿ ಪುರಸಭೆಯವರು ಸ್ವಚ್ಛತೆಗೆ ಆದ್ಯತೆ ನೀಡುತ್ತಿದ್ದಾರೆ, ನಾಗರಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದೆ ಎಂದು ಶೇ.32ರಷ್ಟು ಜನ ತಿಳಿಸಿದ್ದಾರೆ.

ಹೀಗೆ ಆನ್ ಲೈನ್ ಸಂಸ್ಥೆಯ ಬಹುತೇಕ ಪ್ರಶ್ನೆಗಳಿಗೆ ಯೋಜನೆ ಯಶಸ್ವಿಯಾಗಿದೆ ಎಂದೇ ಅಭಿಪ್ರಾಯ ತಿಳಿಸಿದ್ದಾರೆ.

:

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search