• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ಸಿದ್ದರಾಮಯ್ಯನವರೇ, ಮೊದಲು ಗುಂಡಿ ಮುಚ್ಚಿ ಮಾರ್ರೆ

-ರಾಘವೇಂದ್ರ ಬೆಳ್ತಂಗಡಿ, ಸಾಫ್ಟ್ ವೇರ್ ಉದ್ಯೋಗಿ, ಬೆಂಗಳೂರು Posted On October 9, 2017


  • Share On Facebook
  • Tweet It

ರಸ್ತೆ ಮೇಲೆ ನಡೆದಾಡುವಾಗ ತಲೆ ಮೇಲೆ ವಿದ್ಯುತ್ ತಂತಿ ಕಡಿದು ಬೀಳಬಹುದು, ವಿದ್ಯುತ್ ನಿರೋಧಕ ಜಾಕೆಟ್ ಬಳಸಿ, ಬಸ್ ಆ್ಯಕ್ಸಿಡೆಂಟ್ ಆದಾಗ ಅನಾಹುತ ಸಂಭವಿಸಬಹುದು, ಬಸ್ಸಿನಲ್ಲಿ ಕೂತಾಗಲೂ ಹೆಲ್ಮೆಟ್ ಧರಿಸಿ, ಕೋಣೆಯಲ್ಲಿ ಕುಳಿತಾಗ ಭೂಕಂಪವಾಗಬಹುದು, ಆ್ಯಂಟಿ ಅರ್ಥ್ ಕ್ವೇಕ್ ಕೋಣೆಯಲ್ಲೇ ಕುಳಿತು ಕೆಲಸ ಮಾಡಿ…

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಿದಾಗ ಈ ಜೋಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು…

ಆದರೆ, ಸಿದ್ದರಾಮಯ್ಯನವರ “ಜಾಣತನ” ಜಗಜ್ಜಾಹೀರಾಯ್ತು…

ಒಂದು ವಾರದ ಹಿಂದಷ್ಟೇ ಮೈಸೂರು ರಸ್ತೆಯ ಫ್ಲೈ ಓವರ್ ಮೇಲೆ ಗುಂಡಿಗಳಿಂದಾಗಿ ದಂಪತಿ ಮೃತಪಟ್ಟರು. ಭಾನುವಾರ ಬೆಳಗ್ಗೆ ಇದೇ ಮೈಸೂರು ರಸ್ತೆಯಲ್ಲಿ 34 ವರ್ಷದ ರಾಧಾ ಎಂಬುವವರು ಇದೇ ಗುಂಡಿಗಳಿಗೆ ಬಲಿಯಾಗಿದ್ದಾರೆ. ಒಂದೇ ವಾರದ ಅಂತರದಲ್ಲಿ ಮೈಸೂರು ರಸ್ತೆಯೊಂದರ ಗುಂಡಿಗಳಿಗೆ ಮೂವರು ಪ್ರಾಣ ತೆತ್ತಿದ್ದಾರೆ. ಬೆಂಗಳೂರಿನ ಯಾವುದೇ ಮೂಲೆಗೆ ಹೋದರು ಗುಂಡಿಗಳ ಮಧ್ಯೆಯೇ ರಸ್ತೆ ಇದೆ ಎನ್ನಿಸುವಷ್ಟರಮಟ್ಟಿಗೆ ಗುಂಡಿರಸ್ತೆಯಾಗಿ ಪರಿಣಮಿಸಿವೆ. ಅಪಘಾತಗಳು ನಿತ್ಯ ನಿರಂತರ ಎಂಬಂತಾಗಿವೆ.

ಇಷ್ಟಾದರೂ ರಾಜ್ಯದ ಉಸ್ತುವಾರಿ ವಹಿಸಿಕೊಂಡಿರುವ ಸಿದ್ದರಾಮಯ್ಯನವರು ಮಾತ್ರ ಮಗುಮ್ಮಾಗಿ ಕುಳಿತಿದ್ದಾರೆ. ಇವರ ಅವಧಿಯಲ್ಲೇ ಬೆಂಗಳೂರು ಅಭಿವೃದ್ಧಿಗೆ ನಗರಾಭಿವೃದ್ಧಿ ಖಾತೆ ರಚಿಸಿದ್ದಾರಾದರೂ, ಬೆಂಗಳೂರು ಪ್ಯಾರಿಸ್ ರೇಂಜಿಗೆ ಆಗದಿದ್ದರೂ, ಕನಿಷ್ಠ ರಸ್ತೆಯಂಥ ಮೂಲ ಸೌಕರ್ಯವೂ ಒದಗಿಸಿಲ್ಲ ಎಂಬುದೇ ದುರಂತ.

ಹಾಗಂತ, ಸಿದ್ದರಾಮಯ್ಯನವರು ಜಾರಿಗೆ ತಂದ, ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಯೋಜನೆಯನ್ನು ಟೀಕಿಸುತ್ತಿಲ್ಲ. ಆದರೆ, ಇಂಥ ನಿಯಮ ಜಾರಿ ಮಾಡುವ ಜತೆಗೆ ರಸ್ತೆಗಳನ್ನು ಚೆನ್ನಾಗಿ ಇಟ್ಟುಕೊಳ್ಳಬೇಕಲ್ಲವೇ? ಕಾಲಕಾಲಕ್ಕೆ ದುರಸ್ತಿ ಮಾಡಿಸಬೇಕಲ್ಲವೇ?

ಬಿಬಿಎಂಪಿ ವರದಿ ಪ್ರಕಾರ ಬೆಂಗಳೂರಿನಲ್ಲಿ 15 ಸಾವಿರಕ್ಕೂ ಅಧಿಕ ಗುಂಡಿಗಳಿವೆಯಂತೆ. ಅಲ್ಲ ಸ್ವಾಮಿ, ರಸ್ತೆಯೇ ನೆಟ್ಟಗಿಡದೇ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿದರೆ ಏನು ಪ್ರಯೋಜನ? ಗುಂಡಿಗೆ ಒಂದು ಜೀವ ಎಂದರೂ 15 ಸಾವಿರ ಜನ ಸಾಯುತ್ತಾರೆ. ಆಗ ಹೆಲ್ಮೆಟ್ ಬಂದು ಜೀವ ಉಳಿಸುತ್ತದೆಯೇ?

ಮಳೆ ಬಂದರೆ ನೆನೆಯಬಹುದು ಎಂದು ತಾರಸಿ ದುರಸ್ತಿಗೊಳಿಸಬೇಕೆ ಹೊರತು, ಮನೆಯಲ್ಲಿ ಛತ್ರಿ ಇಟ್ಟುಕೊಳ್ಳುವುದು ಕಡ್ಡಾಯ ಎಂದು ನಿಯಮ ಜಾರಿಗೊಳಿಸುವುದಲ್ಲ ಸಿದ್ದರಾಮಯ್ಯನವರೇ. ನಿಮ್ಮ ಹೆಲ್ಮೆಟ್ ಯೋಜನೆ ಕೊಡೆ ಕಡ್ಡಾಯಗೊಳಿಸಿದಂತಿದೆ. ಮೊದಲು ಯೋಜನೆ ಜಾರಿಗೆ ಮುನ್ನ ಯೋಚಿಸಿ, ಅದಕ್ಕೂ ಮೊದಲು ಗುಂಡಿ ಮುಚ್ಚಿಸಿ ಮಾರ್ರೆ. ಇಲ್ಲದಿದ್ದರೆ ಗುಂಡಿಗೆ ಬಲಿ ಎಂಬ ಹೆಡ್ ಲೈನ್ ನೋಡಿ “ಎಡ”ಬಿಡಂಗಿಗಳು ಗೌರಿ ಫೋಟೊ ಇಟ್ಟು ಮೋದಿ ವಿರುದ್ಧ ಹೋರಾಟ ಮಾಡಿಯಾರು!

  • Share On Facebook
  • Tweet It


- Advertisement -


Trending Now
ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
-ರಾಘವೇಂದ್ರ ಬೆಳ್ತಂಗಡಿ, ಸಾಫ್ಟ್ ವೇರ್ ಉದ್ಯೋಗಿ, ಬೆಂಗಳೂರು December 6, 2023
9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
-ರಾಘವೇಂದ್ರ ಬೆಳ್ತಂಗಡಿ, ಸಾಫ್ಟ್ ವೇರ್ ಉದ್ಯೋಗಿ, ಬೆಂಗಳೂರು December 6, 2023
Leave A Reply

  • Recent Posts

    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
  • Popular Posts

    • 1
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 2
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • 3
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 4
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 5
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search