• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಲಿ ಅತ್ಯಾಚಾರದ ಆರೋಪ, ಇಲ್ಲಿ ಕಾಂಗ್ರೆಸ್ ಉಸ್ತುವಾರಿ

TNN Correspondent Posted On October 12, 2017
0


0
Shares
  • Share On Facebook
  • Tweet It

>> ವೇಣುಗೋಪಾಲ್ ವಿರುದ್ಧ ಕೇರಳ ಸಿಎಂ ಪಿಣರಾಯಿ ಸರಕಾರ ಹೂಡಲಿದೆ ಭ್ರಷ್ಟಾಚಾರ ಮತ್ತು ಲೈಂಗಿಕ ದೌರ್ಜನ್ಯದ ಕೇಸು

>> ಬಹುಕೋಟಿ ಸೋಲಾರ್ ಹಗರಣದಲ್ಲಿ ಮಾಜಿ ಸಿಎಂ ಉಮ್ಮನ್ ಚಾಂಡಿ ಮತ್ತು 9 ಕಾಂಗ್ರೆಸ್ ಮುಖಂಡರ ವಿರುದ್ಧ ವಿಜಿಲೆನ್ಸ್ ತನಿಖೆ

ತಿರುವನಂತಪುರಂ : ಕೇರಳದ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಿಡದೆ ಕಾಡಿದ್ದ ಬಹುಕೋಟಿ ಭ್ರಷ್ಟಾಚಾರದ ಸೋಲಾರ್ ಹಗರಣದ ಭಾಗವಾದ ಕಾಂಗ್ರೆಸ್ ಮುಖಂಡರಿಂದ ನಿರಂತರ ಅತ್ಯಾಚಾರ ಆರೋಪ ಕರ್ನಾಟಕದಲ್ಲಿ ಮನೆಮಾಡಿರುವ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‍ಗೆ ಮತ್ತೆ ಕಾಡಲಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಸೋಲಾರ್ ಹಗರಣದಲ್ಲಿ ಮರುತನಿಖೆಗೆ ನಿವೃತ್ತ ನ್ಯಾ. ಜಿ.ಶಿವರಾಂ ನೇತೃತ್ವದ ಸಮಿತಿ ಶಿಫಾರಸು ಮಾಡಿದ್ದ ವರದಿ ಆಧರಿಸಿ ವಿಜಿಲೆನ್ಸ್ ತನಿಖೆಗೆ ಆದೇಶಿಸಲಿದ್ದಾರ. ಈ ಕುರಿತು ಸ್ವತಃ ಅವರೇ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ, ಮಾಜಿ ಗೃಹ ಸಚಿವ ತಿರುವಾಂಕೂರು ರಾಧಾಕೃಷ್ಣನ್, ಮಾಜಿ ಇಂಧನ ಸಚಿವ ಆರ್ಯದಾನ್ ಮೊಹಮ್ಮದ್ ವಿರುದ್ಧ ಭ್ರಷ್ಟಾಚಾರ ಮತ್ತು ಲೈಂಗಿಕ ಕಿರುಕುಳದ ಪ್ರತ್ಯೇಕ ಪ್ರಕರಣಗಳನ್ನು ಸರಕಾರವೇ ದಾಖಲಿದುವುದಾಗಿ ಹೇಳಿದ್ದಾರೆ. ಒಟ್ಟು 10 ಕಾಂಗ್ರೆಸ್ ಮುಖಂಡರನ್ನು ಪಿಣರಾಯಿ ಸೋಲಾರ್ ಹಗರಣ ಎಂಬ ಒಂದೇ ಬಾಣದಿಂದ ರಾಜಕೀಯ ನಿವೃತ್ತಿಗೆ ದೂಡುತ್ತಿದ್ದಾರೆ.


ಸರಿತಾ ನಾಯರ್ ಯಾರು? : ಕೇರಳ ಸರ್ಕಾರದಿಂದ 0ಸೋಲಾರ್ ಉಪಕರಣಗಳ ಅಳವಡಿಕೆ ಗುತ್ತಿಗೆ ಪಡೆದ ಕಂಪನಿ ಮುಖ್ಯಸ್ಥೆ ಸರಿತಾ ನಾಯರ್. ಈಕೆಯನ್ನು ದೆಹಲಿಯ ತಮ್ಮ ಸಚಿವರ ನಿವಾಸದಲ್ಲಿ ವೇಣುಗೋಪಾಲ್ ಕರೆಸಿ, 2011ರಿಂದಲೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅಷ್ಟಲ್ಲದೇ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಹಗರಣದ ತನಿಖೆ ವೇಳೆ ಬಂಧಿತಳಾಗಿದ್ದಾಗ ಜೈಲಿನಲ್ಲಿ ಆತ್ಮಾವಲೋಕನಕ್ಕಾಗಿ ಬರೆದ ಪತ್ರದಲ್ಲಿ ಸರಿತಾ ಉಲ್ಲೇಖಿಸಿದ್ದರು. ಸಿಎಂ ಉಮ್ಮನ್ ಚಾಂಡಿ, ಮುಖ್ಯಮಂತ್ರಿ ಕಾರ್ಯಾಲಯದ ಸಹಾಯಕರು, ಗೃಹ ಸಚಿವ, ವೇಣುಗೋಪಾಲ್ ಸೇರಿದಂತೆ 10ಕ್ಕೂ ಹೆಚ್ಚು ಸಚಿವರು ಸರಿತಾ ಮೊಬೈಲ್ ನಿರಂತರ ಕರೆಮಾಡಿರುವ ವಿವರಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಿ ಸೋಲಾರ್ ಹಗರಣ ಸೆಕ್ಸ್ ರ್ಯಾಕೆಟ್ ಸ್ವರೂಪ ಪಡೆದಿತ್ತು. ತಮ್ಮನ್ನು ಬಳಸಿಕೊಂಡಿದ್ದಲ್ಲದೇ ಸೋಲಾರ್ ಹಗರಣವನ್ನು ತಮ್ಮ ತಲೆಗೆ ಕಟ್ಟಲು ಮುಖಂಡರು ಸಂಚು ಮಾಡಿದ್ದಾರೆ ಎಂದು ಸರಿತಾ ಆರೋಪಿಸಿದ್ದರು. ಸರಿತಾ ವಿರುದ್ಧ ವೇಣುಗೋಪಾಲ್ ಮಾನನಷ್ಟ ಮೊಕದ್ದಮೆ ಕೂಡ ಹೂಡಿದ್ದಾರೆ.

0
Shares
  • Share On Facebook
  • Tweet It


chandycmcongresskarnatakakeralakuttymodinairndaoomenpinarayipoliticiansrapesaritascamsexsolarteam solarupavenugopalvijayan


Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search