• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಧರ್ಮಸ್ಥಳದಲ್ಲಿ ಮೋದಿ ಸಮ್ಮುಖ ಬಿಜೆಪಿ ಸೇರುವ 8 ಕಾಂಗ್ರೆಸ್ ಶಾಸಕರ್ಯಾರು?

S. Acharya Posted On October 20, 2017


  • Share On Facebook
  • Tweet It

ಅಕ್ಟೋಬರ್ 29 ರಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಅಲ್ಲಿ ದೇವರ ದರ್ಶನ ಮಾಡಿದ ಬಳಿಕ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ 50 ನೇ ವರ್ಷದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅದರ ಬಳಿಕ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ದೆಹಲಿಗೆ ಹಿಂತಿರುಗಲಿದ್ದಾರೆ. ನರೇಂದ್ರ ಮೋದಿಯವರ ಧರ್ಮಸ್ಥಳದ ಕಾರ್ಯಕ್ರಮದಲ್ಲಿ ಅವರ ಸಮ್ಮುಖ ರಾಜ್ಯದ ಎಂಟು ಜನ ಕಾಂಗ್ರೆಸ್ ಪಕ್ಷದ ಶಾಸಕರುಗಳು ಭಾರತೀಯ ಜನತಾ ಪಾರ್ಟಿಗೆ ಸೇರಲಿದ್ದಾರೆ ಎಂದು ದೆಹಲಿಯ ಮೂಲಗಳಿಂದ ತಿಳಿದು ಬಂದಿದೆ.
ಅದರಲ್ಲಿ ಕರಾವಳಿಯ ಇಬ್ಬರು ಶಾಸಕರು ಮತ್ತು ಓರ್ವ ಸಚಿವರು ಕೂಡ ಇರಲಿದ್ದಾರೆ ಎನ್ನುವುದು ಸದ್ಯದ ಮಾಹಿತಿ. ಹಿಂದೆ ಬಿಜೆಪಿಯಿಂದ ಶಾಸಕಿಯಾಗಿ ನಂತರ ಕಾಂಗ್ರೆಸ್ ಗೆ ಹೋಗಿ ಅಲ್ಲಿ ಶಾಸಕಿಯಾಗಿರುವ ಶಕುಂತಳಾ ಶೆಟ್ಟಿಯವರು ಇದೇ ಸಂದರ್ಭದಲ್ಲಿ ಬಿಜೆಪಿಯನ್ನು ಸೇರುತ್ತಾರಾ ಅಥವಾ ಇಲ್ಲವಾ ಎನ್ನುವ ಬಗ್ಗೆ ಪುತ್ತೂರಿನ ಬಿಜೆಪಿ ವಲಯದಲ್ಲಿ ಗುಸುಗುಸು ಪ್ರಾರಂಭವಾಗಿದೆ. ಹಾಗೆ ಬೆಳ್ತಂಗಡಿಯ ಶಾಸಕ ವಸಂತ ಬಂಗೇರ ಅವರು ಕೂಡ ಇದೇ ಸಮಯಕ್ಕೆ ಪ್ರಧಾನ ಮಂತ್ರಿಗಳ ಸಮ್ಮುಖದಲ್ಲಿ ಮತ್ತೆ ತಮ್ಮ ಮಾತೃ ಪಕ್ಷಕ್ಕೆ ಮರಳುತ್ತಾರಾ ಎನ್ನುವುದರ ಕುರಿತು ಮಾತುಕತೆಗಳು ನಡೆಯುತ್ತಿದೆ. ಶಕುಂತಳಾ ಶೆಟ್ಟಿ ಹಾಗೂ ವಸಂತ ಬಂಗೇರ ಇಬ್ಬರಿಗೂ ಬಿಜೆಪಿಗೆ ಬರುವುದೆಂದರೆ ಅದೊಂದು ರೀತಿಯಲ್ಲಿ ಘರ್ ವಾಪಸಿ. ಆದರೆ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಗೆ ಸೇರಿದರೆ ಅದು ಕರಾವಳಿಯ ಮಟ್ಟಿಗೆ ಅತೀ ದೊಡ್ಡ ಸಂಚಲನವನ್ನು ಉಂಟು ಮಾಡಲಿದೆ. ಪ್ರಮೋದ್ ಮಧ್ವರಾಜ್ ಅವರು ಪ್ರಾರಂಭದಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ಅವರ ತಾಯಿ ಮನೋರಮಾ ಮಧ್ವರಾಜ್ ಅವರು ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದು ನಂತರ ಕೊನೆಯಲ್ಲಿ ಯಾವ ಪಕ್ಷದಲ್ಲಿಯೂ ಇರದೆ ತಟಸ್ಥರಾಗಿಯೇ ಉಳಿದರು. ಆದರೆ ಪ್ರಮೋದ್ ಅವರಿಗೆ ಇನ್ನೂ ಚಿಕ್ಕ ವಯಸ್ಸು. ಮೊದಲ ಬಾರಿಗೆ ಶಾಸಕರಾದ ನಂತರ ಸಚಿವರೂ ಆದವರು. ಆದರೆ ಅವರಿಗೆ ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಅನಿಸಿರುವ ಕಾರಣ ಅವರು ಕೂಡ ಬಿಜೆಪಿಗೆ ಸೇರುತ್ತಾರೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಿದ್ದಾರೆ. ಹೀಗೆ ಈ ಮೂವರು ಬಿಜೆಪಿಗೆ ಬಂದರೆ ಕರಾವಳಿಯಲ್ಲಿ ಬಿಜೆಪಿಯ ಬಲ ಹೆಚ್ಚಾಗಲಿದೆ. ಆದರೆ ಮೂವರು ಕೂಡ ಬಿಜೆಪಿಗೆ ಸೇರಲಿರುವ ವದಂತಿಯನ್ನು ಅಲ್ಲಗಳೆಯುತ್ತಿದ್ದಾರೆ. ಆದ್ದರಿಂದ ಸದ್ಯಕ್ಕೆ ಈ ವಿಷಯ ಕನ್ ಫರ್ಮ್ ಆಗಿಲ್ಲ. ಆದರೆ ನರೇಂದ್ರ ಮೋದಿಯವರ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಧಾರ್ಮಿಕ ಕೇಂದ್ರವೊಂದರ ಭೇಟಿ ಹಾಗೆ ಮುಗಿದು ಹೋಗುವುದಿಲ್ಲ. ರಾಜಕೀಯ ಚಾಣಾಕ್ಯ ಮೋದಿ ಹಾಗೆ ಸುಮ್ಮನೆ ಎಲ್ಲಿ ಕೂಡ ಬಂದು ಹೋಗುವುದಿಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಅದೇ ದಿನ ಅವರ ಬೆಂಗಳೂರು ಪ್ರವಾಸ ಮತ್ತು ಬೀದರ್ ಪ್ರವಾಸದಲ್ಲಿಯೂ ರಾಜಕೀಯ ವಿಪ್ಲಲಗಳು ನಡೆಯಲಿದೆ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ಮೋದಿ ಕರ್ನಾಟಕದಲ್ಲಿ ಕಾಲಿಟ್ಟು ಹೋಗುವುದರ ಒಳಗೆ ಒಂದಿಷ್ಟು ರಾಜಕೀಯ ಸುಂಟರಗಾಳಿ ಬೀಸಲಿದೆ. ಕನಿಷ್ಟ 8 ಜನ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬಾಯ್ ಹೇಳಲಿದ್ದಾರೆ ಎನ್ನುವುದು ಆಂತರಿಕ ಸುದ್ದಿ.

  • Share On Facebook
  • Tweet It


- Advertisement -
bjpDharmastalamodi


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
S. Acharya May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
S. Acharya May 5, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search