• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಲಿಕೆಯ ಕಾಮಗಾರಿಗಳಲ್ಲಿ 20% ಕಮೀಷನ್ ಕಾರ್ಪೋರೇಟರ್ ಗಳಿಗೆ ಹೋಗುತ್ತದೆ!

TNN Correspondent Posted On October 12, 2017
0


0
Shares
  • Share On Facebook
  • Tweet It

ಯಾವುದೇ ಕಾಮಗಾರಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಯಬೇಕಾದರೆ ಅದರಲ್ಲಿ ಗುತ್ತಿಗೆದಾರ 20% ಕಮೀಷನ್ ಪಾಲಿಕೆಯ ಕಾರ್ಪೋರೇಟರ್ ಗಳಿಗೆ ಕೊಡಬೇಕಾಗುತ್ತದೆ. ಇನ್ನು ಒಂದಿಷ್ಟು ದೊಡ್ಡ ಮೊತ್ತ ಅಧಿಕಾರಿಗಳಿಗೆ ಕೊಡಬೇಕಾಗುತ್ತದೆ. ಹಣ ತೆಗೆದುಕೊಳ್ಳುವಾಗ ಅಧಿಕಾರಿಗಳು ಅದರಲ್ಲಿ ಶಾಸಕರಿಗೆ ಮತ್ತು ಸಚಿವರಿಗೆ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ. ಸಚಿವ ರಮಾನಾಥ ರೈ ಅವರು ತೆಗೆದುಕೊಳ್ಳುತ್ತಾರೆ ಎನ್ನುವುದಕ್ಕೆ ನನ್ನ ಬಳಿ ದಾಖಲೆ ಇಲ್ಲ. ಆದ್ದರಿಂದ ನಾನು ಸುಮ್ಮಸುಮ್ಮನೆ ಅವರ ಮೇಲೆ ಆರೋಪ ಹೊರಿಸುವುದಿಲ್ಲ. ಆದರೆ ಉಳಿದವರು ತೆಗೆದುಕೊಳ್ಳುತ್ತಾರೆ ಎನ್ನುವುದು ನೂರಕ್ಕೆ ನೂರು ನಿಜ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಹೇಳಿದ್ದಾರೆ.

https://tulunadunews.com/wp-content/uploads/2017/10/vk.mp4

ಬುಧವಾರ ಕರಾವಳಿ ಕರ್ನಾಟಕದ ಸ್ಥಳೀಯ ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರದಲ್ಲಿರುವುದು ಕಾಂಗ್ರೆಸ್. ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಕಾಂಗ್ರೆಸ್. ಹಾಗಂತ ಯಾರೇ ತಪ್ಪು ಮಾಡಿದರೂ ಹೇಳಬೇಕಾಗುವ ಅಗತ್ಯ ಇದೆ. ಎಲ್ಲಾ ಕಾರ್ಪೋರೇಟರ್ ಗಳು ಲಂಚ ತೆಗೆದುಕೊಂಡೇ ಕೆಲಸ ಮಾಡುತ್ತಾರೆ ಎಂದಲ್ಲ, ಆದರೆ ತೆಗೆದುಕೊಳ್ಳದಿರುವವರ ಪ್ರಮಾಣ ಭಾರೀ ಚಿಕ್ಕದು. ಹೆಚ್ಚಿನವರು ಮುಂಚೆ ಹೇಗಿದ್ದರು, ಈಗ ಹೇಗಿದ್ದಾರೆ ಎಂದು ನೋಡಿದರೆ ಗೊತ್ತಾಗುತ್ತೆ ಎಂದು ಮಾರ್ಮಿಕವಾಗಿ ಅವರು ನುಡಿದರು. 20% ಜನಪ್ರತಿನಿಧಿಗಳಿಗೆ, 10% ಅಧಿಕಾರಿಗಳಿಗೆ ಕೊಟ್ಟ ಮೇಲೆ ಗುತ್ತಿಗೆದಾರರ ಬಳಿ ಎಷ್ಟು ಉಳಿಯುತ್ತದೆ. ಇದರಿಂದ ಅವರು ಸಿಮೆಂಟ್ ಕಡಿಮೆ, ಮರಳು ಜಾಸ್ತಿ ಹಾಕಿ ಕಾಮಗಾರಿ ಮುಗಿಸಬೇಕಾಗುತ್ತದೆ. ಕಾಮಗಾರಿಗಳು ತುಂಬಾ ದಿನ ಉಳಿಯಲ್ಲ ಎಂದು ಅವರು ಹೇಳಿದರು. ಪಾಲಿಕೆಯಲ್ಲಿರುವ ನಗರ ಯೋಜನಾ ವಿಭಾಗದಲ್ಲಿರುವ ಅಧಿಕಾರಿಗಳ ಬಳಿ ಎರಡು ಮೂರು ಐಶಾರಾಮಿ ಫ್ಲಾಟ್ ಗಳು ಇವೆ. ಸಿಕ್ಕಾಪಟ್ಟೆ ಹಣ ಇದೆ. ಇದೆಲ್ಲ ಅವರು ನ್ಯಾಯಯುತವಾಗಿ ದುಡಿಯಲು ಸಾಧ್ಯವಿಲ್ಲ. ಎಲ್ಲವೂ ಲಂಚದ ಮಹಿಮೆ ಎಂದು ಅವರು ಹೇಳಿದರು. ಹಿಂದೆ ಹೀಗಿರಲಿಲ್ಲ. ಇತ್ತೀಚೆಗಂತೂ ಲಂಚವೇ ಹೆಚ್ಚು ಮಾತನಾಡುತ್ತದೆ. ಲಂಚ ತೆಗೆದುಕೊಂಡು ಕೆಲಸ ಮಾಡುವ ಅಧಿಕಾರಿಗಳ ಫೊಟೋಗಳನ್ನು ಹೊರಗೆ ನೇತಾಡಿಸಿದರೆ ಬುದ್ಧಿ ಬರುತ್ತದೆ ಎಂದು ಕೊನೆಯಲ್ಲಿ ಮಾಜಿ ಶಾಸಕರು ಅಭಿಪ್ರಾಯಪಟ್ಟರು.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search