• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜಿಎಸ್ಟಿ ವಿರೋಧಿಗಳೇ, ವಿಶ್ವ ಬ್ಯಾಂಕ್ ಅಧ್ಯಕ್ಷರೇ ಜಿಎಸ್ಟಿ ಕುರಿತು ಏನು ಹೇಳಿದ್ದಾರೆ ಕೇಳಿ

TNN Correspondent Posted On October 8, 2017
0


0
Shares
  • Share On Facebook
  • Tweet It

ಕೇಂದ್ರ ಸರ್ಕಾರ ತೆರಿಗೆ ಸುಧಾರಣೆಗಾಗಿ ಜಿಎಸ್ಟಿ ಜಾರಿಗೊಳಿಸುತ್ತಲೇ ಕೆಲವು ಅತೃಪ್ತ ಆತ್ಮಗಳು ಬಾಯಿಗೆ ಬಂದ ಹಾಗೆ ಮಾತನಾಡಿದವು. ಇದು ದೇಶದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡುವ, ಬಡವರ ದುಡ್ಡು ಹೀರುವ ಯೋಜನೆ ಎಂದು ಜರಿದರು. ಇನ್ನೂ ಕೆಲವರು ಹತ್ತು ರೂಪಾಯಿ ಕೊಟ್ಟು ಕುಡಿಯುವ ಕಾಫಿಯನ್ನು ಕಾಫಿ ಡೇನಲ್ಲಿ ಕುಡಿದು 150 ರೂಪಾಯಿ ಜತೆ ಸೇರಿದ ಜಿಎಸ್ಟಿ ಬಿಲ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಯೋಜನೆ ವಿರುದ್ಧ ಮಾತನಾಡಿದರು. ಆದರೆ ಜಿಎಸ್ಟಿಯಿಂದ ಯಾವಾಗ ತೆರಿಗೆದಾರರು ಹೆಚ್ಚಾದರು, ತೆರಿಗೆ ಸಂಗ್ರಹ ಹೆಚ್ಚಾಯಿತು ಎಂದು ವರದಿಗಳು ಬಿಡುಗಡೆಯಾದವೋ ಒಬ್ಬೊಬ್ಬರೇ ಬಾಯಿಮುಚ್ಚಿಕೊಂಡರು.

ಆದರೆ ಕೆಲವರು ತಮ್ಮ ಬಾಯಿಗೆ ಬೀಗ ಹಾಕಿಕೊಂಡಿರಲಿಲ್ಲ. ಈಗ ಅವರೂ ಸುಮ್ಮನಾಗುವ ಪರಿಸ್ಥಿತಿ ಬಂದೊದಗಿದೆ.

ಹೌದು, ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರೇ ಸರಕು ಮತ್ತು ಸೇವಾ ತೆರಿಗೆ ಕುರಿತು ಸಕಾರಾತ್ಮಕವಾಗಿ ಮಾತನಾಡಿದ್ದಾರೆ. ಭಾರತವನ್ನು ಮೆಚ್ಚಿಸಲು ಅಲ್ಲ, ವಾಸ್ತವ ಬಿಚ್ಚಿಟ್ಟಿದ್ದು, ಜಿಎಸ್ಟಿಯಿಂದ ಭಾರತದ ಆರ್ಥಿಕತೆ ಏಳಿಗೆ ಕಾಣುತ್ತಿದೆ ಎಂದಿದ್ದಾರೆ.

ವಿಶ್ವಬ್ಯಾಂಕ್ ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಭಾರತ ಹಲವು ಸವಾಲುಗಳನ್ನು ಮೆಟ್ಟಿನಿಲ್ಲುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಜಿಎಸ್ಟಿಯಂಥ ಯೋಜನೆ ಜಾರಿಗೊಳಿಸುವ ಮೂಲಕ ದೇಶದ ಆರ್ಥಿಕ ಸ್ಥಿತಿಯನ್ನು ಮೇಲೆತ್ತುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಮೋದಿ ಕುರಿತು ಸಹ ಮಾತನಾಡಿದ್ದು, ನರೇಂದ್ರ ಮೋದಿ ನನಗೆ ವೈಯಕ್ತಿಕವಾಗಿ ಗೊತ್ತು. ಅವರು ಅಭಿವೃದ್ಧಿ ಕುರಿತು ಇಟ್ಟುಕೊಂಡ ಬದ್ಧತೆ ನನಗೆ ಇಷ್ಟ. ಭಾರತದಲ್ಲಿ ಪ್ರತಿಯೊಬ್ಬರಿಗೂ ಅವಕಾಶ ಸೃಷ್ಟಿಸಲು ಅವರು ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ ಎಂದಿದ್ದಾರೆ.

ವಿಶ್ವಬ್ಯಾಕ್ ನಂಥ ಅಂತಾರಾಷ್ಟ್ರೀಯ ಬ್ಯಾಂಕಿನ ಅಧ್ಯಕ್ಷರೇ ಜಿಎಸ್ಟಿ ಬಗ್ಗೆ ಹೊಗಳುತ್ತಿರುವಾಗ ನಮಲ್ಲಿರುವ ಅತೃಪ್ತ ಆತ್ಮಗಳು ಏಕೆ ಬಾಯಿ ಬಡಿದುಕೊಳ್ಳುತ್ತಾವೋ ಗೊತ್ತಿಲ್ಲ. ಇನ್ನು ಮುಂದೆ ಅದನ್ನು ನಿಲ್ಲಿಸದೆ ಬೇರೆ ದಾರಿಯಿಲ್ಲ.

 

 

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search