• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖಾದರ್ ವಿರುದ್ಧ ಚಿನ್ಮಯ್ ರೈ ಕಾನೂನು ಗೆಲುವು

ganesh kumar Posted On October 11, 2017
0


0
Shares
  • Share On Facebook
  • Tweet It

ಪುತ್ತೂರು ಪ್ರತಿ ಆರು ತಿಂಗಳಿಗೊಮ್ಮೆ ಸುದ್ದಿ ಮಾಡದೇ ಹೋದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏನೂ ಆಗುತ್ತಿಲ್ಲ ಎನ್ನುವ ಅನುಭವ ಹೊರಗಿನ ಪ್ರಪಂಚಕ್ಕೆ ಹೋಗುತ್ತದೆ ಎನ್ನುವುದು ಅಲ್ಲಿನ ಮಣ್ಣಿಗೆ ಗೊತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಲ್ಲಡ್ಕದ ನಂತರ ಅತೀ ಹೆಚ್ಚು ಸುದ್ದಿಯಲ್ಲಿರುವ ಊರು ಪುತ್ತೂರು. ಇತ್ತೀಚೆಗೆ ಪುತ್ತೂರು ಹೆಚ್ಚು ಸುದ್ದಿಯಲ್ಲಿದ್ದದ್ದು ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತರ ಭಾಷಣದ ವಿಷಯದಲ್ಲಿ. ಅವರು ಪುತ್ತೂರಿನ ಸಂಪ್ಯ ಠಾಣೆಯ ಪೊಲೀಸ್ ಸಬ್ ಇನ್ಸಪೆಕ್ಟರ್ ಖಾದರ್ ಮತ್ತು ಇತರ ಸಿಬ್ಬಂದಿಗಳ ವಿರುದ್ಧ ಅತ್ಯುಗ್ರ ಭಾಷಣ ಮಾಡಿದ ನಂತರ ಸಂಪ್ಯ ಎಸ್ ಐ ಖಾದರ್ ಅವರ ಹೆಸರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಧ್ವನಿಸಿತ್ತು.
ಅದೇ ಎಸ್ ಐ ಖಾದರ್ ಅವರು ಪುತ್ತೂರಿನ ವಕೀಲ ಮತ್ತು ಹಿಂದೂಪರ ನಿಲುವುಗಳನ್ನು ಹೊಂದಿರುವ ಮತ್ತು ಅಕ್ರಮ ಗೋಸಾಗಾಟದ ವಿಷಯದಲ್ಲಿ ಸಕ್ರಿಯವಾಗಿ ಗೋಕಳ್ಳರ ವಿರುದ್ಧ ಧ್ವನಿ ಎತ್ತುತ್ತಿದ್ದ ಚಿನ್ಮಯ್ ರೈ ವಿರುದ್ಧ ಐಪಿಸಿ 307 ಪ್ರಕರಣ ದಾಖಲಿಸಿದ್ದರು. ಅದನ್ನು ಚಿನ್ಮಯ್ ರೈ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ತನ್ನ ವಿರುದ್ಧ ದುರುದ್ದೇಶಪೂರಿತವಾಗಿ ಕೇಸ್ ದಾಖಲಿಸಲಾಗಿದೆ. ತಾನು ಅಕ್ರಮ ಗೋಸಾಗಾಟದ ವ್ಯಕ್ತಿಗಳ ವಿರುದ್ಧ ಹೋರಾಡುವುದನ್ನು ತಡೆಯುವ ಉದ್ದೇಶದಿಂದ ಹೀಗೆ ತನ್ನನ್ನು ಸುಳ್ಳು ಕೇಸಿ ಸಿಕ್ಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಅವರ ಪರ ವಕೀಲರಾದ ಅರುಣ್ ಶ್ಯಾಮ್ ವಾದಿಸಿದ್ದರು.
ಅರುಣ್ ಶ್ಯಾಮ್ ಅವರ ವಾದವನ್ನು ಪುರಸ್ಕರಿಸಿದ ಹೈಕೋರ್ಟ್ ದುರುದ್ದೇಶದಿಂದ ದಾಖಲಿಸಿದ್ದ ಐಪಿಸಿ 307 ಪ್ರಕರಣಕ್ಕೆ ತಡೆ ನೀಡಿದೆ. ಈ ಮೂಲಕ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಅರುಣ್ ಶ್ಯಾಮ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಹೈಕೋರ್ಟ್ ಗೋಹತ್ಯಾ ನಿಷೇಧ, ಜಾನುವಾರು ಹತ್ಯಾ ನಿಷೇಧ ಕಾನೂನುಗಳನ್ನು ಸರಿಯಾಗಿ ಪಾಲಿಸುವಂತೆ ಪ್ರತಿವಾದಿಗಳಿಗೆ ಆದೇಶ ಕೊಡಬೇಕೆಂದು ಚಿನ್ಮಯ್ ರೈ ನ್ಯಾಯಾಲಯವನ್ನು ವಿನಂತಿಸಿದ್ದಾರೆ. ಚಿನ್ಮಯ್ ರೈ ಹಿಂದೂ ಜಾಗರಣ ವೇದಿಕೆಯ ಮುಖಂಡರೂ ಆಗಿದ್ದಾರೆ.

0
Shares
  • Share On Facebook
  • Tweet It


Chinmay rai


Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
ganesh kumar July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
ganesh kumar July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search