• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಕ್ಕಳನ್ನು ಶಾಲೆಗೆ ಕಳಿಸದಿದ್ದರೆ ಪೋಷಕರು ಜೈಲಿಗೆ ಎಂದ ಉತ್ತರ ಪ್ರದೇಶ ಸಚಿವ

TNN Correspondent Posted On October 9, 2017
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಎಂದರೇನೆ ಹಾಗೆ. ದಿಟ್ಟ ನಿರ್ಧಾರಕ್ಕೆ ಹೆಸರಾದ ಅವರು ಅಧಿಕಾರ ಸ್ವೀಕರಿಸುತ್ತಲೇ, ಅಕ್ರಮ ಖಸಾಯಿಖಾನೆಗಳ ಹೆಡೆಮುರಿಕಟ್ಟಿದರು. ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿ ಪುಂಡರ ಉಪಟಳಕ್ಕೆ ಕಡಿವಾಣ ಹಾಕಿದರು. ರೈತರ ಸಾಲ ಮನ್ನಾ ಮಾಡಿ ಬಾಯಿಮಾತಲ್ಲೇ ರೈತರ ಪರ ಎಂಬ ಮಾತು ಸುಳ್ಳಾಗಿಸಿದರು.

ಅಂಥಾ ಯೋಗಿ ಸರ್ಕಾರದ ಸಚಿವರೊಬ್ಬರು ಈಗ ಮತ್ತೊಂದು ದಿಟ್ಟ ನಿರ್ಧಾರ ಘೋಷಿಸಿದ್ದಾರೆ.

ಹೌದು, ಯಾವುದೇ ಪೋಷಕರು ಬಡತನದ ನೆಪವೊಡ್ಡಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದಿದ್ದರೆ ಜೈಲಿಗೆ ಅಟ್ಟುವೆ ಎಂದು ಉತ್ತರ ಪ್ರದೇಶ ದಿವ್ಯಾಂಗರ ಕಲ್ಯಾಣ ಸಚಿವ ಓಂ ಪ್ರಕಾಶ್ ರಾಜ್ಬರ್ ಹೇಳಿದ್ದಾರೆ.

ಈ ಕುರಿತ ವೀಡಿಯೋ ಒಂದು ವೈರಲ್ ಆಗಿದ್ದು, “ಪ್ರತಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲೇಬೇಕು. ಇಲ್ಲದಿದ್ದರೆ ಪೊಲೀಸರು ನಿಮ್ಮ ಜೈಲಿಗೆ ಕಳುಹಿಸುತ್ತಾರೆ ಹಾಗೂ ಐದು ದಿನ ಊಟ, ನೀರು ಕೊಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಸರ್ಕಾರದಿಂದ ಮಕ್ಕಳ ಶಿಕ್ಷಣಕ್ಕೆ ಸಕಲ ಸೌಲಭ್ಯ ನೀಡಲಾಗಿದೆ. ಇಷ್ಟಾದರೂ ಮಕ್ಕಳು ಶಿಕ್ಷಣದಿಂದ ವಂಚಿತರಾದರೆ ಹೊಣೆಯಾರು? ಅದಕ್ಕಾಗಿಯೇ ಈ ಹೇಳಿಕೆ ನೀಡಿದ್ದೇನೆ ಹಾಗೂ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಡವರ ಶೈಕ್ಷಣಿಕ ಏಳಿಗೆಗಾಗಿಯೇ ನಮ್ಮ ಸರ್ಕಾರ ನಾನಾ ಯೋಜನೆ ರೂಪಿಸಿದ್ದಾರೆ. ಆದರೆ ಅದು ಸದುಪಯೋಗವಾಗದಿದ್ದರೆ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search