• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಲಿಕೆಯ ಕಾಮಗಾರಿಗಳಲ್ಲಿ 20% ಕಮೀಷನ್ ಕಾರ್ಪೋರೇಟರ್ ಗಳಿಗೆ ಹೋಗುತ್ತದೆ!

TNN Correspondent Posted On October 12, 2017
0


0
Shares
  • Share On Facebook
  • Tweet It

ಯಾವುದೇ ಕಾಮಗಾರಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಯಬೇಕಾದರೆ ಅದರಲ್ಲಿ ಗುತ್ತಿಗೆದಾರ 20% ಕಮೀಷನ್ ಪಾಲಿಕೆಯ ಕಾರ್ಪೋರೇಟರ್ ಗಳಿಗೆ ಕೊಡಬೇಕಾಗುತ್ತದೆ. ಇನ್ನು ಒಂದಿಷ್ಟು ದೊಡ್ಡ ಮೊತ್ತ ಅಧಿಕಾರಿಗಳಿಗೆ ಕೊಡಬೇಕಾಗುತ್ತದೆ. ಹಣ ತೆಗೆದುಕೊಳ್ಳುವಾಗ ಅಧಿಕಾರಿಗಳು ಅದರಲ್ಲಿ ಶಾಸಕರಿಗೆ ಮತ್ತು ಸಚಿವರಿಗೆ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ. ಸಚಿವ ರಮಾನಾಥ ರೈ ಅವರು ತೆಗೆದುಕೊಳ್ಳುತ್ತಾರೆ ಎನ್ನುವುದಕ್ಕೆ ನನ್ನ ಬಳಿ ದಾಖಲೆ ಇಲ್ಲ. ಆದ್ದರಿಂದ ನಾನು ಸುಮ್ಮಸುಮ್ಮನೆ ಅವರ ಮೇಲೆ ಆರೋಪ ಹೊರಿಸುವುದಿಲ್ಲ. ಆದರೆ ಉಳಿದವರು ತೆಗೆದುಕೊಳ್ಳುತ್ತಾರೆ ಎನ್ನುವುದು ನೂರಕ್ಕೆ ನೂರು ನಿಜ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಹೇಳಿದ್ದಾರೆ.

https://tulunadunews.com/wp-content/uploads/2017/10/vk.mp4

ಬುಧವಾರ ಕರಾವಳಿ ಕರ್ನಾಟಕದ ಸ್ಥಳೀಯ ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರದಲ್ಲಿರುವುದು ಕಾಂಗ್ರೆಸ್. ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಕಾಂಗ್ರೆಸ್. ಹಾಗಂತ ಯಾರೇ ತಪ್ಪು ಮಾಡಿದರೂ ಹೇಳಬೇಕಾಗುವ ಅಗತ್ಯ ಇದೆ. ಎಲ್ಲಾ ಕಾರ್ಪೋರೇಟರ್ ಗಳು ಲಂಚ ತೆಗೆದುಕೊಂಡೇ ಕೆಲಸ ಮಾಡುತ್ತಾರೆ ಎಂದಲ್ಲ, ಆದರೆ ತೆಗೆದುಕೊಳ್ಳದಿರುವವರ ಪ್ರಮಾಣ ಭಾರೀ ಚಿಕ್ಕದು. ಹೆಚ್ಚಿನವರು ಮುಂಚೆ ಹೇಗಿದ್ದರು, ಈಗ ಹೇಗಿದ್ದಾರೆ ಎಂದು ನೋಡಿದರೆ ಗೊತ್ತಾಗುತ್ತೆ ಎಂದು ಮಾರ್ಮಿಕವಾಗಿ ಅವರು ನುಡಿದರು. 20% ಜನಪ್ರತಿನಿಧಿಗಳಿಗೆ, 10% ಅಧಿಕಾರಿಗಳಿಗೆ ಕೊಟ್ಟ ಮೇಲೆ ಗುತ್ತಿಗೆದಾರರ ಬಳಿ ಎಷ್ಟು ಉಳಿಯುತ್ತದೆ. ಇದರಿಂದ ಅವರು ಸಿಮೆಂಟ್ ಕಡಿಮೆ, ಮರಳು ಜಾಸ್ತಿ ಹಾಕಿ ಕಾಮಗಾರಿ ಮುಗಿಸಬೇಕಾಗುತ್ತದೆ. ಕಾಮಗಾರಿಗಳು ತುಂಬಾ ದಿನ ಉಳಿಯಲ್ಲ ಎಂದು ಅವರು ಹೇಳಿದರು. ಪಾಲಿಕೆಯಲ್ಲಿರುವ ನಗರ ಯೋಜನಾ ವಿಭಾಗದಲ್ಲಿರುವ ಅಧಿಕಾರಿಗಳ ಬಳಿ ಎರಡು ಮೂರು ಐಶಾರಾಮಿ ಫ್ಲಾಟ್ ಗಳು ಇವೆ. ಸಿಕ್ಕಾಪಟ್ಟೆ ಹಣ ಇದೆ. ಇದೆಲ್ಲ ಅವರು ನ್ಯಾಯಯುತವಾಗಿ ದುಡಿಯಲು ಸಾಧ್ಯವಿಲ್ಲ. ಎಲ್ಲವೂ ಲಂಚದ ಮಹಿಮೆ ಎಂದು ಅವರು ಹೇಳಿದರು. ಹಿಂದೆ ಹೀಗಿರಲಿಲ್ಲ. ಇತ್ತೀಚೆಗಂತೂ ಲಂಚವೇ ಹೆಚ್ಚು ಮಾತನಾಡುತ್ತದೆ. ಲಂಚ ತೆಗೆದುಕೊಂಡು ಕೆಲಸ ಮಾಡುವ ಅಧಿಕಾರಿಗಳ ಫೊಟೋಗಳನ್ನು ಹೊರಗೆ ನೇತಾಡಿಸಿದರೆ ಬುದ್ಧಿ ಬರುತ್ತದೆ ಎಂದು ಕೊನೆಯಲ್ಲಿ ಮಾಜಿ ಶಾಸಕರು ಅಭಿಪ್ರಾಯಪಟ್ಟರು.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search