• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಧರ್ಮಸ್ಥಳದಲ್ಲಿ ಮೋದಿ ಸಮ್ಮುಖ ಬಿಜೆಪಿ ಸೇರುವ 8 ಕಾಂಗ್ರೆಸ್ ಶಾಸಕರ್ಯಾರು?

S. Acharya Posted On October 20, 2017
0


0
Shares
  • Share On Facebook
  • Tweet It

ಅಕ್ಟೋಬರ್ 29 ರಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಅಲ್ಲಿ ದೇವರ ದರ್ಶನ ಮಾಡಿದ ಬಳಿಕ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ 50 ನೇ ವರ್ಷದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅದರ ಬಳಿಕ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ದೆಹಲಿಗೆ ಹಿಂತಿರುಗಲಿದ್ದಾರೆ. ನರೇಂದ್ರ ಮೋದಿಯವರ ಧರ್ಮಸ್ಥಳದ ಕಾರ್ಯಕ್ರಮದಲ್ಲಿ ಅವರ ಸಮ್ಮುಖ ರಾಜ್ಯದ ಎಂಟು ಜನ ಕಾಂಗ್ರೆಸ್ ಪಕ್ಷದ ಶಾಸಕರುಗಳು ಭಾರತೀಯ ಜನತಾ ಪಾರ್ಟಿಗೆ ಸೇರಲಿದ್ದಾರೆ ಎಂದು ದೆಹಲಿಯ ಮೂಲಗಳಿಂದ ತಿಳಿದು ಬಂದಿದೆ.
ಅದರಲ್ಲಿ ಕರಾವಳಿಯ ಇಬ್ಬರು ಶಾಸಕರು ಮತ್ತು ಓರ್ವ ಸಚಿವರು ಕೂಡ ಇರಲಿದ್ದಾರೆ ಎನ್ನುವುದು ಸದ್ಯದ ಮಾಹಿತಿ. ಹಿಂದೆ ಬಿಜೆಪಿಯಿಂದ ಶಾಸಕಿಯಾಗಿ ನಂತರ ಕಾಂಗ್ರೆಸ್ ಗೆ ಹೋಗಿ ಅಲ್ಲಿ ಶಾಸಕಿಯಾಗಿರುವ ಶಕುಂತಳಾ ಶೆಟ್ಟಿಯವರು ಇದೇ ಸಂದರ್ಭದಲ್ಲಿ ಬಿಜೆಪಿಯನ್ನು ಸೇರುತ್ತಾರಾ ಅಥವಾ ಇಲ್ಲವಾ ಎನ್ನುವ ಬಗ್ಗೆ ಪುತ್ತೂರಿನ ಬಿಜೆಪಿ ವಲಯದಲ್ಲಿ ಗುಸುಗುಸು ಪ್ರಾರಂಭವಾಗಿದೆ. ಹಾಗೆ ಬೆಳ್ತಂಗಡಿಯ ಶಾಸಕ ವಸಂತ ಬಂಗೇರ ಅವರು ಕೂಡ ಇದೇ ಸಮಯಕ್ಕೆ ಪ್ರಧಾನ ಮಂತ್ರಿಗಳ ಸಮ್ಮುಖದಲ್ಲಿ ಮತ್ತೆ ತಮ್ಮ ಮಾತೃ ಪಕ್ಷಕ್ಕೆ ಮರಳುತ್ತಾರಾ ಎನ್ನುವುದರ ಕುರಿತು ಮಾತುಕತೆಗಳು ನಡೆಯುತ್ತಿದೆ. ಶಕುಂತಳಾ ಶೆಟ್ಟಿ ಹಾಗೂ ವಸಂತ ಬಂಗೇರ ಇಬ್ಬರಿಗೂ ಬಿಜೆಪಿಗೆ ಬರುವುದೆಂದರೆ ಅದೊಂದು ರೀತಿಯಲ್ಲಿ ಘರ್ ವಾಪಸಿ. ಆದರೆ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಗೆ ಸೇರಿದರೆ ಅದು ಕರಾವಳಿಯ ಮಟ್ಟಿಗೆ ಅತೀ ದೊಡ್ಡ ಸಂಚಲನವನ್ನು ಉಂಟು ಮಾಡಲಿದೆ. ಪ್ರಮೋದ್ ಮಧ್ವರಾಜ್ ಅವರು ಪ್ರಾರಂಭದಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ಅವರ ತಾಯಿ ಮನೋರಮಾ ಮಧ್ವರಾಜ್ ಅವರು ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದು ನಂತರ ಕೊನೆಯಲ್ಲಿ ಯಾವ ಪಕ್ಷದಲ್ಲಿಯೂ ಇರದೆ ತಟಸ್ಥರಾಗಿಯೇ ಉಳಿದರು. ಆದರೆ ಪ್ರಮೋದ್ ಅವರಿಗೆ ಇನ್ನೂ ಚಿಕ್ಕ ವಯಸ್ಸು. ಮೊದಲ ಬಾರಿಗೆ ಶಾಸಕರಾದ ನಂತರ ಸಚಿವರೂ ಆದವರು. ಆದರೆ ಅವರಿಗೆ ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಅನಿಸಿರುವ ಕಾರಣ ಅವರು ಕೂಡ ಬಿಜೆಪಿಗೆ ಸೇರುತ್ತಾರೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಿದ್ದಾರೆ. ಹೀಗೆ ಈ ಮೂವರು ಬಿಜೆಪಿಗೆ ಬಂದರೆ ಕರಾವಳಿಯಲ್ಲಿ ಬಿಜೆಪಿಯ ಬಲ ಹೆಚ್ಚಾಗಲಿದೆ. ಆದರೆ ಮೂವರು ಕೂಡ ಬಿಜೆಪಿಗೆ ಸೇರಲಿರುವ ವದಂತಿಯನ್ನು ಅಲ್ಲಗಳೆಯುತ್ತಿದ್ದಾರೆ. ಆದ್ದರಿಂದ ಸದ್ಯಕ್ಕೆ ಈ ವಿಷಯ ಕನ್ ಫರ್ಮ್ ಆಗಿಲ್ಲ. ಆದರೆ ನರೇಂದ್ರ ಮೋದಿಯವರ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಧಾರ್ಮಿಕ ಕೇಂದ್ರವೊಂದರ ಭೇಟಿ ಹಾಗೆ ಮುಗಿದು ಹೋಗುವುದಿಲ್ಲ. ರಾಜಕೀಯ ಚಾಣಾಕ್ಯ ಮೋದಿ ಹಾಗೆ ಸುಮ್ಮನೆ ಎಲ್ಲಿ ಕೂಡ ಬಂದು ಹೋಗುವುದಿಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಅದೇ ದಿನ ಅವರ ಬೆಂಗಳೂರು ಪ್ರವಾಸ ಮತ್ತು ಬೀದರ್ ಪ್ರವಾಸದಲ್ಲಿಯೂ ರಾಜಕೀಯ ವಿಪ್ಲಲಗಳು ನಡೆಯಲಿದೆ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ಮೋದಿ ಕರ್ನಾಟಕದಲ್ಲಿ ಕಾಲಿಟ್ಟು ಹೋಗುವುದರ ಒಳಗೆ ಒಂದಿಷ್ಟು ರಾಜಕೀಯ ಸುಂಟರಗಾಳಿ ಬೀಸಲಿದೆ. ಕನಿಷ್ಟ 8 ಜನ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬಾಯ್ ಹೇಳಲಿದ್ದಾರೆ ಎನ್ನುವುದು ಆಂತರಿಕ ಸುದ್ದಿ.

0
Shares
  • Share On Facebook
  • Tweet It


bjpDharmastalamodi


Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
S. Acharya January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
S. Acharya January 10, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search