• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರ್ಥಿಕತೆಗೆ ಚೇತರಿಕೆ ಬೂಸ್ಟರ್ ನೀಡಲು ಬದ್ಧ: ಪ್ರಧಾನಿ

TNN Correspondent Posted On October 5, 2017
0


0
Shares
  • Share On Facebook
  • Tweet It

>> ಯುಪಿಎ ಅವಧಿಯಲ್ಲಿ ಎಂಟು ಬಾರಿ ಜಿಡಿಪಿ ಹಳ್ಳ ಹಿಡಿದಿತ್ತು!

>> ಕೊನೆಯ ತ್ರೈಮಾಸಿಕದಲ್ಲಿ ಜಿಡಿಪಿ 7.7% ದಾಖಲಾಗುವ ವಿಶ್ವಾಸ ಆರ್‍ಬಿಐ ಹೊಂದಿದೆ

>> ಮೂರು ವರ್ಷದಲ್ಲಿ 21 ಕ್ಷೇತ್ರದಲ್ಲಿ 87 ಕ್ರಾಂತಿಕಾರಿ ಸುಧಾರಣೆಗಳು

>> 125 ಕೋಟಿ ಜನರಿಗೆ ನೋಟು ನಿಷೇಧ, ಜಿಎಸ್‍ಟಿಯ ಲಾಭಗಳು ಭವಿಷ್ಯದಲ್ಲಿ ಅರಿವಾಗಲಿದೆ

ನವದೆಹಲಿ : ಮೊದಲ ತ್ರೈಮಾಸಿಕದಲ್ಲಿ 5.7%ಗೆ ಜಿಡಿಪಿ ಕುಸಿಯಲು ಪ್ರಧಾನಿ ಮೋದಿ ಅವರ ರಾಷ್ಟ್ರೀಯ ನೀತಿಗಳ ದುರ್ಬಲತೆಯೇ ಕಾರಣ ಎಂದು ತಿಂಗಳಿನಿಂದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯಲು ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ಮುಖಂಡರಿಗೆ ಬುಧವಾರ ಮೋದಿ ತಕ್ಕ ಪ್ರತ್ಯುತ್ತರ ಕೊಟ್ಟಿದ್ದಾರೆ.
ಯಾರ 10 ವರ್ಷಗಳ ಅವಧಿಯಲ್ಲಿ ಎಂಟು ಬಾರಿ ಹೀನಾಯ ಅವಸ್ಥೆಗೆ ಜಿಡಿಪಿ ಕುಸಿದರೂ ಗೌಪ್ಯವಾಗಿಟ್ಟು ದೇಶದ ಜನರನ್ನು ದಡ್ಡರನ್ನಾಗಿಸಿದರೋ ಅಂಥವರು ಟೀಕೆಗೆ ಮುಂದಾಗಿದ್ದಾರೆ. ಕೆಲವರಿಗೆ ಅತೃಪ್ತ ವಾತಾವರಣ ನಿರ್ಮಾಣ ಮಾಡದ ಹೊರತು ನಿದ್ದೆ ಬರುವುದಿಲ್ಲ ಎಂದು ಮೋದಿ ಕಾಂಗ್ರೆಸ್ ಟೀಕಾಕಾರರಿಗೆ ತಪರಾಕಿ ಹಾಕಿದ್ದಾರೆ.
ದೇಶದ ಆರ್ಥಿಕತೆ ಸದೃಢವಾಗಿದೆ. ತಾತ್ಕಾಲಿಕ ಕುಸಿತದ ಚೇತರಿಕೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸ್ತುತ ಎದುರಾಗುವ ಯಾವುದೇ ಸವಾಲಿಗೆ ಆರ್ಥಿಕತೆ ದುರ್ಬಲವಾಗಲು ಬಿಡಲ್ಲ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.
ಭಾರತೀಯ ಕಂಪನಿ ಸೆಕ್ರೆಟರೀಸ್ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡುತ್ತಿದ್ದರು.


ಯುಪಿಎ ಅವಧಿಯ 10% ಹಣದುಬ್ಬರವನ್ನು 2.5%ಗೆ ಇಳಿಸಿದ್ದೇವೆ. ಚಾಲ್ತಿ ಖಾತೆ ವಿತ್ತೀಯ ಕೊರತೆ 4% ಇದ್ದದ್ದನ್ನು 1%ಗೆ ಕಡಿಮೆ ಮಾಡಿದ್ದೇವೆ. ಎಲ್ಲಕ್ಕಿಂತ ಹೆಚ್ಚಾಗಿ ವಿತ್ತೀಯ ಕೊರತೆ 1% ಇಳಿಕೆ ಕಂಡಿರುವುದು ಗಮನಾರ್ಹ. ಇದನ್ನು ಜನರಿಗೆ ತಿಳಿಸಿವುದು ಬಿಟ್ಟು ಇವುಗಳನ್ನು ಕೆಲವರು ಮರೆಮಾಚಲು ಜಿಡಿಪಿ ಹಿಂದೆ ಬಿದ್ದಿದ್ದಾರೆ ಎಂದು ಮೋದಿ ಕಾಂಗ್ರೆಸ್ ಕಾಲೆಳೆದಿದ್ದಾರೆ.

ಪ್ರಾಮಾಣಿಕ ಜನರ ಹಣ ಸುರಕ್ಷಿತವಾಗಿದೆ. ಅದರ ಜವಾಬ್ದಾರಿಯನ್ನು ನಾವು ಅರಿತಿದ್ದೇವೆ. ಕಪ್ಪು ಹಣದ ಕುಳಗಳು ಮತ್ತು ಭ್ರಷ್ಟರಿಗೆ ಖಂಡಿತ ಮುಂದಿನ ದಿನಗಳು ನರಕವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಶತಾಯಗತಾಯ 2022ರೊಳಗೆ ಶೆಲ್ ಕಂಪನಿ(ಬೇನಾಮಿ ಕಂಪನಿಗಳು)ಗಳಿಗೆಲ್ಲಾ ಬೀಗ ಜಡಿದೇ ಜಡಿಯುತ್ತೇವೆ ಎಂದು ಅವರು ಗುಡುಗಿದ್ದಾರೆ.

 

0
Shares
  • Share On Facebook
  • Tweet It


%companyeconomygandhigdpgrowthICSIindiaindianmanmohanministermodipeopleprimerahulsecretarysoniatodayupa


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹೀಗೆ ಬಿಟ್ಟರೆ ಸ್ಮಾರ್ಟ್ ಸಿಟಿ ಹಣದಿಂದ ಖಾದರ್ ಶಾದಿ ಮಹಾಲ್ ಕಟ್ಟುತ್ತೇನೆ ಅಂದರೂ ಅನ್ನಬಹುದು!
October 9, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search