• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜಿಎಸ್ಟಿ ವಿರೋಧಿಗಳೇ, ವಿಶ್ವ ಬ್ಯಾಂಕ್ ಅಧ್ಯಕ್ಷರೇ ಜಿಎಸ್ಟಿ ಕುರಿತು ಏನು ಹೇಳಿದ್ದಾರೆ ಕೇಳಿ

TNN Correspondent Posted On October 8, 2017
0


0
Shares
  • Share On Facebook
  • Tweet It

ಕೇಂದ್ರ ಸರ್ಕಾರ ತೆರಿಗೆ ಸುಧಾರಣೆಗಾಗಿ ಜಿಎಸ್ಟಿ ಜಾರಿಗೊಳಿಸುತ್ತಲೇ ಕೆಲವು ಅತೃಪ್ತ ಆತ್ಮಗಳು ಬಾಯಿಗೆ ಬಂದ ಹಾಗೆ ಮಾತನಾಡಿದವು. ಇದು ದೇಶದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡುವ, ಬಡವರ ದುಡ್ಡು ಹೀರುವ ಯೋಜನೆ ಎಂದು ಜರಿದರು. ಇನ್ನೂ ಕೆಲವರು ಹತ್ತು ರೂಪಾಯಿ ಕೊಟ್ಟು ಕುಡಿಯುವ ಕಾಫಿಯನ್ನು ಕಾಫಿ ಡೇನಲ್ಲಿ ಕುಡಿದು 150 ರೂಪಾಯಿ ಜತೆ ಸೇರಿದ ಜಿಎಸ್ಟಿ ಬಿಲ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಯೋಜನೆ ವಿರುದ್ಧ ಮಾತನಾಡಿದರು. ಆದರೆ ಜಿಎಸ್ಟಿಯಿಂದ ಯಾವಾಗ ತೆರಿಗೆದಾರರು ಹೆಚ್ಚಾದರು, ತೆರಿಗೆ ಸಂಗ್ರಹ ಹೆಚ್ಚಾಯಿತು ಎಂದು ವರದಿಗಳು ಬಿಡುಗಡೆಯಾದವೋ ಒಬ್ಬೊಬ್ಬರೇ ಬಾಯಿಮುಚ್ಚಿಕೊಂಡರು.

ಆದರೆ ಕೆಲವರು ತಮ್ಮ ಬಾಯಿಗೆ ಬೀಗ ಹಾಕಿಕೊಂಡಿರಲಿಲ್ಲ. ಈಗ ಅವರೂ ಸುಮ್ಮನಾಗುವ ಪರಿಸ್ಥಿತಿ ಬಂದೊದಗಿದೆ.

ಹೌದು, ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರೇ ಸರಕು ಮತ್ತು ಸೇವಾ ತೆರಿಗೆ ಕುರಿತು ಸಕಾರಾತ್ಮಕವಾಗಿ ಮಾತನಾಡಿದ್ದಾರೆ. ಭಾರತವನ್ನು ಮೆಚ್ಚಿಸಲು ಅಲ್ಲ, ವಾಸ್ತವ ಬಿಚ್ಚಿಟ್ಟಿದ್ದು, ಜಿಎಸ್ಟಿಯಿಂದ ಭಾರತದ ಆರ್ಥಿಕತೆ ಏಳಿಗೆ ಕಾಣುತ್ತಿದೆ ಎಂದಿದ್ದಾರೆ.

ವಿಶ್ವಬ್ಯಾಂಕ್ ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಭಾರತ ಹಲವು ಸವಾಲುಗಳನ್ನು ಮೆಟ್ಟಿನಿಲ್ಲುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಜಿಎಸ್ಟಿಯಂಥ ಯೋಜನೆ ಜಾರಿಗೊಳಿಸುವ ಮೂಲಕ ದೇಶದ ಆರ್ಥಿಕ ಸ್ಥಿತಿಯನ್ನು ಮೇಲೆತ್ತುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಮೋದಿ ಕುರಿತು ಸಹ ಮಾತನಾಡಿದ್ದು, ನರೇಂದ್ರ ಮೋದಿ ನನಗೆ ವೈಯಕ್ತಿಕವಾಗಿ ಗೊತ್ತು. ಅವರು ಅಭಿವೃದ್ಧಿ ಕುರಿತು ಇಟ್ಟುಕೊಂಡ ಬದ್ಧತೆ ನನಗೆ ಇಷ್ಟ. ಭಾರತದಲ್ಲಿ ಪ್ರತಿಯೊಬ್ಬರಿಗೂ ಅವಕಾಶ ಸೃಷ್ಟಿಸಲು ಅವರು ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ ಎಂದಿದ್ದಾರೆ.

ವಿಶ್ವಬ್ಯಾಕ್ ನಂಥ ಅಂತಾರಾಷ್ಟ್ರೀಯ ಬ್ಯಾಂಕಿನ ಅಧ್ಯಕ್ಷರೇ ಜಿಎಸ್ಟಿ ಬಗ್ಗೆ ಹೊಗಳುತ್ತಿರುವಾಗ ನಮಲ್ಲಿರುವ ಅತೃಪ್ತ ಆತ್ಮಗಳು ಏಕೆ ಬಾಯಿ ಬಡಿದುಕೊಳ್ಳುತ್ತಾವೋ ಗೊತ್ತಿಲ್ಲ. ಇನ್ನು ಮುಂದೆ ಅದನ್ನು ನಿಲ್ಲಿಸದೆ ಬೇರೆ ದಾರಿಯಿಲ್ಲ.

 

 

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search