• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ಸಿದ್ದರಾಮಯ್ಯನವರೇ, ಮೊದಲು ಗುಂಡಿ ಮುಚ್ಚಿ ಮಾರ್ರೆ

-ರಾಘವೇಂದ್ರ ಬೆಳ್ತಂಗಡಿ, ಸಾಫ್ಟ್ ವೇರ್ ಉದ್ಯೋಗಿ, ಬೆಂಗಳೂರು Posted On October 9, 2017
0


0
Shares
  • Share On Facebook
  • Tweet It

ರಸ್ತೆ ಮೇಲೆ ನಡೆದಾಡುವಾಗ ತಲೆ ಮೇಲೆ ವಿದ್ಯುತ್ ತಂತಿ ಕಡಿದು ಬೀಳಬಹುದು, ವಿದ್ಯುತ್ ನಿರೋಧಕ ಜಾಕೆಟ್ ಬಳಸಿ, ಬಸ್ ಆ್ಯಕ್ಸಿಡೆಂಟ್ ಆದಾಗ ಅನಾಹುತ ಸಂಭವಿಸಬಹುದು, ಬಸ್ಸಿನಲ್ಲಿ ಕೂತಾಗಲೂ ಹೆಲ್ಮೆಟ್ ಧರಿಸಿ, ಕೋಣೆಯಲ್ಲಿ ಕುಳಿತಾಗ ಭೂಕಂಪವಾಗಬಹುದು, ಆ್ಯಂಟಿ ಅರ್ಥ್ ಕ್ವೇಕ್ ಕೋಣೆಯಲ್ಲೇ ಕುಳಿತು ಕೆಲಸ ಮಾಡಿ…

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಿದಾಗ ಈ ಜೋಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು…

ಆದರೆ, ಸಿದ್ದರಾಮಯ್ಯನವರ “ಜಾಣತನ” ಜಗಜ್ಜಾಹೀರಾಯ್ತು…

ಒಂದು ವಾರದ ಹಿಂದಷ್ಟೇ ಮೈಸೂರು ರಸ್ತೆಯ ಫ್ಲೈ ಓವರ್ ಮೇಲೆ ಗುಂಡಿಗಳಿಂದಾಗಿ ದಂಪತಿ ಮೃತಪಟ್ಟರು. ಭಾನುವಾರ ಬೆಳಗ್ಗೆ ಇದೇ ಮೈಸೂರು ರಸ್ತೆಯಲ್ಲಿ 34 ವರ್ಷದ ರಾಧಾ ಎಂಬುವವರು ಇದೇ ಗುಂಡಿಗಳಿಗೆ ಬಲಿಯಾಗಿದ್ದಾರೆ. ಒಂದೇ ವಾರದ ಅಂತರದಲ್ಲಿ ಮೈಸೂರು ರಸ್ತೆಯೊಂದರ ಗುಂಡಿಗಳಿಗೆ ಮೂವರು ಪ್ರಾಣ ತೆತ್ತಿದ್ದಾರೆ. ಬೆಂಗಳೂರಿನ ಯಾವುದೇ ಮೂಲೆಗೆ ಹೋದರು ಗುಂಡಿಗಳ ಮಧ್ಯೆಯೇ ರಸ್ತೆ ಇದೆ ಎನ್ನಿಸುವಷ್ಟರಮಟ್ಟಿಗೆ ಗುಂಡಿರಸ್ತೆಯಾಗಿ ಪರಿಣಮಿಸಿವೆ. ಅಪಘಾತಗಳು ನಿತ್ಯ ನಿರಂತರ ಎಂಬಂತಾಗಿವೆ.

ಇಷ್ಟಾದರೂ ರಾಜ್ಯದ ಉಸ್ತುವಾರಿ ವಹಿಸಿಕೊಂಡಿರುವ ಸಿದ್ದರಾಮಯ್ಯನವರು ಮಾತ್ರ ಮಗುಮ್ಮಾಗಿ ಕುಳಿತಿದ್ದಾರೆ. ಇವರ ಅವಧಿಯಲ್ಲೇ ಬೆಂಗಳೂರು ಅಭಿವೃದ್ಧಿಗೆ ನಗರಾಭಿವೃದ್ಧಿ ಖಾತೆ ರಚಿಸಿದ್ದಾರಾದರೂ, ಬೆಂಗಳೂರು ಪ್ಯಾರಿಸ್ ರೇಂಜಿಗೆ ಆಗದಿದ್ದರೂ, ಕನಿಷ್ಠ ರಸ್ತೆಯಂಥ ಮೂಲ ಸೌಕರ್ಯವೂ ಒದಗಿಸಿಲ್ಲ ಎಂಬುದೇ ದುರಂತ.

ಹಾಗಂತ, ಸಿದ್ದರಾಮಯ್ಯನವರು ಜಾರಿಗೆ ತಂದ, ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಯೋಜನೆಯನ್ನು ಟೀಕಿಸುತ್ತಿಲ್ಲ. ಆದರೆ, ಇಂಥ ನಿಯಮ ಜಾರಿ ಮಾಡುವ ಜತೆಗೆ ರಸ್ತೆಗಳನ್ನು ಚೆನ್ನಾಗಿ ಇಟ್ಟುಕೊಳ್ಳಬೇಕಲ್ಲವೇ? ಕಾಲಕಾಲಕ್ಕೆ ದುರಸ್ತಿ ಮಾಡಿಸಬೇಕಲ್ಲವೇ?

ಬಿಬಿಎಂಪಿ ವರದಿ ಪ್ರಕಾರ ಬೆಂಗಳೂರಿನಲ್ಲಿ 15 ಸಾವಿರಕ್ಕೂ ಅಧಿಕ ಗುಂಡಿಗಳಿವೆಯಂತೆ. ಅಲ್ಲ ಸ್ವಾಮಿ, ರಸ್ತೆಯೇ ನೆಟ್ಟಗಿಡದೇ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿದರೆ ಏನು ಪ್ರಯೋಜನ? ಗುಂಡಿಗೆ ಒಂದು ಜೀವ ಎಂದರೂ 15 ಸಾವಿರ ಜನ ಸಾಯುತ್ತಾರೆ. ಆಗ ಹೆಲ್ಮೆಟ್ ಬಂದು ಜೀವ ಉಳಿಸುತ್ತದೆಯೇ?

ಮಳೆ ಬಂದರೆ ನೆನೆಯಬಹುದು ಎಂದು ತಾರಸಿ ದುರಸ್ತಿಗೊಳಿಸಬೇಕೆ ಹೊರತು, ಮನೆಯಲ್ಲಿ ಛತ್ರಿ ಇಟ್ಟುಕೊಳ್ಳುವುದು ಕಡ್ಡಾಯ ಎಂದು ನಿಯಮ ಜಾರಿಗೊಳಿಸುವುದಲ್ಲ ಸಿದ್ದರಾಮಯ್ಯನವರೇ. ನಿಮ್ಮ ಹೆಲ್ಮೆಟ್ ಯೋಜನೆ ಕೊಡೆ ಕಡ್ಡಾಯಗೊಳಿಸಿದಂತಿದೆ. ಮೊದಲು ಯೋಜನೆ ಜಾರಿಗೆ ಮುನ್ನ ಯೋಚಿಸಿ, ಅದಕ್ಕೂ ಮೊದಲು ಗುಂಡಿ ಮುಚ್ಚಿಸಿ ಮಾರ್ರೆ. ಇಲ್ಲದಿದ್ದರೆ ಗುಂಡಿಗೆ ಬಲಿ ಎಂಬ ಹೆಡ್ ಲೈನ್ ನೋಡಿ “ಎಡ”ಬಿಡಂಗಿಗಳು ಗೌರಿ ಫೋಟೊ ಇಟ್ಟು ಮೋದಿ ವಿರುದ್ಧ ಹೋರಾಟ ಮಾಡಿಯಾರು!

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
-ರಾಘವೇಂದ್ರ ಬೆಳ್ತಂಗಡಿ, ಸಾಫ್ಟ್ ವೇರ್ ಉದ್ಯೋಗಿ, ಬೆಂಗಳೂರು January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
-ರಾಘವೇಂದ್ರ ಬೆಳ್ತಂಗಡಿ, ಸಾಫ್ಟ್ ವೇರ್ ಉದ್ಯೋಗಿ, ಬೆಂಗಳೂರು January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search