• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಲಿಕೆಯ ಕಾಮಗಾರಿಗಳಲ್ಲಿ 20% ಕಮೀಷನ್ ಕಾರ್ಪೋರೇಟರ್ ಗಳಿಗೆ ಹೋಗುತ್ತದೆ!

TNN Correspondent Posted On October 12, 2017
0


0
Shares
  • Share On Facebook
  • Tweet It

ಯಾವುದೇ ಕಾಮಗಾರಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಯಬೇಕಾದರೆ ಅದರಲ್ಲಿ ಗುತ್ತಿಗೆದಾರ 20% ಕಮೀಷನ್ ಪಾಲಿಕೆಯ ಕಾರ್ಪೋರೇಟರ್ ಗಳಿಗೆ ಕೊಡಬೇಕಾಗುತ್ತದೆ. ಇನ್ನು ಒಂದಿಷ್ಟು ದೊಡ್ಡ ಮೊತ್ತ ಅಧಿಕಾರಿಗಳಿಗೆ ಕೊಡಬೇಕಾಗುತ್ತದೆ. ಹಣ ತೆಗೆದುಕೊಳ್ಳುವಾಗ ಅಧಿಕಾರಿಗಳು ಅದರಲ್ಲಿ ಶಾಸಕರಿಗೆ ಮತ್ತು ಸಚಿವರಿಗೆ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ. ಸಚಿವ ರಮಾನಾಥ ರೈ ಅವರು ತೆಗೆದುಕೊಳ್ಳುತ್ತಾರೆ ಎನ್ನುವುದಕ್ಕೆ ನನ್ನ ಬಳಿ ದಾಖಲೆ ಇಲ್ಲ. ಆದ್ದರಿಂದ ನಾನು ಸುಮ್ಮಸುಮ್ಮನೆ ಅವರ ಮೇಲೆ ಆರೋಪ ಹೊರಿಸುವುದಿಲ್ಲ. ಆದರೆ ಉಳಿದವರು ತೆಗೆದುಕೊಳ್ಳುತ್ತಾರೆ ಎನ್ನುವುದು ನೂರಕ್ಕೆ ನೂರು ನಿಜ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಹೇಳಿದ್ದಾರೆ.

https://tulunadunews.com/wp-content/uploads/2017/10/vk.mp4

ಬುಧವಾರ ಕರಾವಳಿ ಕರ್ನಾಟಕದ ಸ್ಥಳೀಯ ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರದಲ್ಲಿರುವುದು ಕಾಂಗ್ರೆಸ್. ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಕಾಂಗ್ರೆಸ್. ಹಾಗಂತ ಯಾರೇ ತಪ್ಪು ಮಾಡಿದರೂ ಹೇಳಬೇಕಾಗುವ ಅಗತ್ಯ ಇದೆ. ಎಲ್ಲಾ ಕಾರ್ಪೋರೇಟರ್ ಗಳು ಲಂಚ ತೆಗೆದುಕೊಂಡೇ ಕೆಲಸ ಮಾಡುತ್ತಾರೆ ಎಂದಲ್ಲ, ಆದರೆ ತೆಗೆದುಕೊಳ್ಳದಿರುವವರ ಪ್ರಮಾಣ ಭಾರೀ ಚಿಕ್ಕದು. ಹೆಚ್ಚಿನವರು ಮುಂಚೆ ಹೇಗಿದ್ದರು, ಈಗ ಹೇಗಿದ್ದಾರೆ ಎಂದು ನೋಡಿದರೆ ಗೊತ್ತಾಗುತ್ತೆ ಎಂದು ಮಾರ್ಮಿಕವಾಗಿ ಅವರು ನುಡಿದರು. 20% ಜನಪ್ರತಿನಿಧಿಗಳಿಗೆ, 10% ಅಧಿಕಾರಿಗಳಿಗೆ ಕೊಟ್ಟ ಮೇಲೆ ಗುತ್ತಿಗೆದಾರರ ಬಳಿ ಎಷ್ಟು ಉಳಿಯುತ್ತದೆ. ಇದರಿಂದ ಅವರು ಸಿಮೆಂಟ್ ಕಡಿಮೆ, ಮರಳು ಜಾಸ್ತಿ ಹಾಕಿ ಕಾಮಗಾರಿ ಮುಗಿಸಬೇಕಾಗುತ್ತದೆ. ಕಾಮಗಾರಿಗಳು ತುಂಬಾ ದಿನ ಉಳಿಯಲ್ಲ ಎಂದು ಅವರು ಹೇಳಿದರು. ಪಾಲಿಕೆಯಲ್ಲಿರುವ ನಗರ ಯೋಜನಾ ವಿಭಾಗದಲ್ಲಿರುವ ಅಧಿಕಾರಿಗಳ ಬಳಿ ಎರಡು ಮೂರು ಐಶಾರಾಮಿ ಫ್ಲಾಟ್ ಗಳು ಇವೆ. ಸಿಕ್ಕಾಪಟ್ಟೆ ಹಣ ಇದೆ. ಇದೆಲ್ಲ ಅವರು ನ್ಯಾಯಯುತವಾಗಿ ದುಡಿಯಲು ಸಾಧ್ಯವಿಲ್ಲ. ಎಲ್ಲವೂ ಲಂಚದ ಮಹಿಮೆ ಎಂದು ಅವರು ಹೇಳಿದರು. ಹಿಂದೆ ಹೀಗಿರಲಿಲ್ಲ. ಇತ್ತೀಚೆಗಂತೂ ಲಂಚವೇ ಹೆಚ್ಚು ಮಾತನಾಡುತ್ತದೆ. ಲಂಚ ತೆಗೆದುಕೊಂಡು ಕೆಲಸ ಮಾಡುವ ಅಧಿಕಾರಿಗಳ ಫೊಟೋಗಳನ್ನು ಹೊರಗೆ ನೇತಾಡಿಸಿದರೆ ಬುದ್ಧಿ ಬರುತ್ತದೆ ಎಂದು ಕೊನೆಯಲ್ಲಿ ಮಾಜಿ ಶಾಸಕರು ಅಭಿಪ್ರಾಯಪಟ್ಟರು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search