• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಕ್ಕಳನ್ನು ಶಾಲೆಗೆ ಕಳಿಸದಿದ್ದರೆ ಪೋಷಕರು ಜೈಲಿಗೆ ಎಂದ ಉತ್ತರ ಪ್ರದೇಶ ಸಚಿವ

TNN Correspondent Posted On October 9, 2017
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಎಂದರೇನೆ ಹಾಗೆ. ದಿಟ್ಟ ನಿರ್ಧಾರಕ್ಕೆ ಹೆಸರಾದ ಅವರು ಅಧಿಕಾರ ಸ್ವೀಕರಿಸುತ್ತಲೇ, ಅಕ್ರಮ ಖಸಾಯಿಖಾನೆಗಳ ಹೆಡೆಮುರಿಕಟ್ಟಿದರು. ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿ ಪುಂಡರ ಉಪಟಳಕ್ಕೆ ಕಡಿವಾಣ ಹಾಕಿದರು. ರೈತರ ಸಾಲ ಮನ್ನಾ ಮಾಡಿ ಬಾಯಿಮಾತಲ್ಲೇ ರೈತರ ಪರ ಎಂಬ ಮಾತು ಸುಳ್ಳಾಗಿಸಿದರು.

ಅಂಥಾ ಯೋಗಿ ಸರ್ಕಾರದ ಸಚಿವರೊಬ್ಬರು ಈಗ ಮತ್ತೊಂದು ದಿಟ್ಟ ನಿರ್ಧಾರ ಘೋಷಿಸಿದ್ದಾರೆ.

ಹೌದು, ಯಾವುದೇ ಪೋಷಕರು ಬಡತನದ ನೆಪವೊಡ್ಡಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದಿದ್ದರೆ ಜೈಲಿಗೆ ಅಟ್ಟುವೆ ಎಂದು ಉತ್ತರ ಪ್ರದೇಶ ದಿವ್ಯಾಂಗರ ಕಲ್ಯಾಣ ಸಚಿವ ಓಂ ಪ್ರಕಾಶ್ ರಾಜ್ಬರ್ ಹೇಳಿದ್ದಾರೆ.

ಈ ಕುರಿತ ವೀಡಿಯೋ ಒಂದು ವೈರಲ್ ಆಗಿದ್ದು, “ಪ್ರತಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲೇಬೇಕು. ಇಲ್ಲದಿದ್ದರೆ ಪೊಲೀಸರು ನಿಮ್ಮ ಜೈಲಿಗೆ ಕಳುಹಿಸುತ್ತಾರೆ ಹಾಗೂ ಐದು ದಿನ ಊಟ, ನೀರು ಕೊಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಸರ್ಕಾರದಿಂದ ಮಕ್ಕಳ ಶಿಕ್ಷಣಕ್ಕೆ ಸಕಲ ಸೌಲಭ್ಯ ನೀಡಲಾಗಿದೆ. ಇಷ್ಟಾದರೂ ಮಕ್ಕಳು ಶಿಕ್ಷಣದಿಂದ ವಂಚಿತರಾದರೆ ಹೊಣೆಯಾರು? ಅದಕ್ಕಾಗಿಯೇ ಈ ಹೇಳಿಕೆ ನೀಡಿದ್ದೇನೆ ಹಾಗೂ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಡವರ ಶೈಕ್ಷಣಿಕ ಏಳಿಗೆಗಾಗಿಯೇ ನಮ್ಮ ಸರ್ಕಾರ ನಾನಾ ಯೋಜನೆ ರೂಪಿಸಿದ್ದಾರೆ. ಆದರೆ ಅದು ಸದುಪಯೋಗವಾಗದಿದ್ದರೆ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search