• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಕ್ತವನ್ನು ಚೆಲ್ಲದೆ ಯುದ್ದವನ್ನು ಗೆಲ್ಲಲು ಸಾಧ್ಯವಿಲ್ಲ ಹಾಗೇನೇ ಬೆವರನ್ನು ಚೆಲ್ಲದೆ ಬದುಕನ್ನು ಗೆಲ್ಲಲು ಸಾಧ್ಯವಿಲ್ಲ-ಅನಂತ್ ಕುಮಾರ್ ಹೆಗ್ಡೆ

Tulunadu News Posted On October 16, 2017
0


0
Shares
  • Share On Facebook
  • Tweet It

ಮಂಗಳೂರಿನ: ಪುರಭವನದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ “ಪ್ರಧಾನಮಂತ್ರಿ ಮುದ್ರಾ ” MUDRA(Micro Unit Devolopment Refinancial Agency) ಯೋಜನೆಯ ಪ್ರೋತ್ಸಾಹ ಅಭಿಯಾನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹೆಗ್ಡೆ ಮಾತನಾಡಿದ ಅವರು, ಸಾಲ ಮೇಳ ಹೊಸತೇನಲ್ಲ ಮುಂಚೆಯೂ ಬ್ಯಾಂಕುಗಳು ಸಾಲ ನೀಡುತಿತ್ತು ಮುಂದೆಯೂ ನೀಡುತ್ತಾ ಇರುತ್ತವೆ, ಆದರೆ ಈ ಹಿಂದಿನ ಸಾಲ ಮೇಳಕ್ಕೂ ಈಗಿನ ಸಾಲ ಮೇಳಕ್ಕೂ ವ್ಯತಾಸಗಳಿವೆ, ಈಗಿನ ಪ್ರಧಾನ ಮಂತ್ರಿಯ ಮುದ್ರಾಯೋಜನೆಯು ಜನರಲ್ಲಿ ಆರ್ಥಿಕ ಚಟುವಟಿಕೆ, ಉದ್ದಿಮೆ ಶೀಲತೆ ಹೆಚ್ಚಾಗಬೇಕು, ನಾವೇ ಉದ್ಯೋಗ ಸೃಷ್ಟಿ ಮಾಡುವಂತಾಗಬೇಕು ಈ ನಿಟ್ಟಿನಲ್ಲಿ ಒಂದು ಒಳ್ಳೆಯ ಸಂಕಲ್ಪದೊಂದಿಗೆ ಮುದ್ರಾ ಯೋಜನೆ ಪ್ರಾರಂಭ ಮಾಡಲಾಗಿದೆ, ರಕ್ತವನ್ನು ಚೆಲ್ಲದೆ ಯುದ್ದವನ್ನು ಗೆಲ್ಲಲು ಸಾಧ್ಯವಿಲ್ಲ ಹಾಗೇನೇ ಬೆವರನ್ನು ಚೆಲ್ಲದೆ ಬದುಕನ್ನು ಗೆಲ್ಲಲು ಸಾಧ್ಯವಿಲ್ಲ, ಕೌಶಲ್ಯ ಇಲ್ಲದೇನೆ ಬದುಕು ಸುಂದರವಾಗಲು ಸಾಧ್ಯವಿಲ್ಲ, ಯಶಸ್ಸಿನ ಹೆಜ್ಜೆಯನ್ನಿಡಬೇಕಾದರೆ ಕೌಶಲ್ಯ ಬೇಕು, ಹಾಗಾಗಿ ಭಾರತ ಸರ್ಕಾರ ಕೌಶಲ್ಯ ಅಭಿವೃದ್ದಿ ತರಬೇತಿಗೆ ಎಲ್ಲ ರೀತಿಯ ಸಹಕಾರ ನೀಡಲು ಬಯಸುತ್ತದೆ. ಈ ದೇಶ ಕಟ್ಟಬೇಕಾದರೆ ಸಣ್ಣ ಸಣ್ಣ ಉದ್ಯಮಗಳೇ ಜಾಸ್ತಿಯಾಗಬೇಕು, ಯಾರಿಗೆ ಶ್ರಮದ ಕಲ್ಪನೆ ಇರೋದಿಲ್ಲ ಅಂತಹ ಬದುಕಿಗೆ ಅರ್ಥ ಇರೋದಿಲ್ಲ,  ಶ್ರಮವಿಲ್ಲದೆ ಬದುಕು ಅರ್ಥವಾಗಲು ಸಾಧ್ಯವಿಲ್ಲ, ಒಂದು ಗೆಲುವಿನ ಹಿಂದೆ ಶ್ರಮವಿರುತ್ತದೆ ಈ ನಿಟ್ಟಿನಲ್ಲಿ ಮುದ್ರಾ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಸಂಸದ ನಳಿನ್ ಕುಮಾರ್ ಕಟೀಲ್ ವಹಿಸಿದ್ದರು ಮತ್ತು ಕೇಂದ್ರ ಸಚಿವರಾದ ಶ್ರೀ ಅನಂತಕುಮಾರ್ ಮುಖ್ಯ ಅಭ್ಯಾಗತರಾಗಿದ್ದರು, ಕಾರ್ಯಕ್ರಮದಲ್ಲಿ ಮುದ್ರಾ ಹಾಗು ಸ್ಟಾಂಡ್ ಅಪ್ ಇಂಡಿಯಾ ಯೋಜನೆಗಳ ಫಲಾನುಭವಿಗಳಿಗೆ ಆಯಾಯ ಬ್ಯಾಂಕ್ ಮುಖೇನ ಚೆಕ್ಗಳನ್ನು ವಿತರಿಸಲಾಯಿತು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search