• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜಿಎಸ್ಟಿ ವಿರೋಧಿಗಳೇ, ವಿಶ್ವ ಬ್ಯಾಂಕ್ ಅಧ್ಯಕ್ಷರೇ ಜಿಎಸ್ಟಿ ಕುರಿತು ಏನು ಹೇಳಿದ್ದಾರೆ ಕೇಳಿ

TNN Correspondent Posted On October 8, 2017
0


0
Shares
  • Share On Facebook
  • Tweet It

ಕೇಂದ್ರ ಸರ್ಕಾರ ತೆರಿಗೆ ಸುಧಾರಣೆಗಾಗಿ ಜಿಎಸ್ಟಿ ಜಾರಿಗೊಳಿಸುತ್ತಲೇ ಕೆಲವು ಅತೃಪ್ತ ಆತ್ಮಗಳು ಬಾಯಿಗೆ ಬಂದ ಹಾಗೆ ಮಾತನಾಡಿದವು. ಇದು ದೇಶದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡುವ, ಬಡವರ ದುಡ್ಡು ಹೀರುವ ಯೋಜನೆ ಎಂದು ಜರಿದರು. ಇನ್ನೂ ಕೆಲವರು ಹತ್ತು ರೂಪಾಯಿ ಕೊಟ್ಟು ಕುಡಿಯುವ ಕಾಫಿಯನ್ನು ಕಾಫಿ ಡೇನಲ್ಲಿ ಕುಡಿದು 150 ರೂಪಾಯಿ ಜತೆ ಸೇರಿದ ಜಿಎಸ್ಟಿ ಬಿಲ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಯೋಜನೆ ವಿರುದ್ಧ ಮಾತನಾಡಿದರು. ಆದರೆ ಜಿಎಸ್ಟಿಯಿಂದ ಯಾವಾಗ ತೆರಿಗೆದಾರರು ಹೆಚ್ಚಾದರು, ತೆರಿಗೆ ಸಂಗ್ರಹ ಹೆಚ್ಚಾಯಿತು ಎಂದು ವರದಿಗಳು ಬಿಡುಗಡೆಯಾದವೋ ಒಬ್ಬೊಬ್ಬರೇ ಬಾಯಿಮುಚ್ಚಿಕೊಂಡರು.

ಆದರೆ ಕೆಲವರು ತಮ್ಮ ಬಾಯಿಗೆ ಬೀಗ ಹಾಕಿಕೊಂಡಿರಲಿಲ್ಲ. ಈಗ ಅವರೂ ಸುಮ್ಮನಾಗುವ ಪರಿಸ್ಥಿತಿ ಬಂದೊದಗಿದೆ.

ಹೌದು, ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರೇ ಸರಕು ಮತ್ತು ಸೇವಾ ತೆರಿಗೆ ಕುರಿತು ಸಕಾರಾತ್ಮಕವಾಗಿ ಮಾತನಾಡಿದ್ದಾರೆ. ಭಾರತವನ್ನು ಮೆಚ್ಚಿಸಲು ಅಲ್ಲ, ವಾಸ್ತವ ಬಿಚ್ಚಿಟ್ಟಿದ್ದು, ಜಿಎಸ್ಟಿಯಿಂದ ಭಾರತದ ಆರ್ಥಿಕತೆ ಏಳಿಗೆ ಕಾಣುತ್ತಿದೆ ಎಂದಿದ್ದಾರೆ.

ವಿಶ್ವಬ್ಯಾಂಕ್ ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಭಾರತ ಹಲವು ಸವಾಲುಗಳನ್ನು ಮೆಟ್ಟಿನಿಲ್ಲುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಜಿಎಸ್ಟಿಯಂಥ ಯೋಜನೆ ಜಾರಿಗೊಳಿಸುವ ಮೂಲಕ ದೇಶದ ಆರ್ಥಿಕ ಸ್ಥಿತಿಯನ್ನು ಮೇಲೆತ್ತುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಮೋದಿ ಕುರಿತು ಸಹ ಮಾತನಾಡಿದ್ದು, ನರೇಂದ್ರ ಮೋದಿ ನನಗೆ ವೈಯಕ್ತಿಕವಾಗಿ ಗೊತ್ತು. ಅವರು ಅಭಿವೃದ್ಧಿ ಕುರಿತು ಇಟ್ಟುಕೊಂಡ ಬದ್ಧತೆ ನನಗೆ ಇಷ್ಟ. ಭಾರತದಲ್ಲಿ ಪ್ರತಿಯೊಬ್ಬರಿಗೂ ಅವಕಾಶ ಸೃಷ್ಟಿಸಲು ಅವರು ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ ಎಂದಿದ್ದಾರೆ.

ವಿಶ್ವಬ್ಯಾಕ್ ನಂಥ ಅಂತಾರಾಷ್ಟ್ರೀಯ ಬ್ಯಾಂಕಿನ ಅಧ್ಯಕ್ಷರೇ ಜಿಎಸ್ಟಿ ಬಗ್ಗೆ ಹೊಗಳುತ್ತಿರುವಾಗ ನಮಲ್ಲಿರುವ ಅತೃಪ್ತ ಆತ್ಮಗಳು ಏಕೆ ಬಾಯಿ ಬಡಿದುಕೊಳ್ಳುತ್ತಾವೋ ಗೊತ್ತಿಲ್ಲ. ಇನ್ನು ಮುಂದೆ ಅದನ್ನು ನಿಲ್ಲಿಸದೆ ಬೇರೆ ದಾರಿಯಿಲ್ಲ.

 

 

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search