• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶಸೇವೆಗೆ ಹುಟ್ಟೂರಿನ ಜನರ ಪ್ರೀತಿಯೇ ಕಾರಣ: ಮೋದಿ

TNN Correspondent Posted On October 9, 2017


  • Share On Facebook
  • Tweet It

ಗಾಂಧಿನಗರ: ನಾನು ದೇಶಕ್ಕಾಗಿ ದುಡಿಯಲು ಹುಟ್ಟೂರಿನ ಜನರ ಸಹಕಾರ ಹಾಗೂ ಇಲ್ಲಿನ ಮಣ್ಣೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಹುಟ್ಟೂರಾದ ಮೆಹ್ಸಾನ ಜಿಲ್ಲೆಯ ವಡನಗರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಇದೇ ಮಣ್ಣಿನಲ್ಲಿ ಹುಟ್ಟಿ ಬೆಳೆದಿದ್ದೇನೆ. ಇದೇ ಮಣ್ಣು ನನ್ನಲ್ಲಿ ಸಂಸ್ಕಾರ, ಸಂಸ್ಕೃತಿ ಮೂಡಿಸಿದೆ. ಅಲ್ಲದೆ ಹೆಚ್ಚು ಸ್ಫೂರ್ತಿಯಿಂದ ಕೆಲಸ ಮಾಡಲು ವಡನಗರದ ಜನರ ಪ್ರೀತಿ ಸಹಕಾರವೇ ಚೈತನ್ಯ ಮೂಡಿಸಿದೆ ಎಂದರು.

ಇನ್ನೇನು ಗುಜರಾತ್ ನಲ್ಲಿ ವಿಧಾನಸಭೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಮೋದಿ ಅವರ ಗುಜರಾತ್ ಭೇಟಿ ಗಮನ ಸೆಳೆದಿದೆ. ಮೋದಿ ವಡನಗರದಲ್ಲಿ ರೋಡ್ ಶೋ ನಡೆಸಿದರು. ಅವರನ್ನು ನೋಡಲು ರಸ್ತೆಯುದ್ದಕ್ಕೂ ಜನ ನಿಂತಿದ್ದರು. ಮೋದಿ ಮೋದಿ ಎಂಬ ಝೇಂಕಾರ ಮೊಳಗುತ್ತಿತ್ತು. ಮೋದಿ ಅವರಿಗೆ ಭವ್ಯ ಸ್ವಾಗತ ಕೋರಲು ಇಡೀ ನಗರವನ್ನು ಸಿಂಗರಿಸಲಾಗಿತ್ತು.

ಆದಾಗ್ಯೂ ಮೋದಿ ಎರಡು ದಿನದ ಗುಜರಾತ್ ಭೇಟಿಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
Tulunadu News September 25, 2023
ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
Tulunadu News September 22, 2023
Leave A Reply

  • Recent Posts

    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
    • ಭಾರತ್ ಮಾತಾ ಕೀ ಜೈ ಎಂದು ಮೀಡಿಯಾ ಸೆಂಟರ್ ನಲ್ಲಿ ಉದ್ಘೋಷಣೆ!
    • ಈ ಬಾರಿ ಮಹಿಷ ದಸರಾ ಯಾಕೆ ನಡೆಯಬೇಕು!
    • ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!
  • Popular Posts

    • 1
      ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • 2
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search