• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಖಾದರ್ ವಿರುದ್ಧ ಚಿನ್ಮಯ್ ರೈ ಕಾನೂನು ಗೆಲುವು

ganesh kumar Posted On October 11, 2017


  • Share On Facebook
  • Tweet It

ಪುತ್ತೂರು ಪ್ರತಿ ಆರು ತಿಂಗಳಿಗೊಮ್ಮೆ ಸುದ್ದಿ ಮಾಡದೇ ಹೋದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏನೂ ಆಗುತ್ತಿಲ್ಲ ಎನ್ನುವ ಅನುಭವ ಹೊರಗಿನ ಪ್ರಪಂಚಕ್ಕೆ ಹೋಗುತ್ತದೆ ಎನ್ನುವುದು ಅಲ್ಲಿನ ಮಣ್ಣಿಗೆ ಗೊತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಲ್ಲಡ್ಕದ ನಂತರ ಅತೀ ಹೆಚ್ಚು ಸುದ್ದಿಯಲ್ಲಿರುವ ಊರು ಪುತ್ತೂರು. ಇತ್ತೀಚೆಗೆ ಪುತ್ತೂರು ಹೆಚ್ಚು ಸುದ್ದಿಯಲ್ಲಿದ್ದದ್ದು ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತರ ಭಾಷಣದ ವಿಷಯದಲ್ಲಿ. ಅವರು ಪುತ್ತೂರಿನ ಸಂಪ್ಯ ಠಾಣೆಯ ಪೊಲೀಸ್ ಸಬ್ ಇನ್ಸಪೆಕ್ಟರ್ ಖಾದರ್ ಮತ್ತು ಇತರ ಸಿಬ್ಬಂದಿಗಳ ವಿರುದ್ಧ ಅತ್ಯುಗ್ರ ಭಾಷಣ ಮಾಡಿದ ನಂತರ ಸಂಪ್ಯ ಎಸ್ ಐ ಖಾದರ್ ಅವರ ಹೆಸರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಧ್ವನಿಸಿತ್ತು.
ಅದೇ ಎಸ್ ಐ ಖಾದರ್ ಅವರು ಪುತ್ತೂರಿನ ವಕೀಲ ಮತ್ತು ಹಿಂದೂಪರ ನಿಲುವುಗಳನ್ನು ಹೊಂದಿರುವ ಮತ್ತು ಅಕ್ರಮ ಗೋಸಾಗಾಟದ ವಿಷಯದಲ್ಲಿ ಸಕ್ರಿಯವಾಗಿ ಗೋಕಳ್ಳರ ವಿರುದ್ಧ ಧ್ವನಿ ಎತ್ತುತ್ತಿದ್ದ ಚಿನ್ಮಯ್ ರೈ ವಿರುದ್ಧ ಐಪಿಸಿ 307 ಪ್ರಕರಣ ದಾಖಲಿಸಿದ್ದರು. ಅದನ್ನು ಚಿನ್ಮಯ್ ರೈ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ತನ್ನ ವಿರುದ್ಧ ದುರುದ್ದೇಶಪೂರಿತವಾಗಿ ಕೇಸ್ ದಾಖಲಿಸಲಾಗಿದೆ. ತಾನು ಅಕ್ರಮ ಗೋಸಾಗಾಟದ ವ್ಯಕ್ತಿಗಳ ವಿರುದ್ಧ ಹೋರಾಡುವುದನ್ನು ತಡೆಯುವ ಉದ್ದೇಶದಿಂದ ಹೀಗೆ ತನ್ನನ್ನು ಸುಳ್ಳು ಕೇಸಿ ಸಿಕ್ಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಅವರ ಪರ ವಕೀಲರಾದ ಅರುಣ್ ಶ್ಯಾಮ್ ವಾದಿಸಿದ್ದರು.
ಅರುಣ್ ಶ್ಯಾಮ್ ಅವರ ವಾದವನ್ನು ಪುರಸ್ಕರಿಸಿದ ಹೈಕೋರ್ಟ್ ದುರುದ್ದೇಶದಿಂದ ದಾಖಲಿಸಿದ್ದ ಐಪಿಸಿ 307 ಪ್ರಕರಣಕ್ಕೆ ತಡೆ ನೀಡಿದೆ. ಈ ಮೂಲಕ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಅರುಣ್ ಶ್ಯಾಮ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಹೈಕೋರ್ಟ್ ಗೋಹತ್ಯಾ ನಿಷೇಧ, ಜಾನುವಾರು ಹತ್ಯಾ ನಿಷೇಧ ಕಾನೂನುಗಳನ್ನು ಸರಿಯಾಗಿ ಪಾಲಿಸುವಂತೆ ಪ್ರತಿವಾದಿಗಳಿಗೆ ಆದೇಶ ಕೊಡಬೇಕೆಂದು ಚಿನ್ಮಯ್ ರೈ ನ್ಯಾಯಾಲಯವನ್ನು ವಿನಂತಿಸಿದ್ದಾರೆ. ಚಿನ್ಮಯ್ ರೈ ಹಿಂದೂ ಜಾಗರಣ ವೇದಿಕೆಯ ಮುಖಂಡರೂ ಆಗಿದ್ದಾರೆ.

  • Share On Facebook
  • Tweet It


- Advertisement -
Chinmay rai


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
ganesh kumar May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
ganesh kumar May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search