• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಧರ್ಮಸ್ಥಳದಲ್ಲಿ ಮೋದಿ ಸಮ್ಮುಖ ಬಿಜೆಪಿ ಸೇರುವ 8 ಕಾಂಗ್ರೆಸ್ ಶಾಸಕರ್ಯಾರು?

S. Acharya Posted On October 20, 2017
0


0
Shares
  • Share On Facebook
  • Tweet It

ಅಕ್ಟೋಬರ್ 29 ರಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಅಲ್ಲಿ ದೇವರ ದರ್ಶನ ಮಾಡಿದ ಬಳಿಕ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ 50 ನೇ ವರ್ಷದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅದರ ಬಳಿಕ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ದೆಹಲಿಗೆ ಹಿಂತಿರುಗಲಿದ್ದಾರೆ. ನರೇಂದ್ರ ಮೋದಿಯವರ ಧರ್ಮಸ್ಥಳದ ಕಾರ್ಯಕ್ರಮದಲ್ಲಿ ಅವರ ಸಮ್ಮುಖ ರಾಜ್ಯದ ಎಂಟು ಜನ ಕಾಂಗ್ರೆಸ್ ಪಕ್ಷದ ಶಾಸಕರುಗಳು ಭಾರತೀಯ ಜನತಾ ಪಾರ್ಟಿಗೆ ಸೇರಲಿದ್ದಾರೆ ಎಂದು ದೆಹಲಿಯ ಮೂಲಗಳಿಂದ ತಿಳಿದು ಬಂದಿದೆ.
ಅದರಲ್ಲಿ ಕರಾವಳಿಯ ಇಬ್ಬರು ಶಾಸಕರು ಮತ್ತು ಓರ್ವ ಸಚಿವರು ಕೂಡ ಇರಲಿದ್ದಾರೆ ಎನ್ನುವುದು ಸದ್ಯದ ಮಾಹಿತಿ. ಹಿಂದೆ ಬಿಜೆಪಿಯಿಂದ ಶಾಸಕಿಯಾಗಿ ನಂತರ ಕಾಂಗ್ರೆಸ್ ಗೆ ಹೋಗಿ ಅಲ್ಲಿ ಶಾಸಕಿಯಾಗಿರುವ ಶಕುಂತಳಾ ಶೆಟ್ಟಿಯವರು ಇದೇ ಸಂದರ್ಭದಲ್ಲಿ ಬಿಜೆಪಿಯನ್ನು ಸೇರುತ್ತಾರಾ ಅಥವಾ ಇಲ್ಲವಾ ಎನ್ನುವ ಬಗ್ಗೆ ಪುತ್ತೂರಿನ ಬಿಜೆಪಿ ವಲಯದಲ್ಲಿ ಗುಸುಗುಸು ಪ್ರಾರಂಭವಾಗಿದೆ. ಹಾಗೆ ಬೆಳ್ತಂಗಡಿಯ ಶಾಸಕ ವಸಂತ ಬಂಗೇರ ಅವರು ಕೂಡ ಇದೇ ಸಮಯಕ್ಕೆ ಪ್ರಧಾನ ಮಂತ್ರಿಗಳ ಸಮ್ಮುಖದಲ್ಲಿ ಮತ್ತೆ ತಮ್ಮ ಮಾತೃ ಪಕ್ಷಕ್ಕೆ ಮರಳುತ್ತಾರಾ ಎನ್ನುವುದರ ಕುರಿತು ಮಾತುಕತೆಗಳು ನಡೆಯುತ್ತಿದೆ. ಶಕುಂತಳಾ ಶೆಟ್ಟಿ ಹಾಗೂ ವಸಂತ ಬಂಗೇರ ಇಬ್ಬರಿಗೂ ಬಿಜೆಪಿಗೆ ಬರುವುದೆಂದರೆ ಅದೊಂದು ರೀತಿಯಲ್ಲಿ ಘರ್ ವಾಪಸಿ. ಆದರೆ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಗೆ ಸೇರಿದರೆ ಅದು ಕರಾವಳಿಯ ಮಟ್ಟಿಗೆ ಅತೀ ದೊಡ್ಡ ಸಂಚಲನವನ್ನು ಉಂಟು ಮಾಡಲಿದೆ. ಪ್ರಮೋದ್ ಮಧ್ವರಾಜ್ ಅವರು ಪ್ರಾರಂಭದಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ಅವರ ತಾಯಿ ಮನೋರಮಾ ಮಧ್ವರಾಜ್ ಅವರು ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದು ನಂತರ ಕೊನೆಯಲ್ಲಿ ಯಾವ ಪಕ್ಷದಲ್ಲಿಯೂ ಇರದೆ ತಟಸ್ಥರಾಗಿಯೇ ಉಳಿದರು. ಆದರೆ ಪ್ರಮೋದ್ ಅವರಿಗೆ ಇನ್ನೂ ಚಿಕ್ಕ ವಯಸ್ಸು. ಮೊದಲ ಬಾರಿಗೆ ಶಾಸಕರಾದ ನಂತರ ಸಚಿವರೂ ಆದವರು. ಆದರೆ ಅವರಿಗೆ ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಅನಿಸಿರುವ ಕಾರಣ ಅವರು ಕೂಡ ಬಿಜೆಪಿಗೆ ಸೇರುತ್ತಾರೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಿದ್ದಾರೆ. ಹೀಗೆ ಈ ಮೂವರು ಬಿಜೆಪಿಗೆ ಬಂದರೆ ಕರಾವಳಿಯಲ್ಲಿ ಬಿಜೆಪಿಯ ಬಲ ಹೆಚ್ಚಾಗಲಿದೆ. ಆದರೆ ಮೂವರು ಕೂಡ ಬಿಜೆಪಿಗೆ ಸೇರಲಿರುವ ವದಂತಿಯನ್ನು ಅಲ್ಲಗಳೆಯುತ್ತಿದ್ದಾರೆ. ಆದ್ದರಿಂದ ಸದ್ಯಕ್ಕೆ ಈ ವಿಷಯ ಕನ್ ಫರ್ಮ್ ಆಗಿಲ್ಲ. ಆದರೆ ನರೇಂದ್ರ ಮೋದಿಯವರ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಧಾರ್ಮಿಕ ಕೇಂದ್ರವೊಂದರ ಭೇಟಿ ಹಾಗೆ ಮುಗಿದು ಹೋಗುವುದಿಲ್ಲ. ರಾಜಕೀಯ ಚಾಣಾಕ್ಯ ಮೋದಿ ಹಾಗೆ ಸುಮ್ಮನೆ ಎಲ್ಲಿ ಕೂಡ ಬಂದು ಹೋಗುವುದಿಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಅದೇ ದಿನ ಅವರ ಬೆಂಗಳೂರು ಪ್ರವಾಸ ಮತ್ತು ಬೀದರ್ ಪ್ರವಾಸದಲ್ಲಿಯೂ ರಾಜಕೀಯ ವಿಪ್ಲಲಗಳು ನಡೆಯಲಿದೆ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ಮೋದಿ ಕರ್ನಾಟಕದಲ್ಲಿ ಕಾಲಿಟ್ಟು ಹೋಗುವುದರ ಒಳಗೆ ಒಂದಿಷ್ಟು ರಾಜಕೀಯ ಸುಂಟರಗಾಳಿ ಬೀಸಲಿದೆ. ಕನಿಷ್ಟ 8 ಜನ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬಾಯ್ ಹೇಳಲಿದ್ದಾರೆ ಎನ್ನುವುದು ಆಂತರಿಕ ಸುದ್ದಿ.

0
Shares
  • Share On Facebook
  • Tweet It


bjpDharmastalamodi


Trending Now
ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
S. Acharya August 7, 2025
ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
S. Acharya August 6, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
  • Popular Posts

    • 1
      ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • 2
      ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • 3
      ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • 4
      "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • 5
      ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!

  • Privacy Policy
  • Contact
© Tulunadu Infomedia.

Press enter/return to begin your search