• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಬೇಡ: ಅನಂತಕುಮಾರ್ ಹೆಗಡೆ

TNN Correspondent Posted On October 21, 2017


  • Share On Facebook
  • Tweet It

ಮಂಗಳೂರು: ಹಲವು ದಿಟ್ಟ ನಡೆ ಹಾಗೂ ಹೇಳಿಕೆಗಳಿಂದಲೇ ಮನೆಮಾತಾಗಿರುವ ಉತ್ತರ ಕನ್ನಡ ಸಂಸದ ಹಾಗೂ ಕೇಂದ್ರ ಕೌಶಲಭಾವೃದ್ಧಿ ಖಾತೆ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಈಗ ಮತ್ತೊಂದು ದಿಟ್ಟ ನಿರ್ಧಾರ ಘೋಷಿಸಿದ್ದು, “ಟಿಪ್ಪು ಸುಲ್ತಾನ್ ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಮುದ್ರಿಸುವುದು ಬೇಡ” ಎಂದಿದ್ದಾರೆ.

ಹೌದು, ಈ ಕುರಿತು ಅನಂತಕುಮಾರ್ ಹೆಗಡೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ತಮ್ಮ ಹೆಸರು ಮುದ್ರಿಸದಂತೆ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಕುರಿತು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಿಗೆ ನೋಟಿಸ್ ನೀಡಿದೆ. ಆದರೆ ಸರ್ಕಾರದ ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಉಲ್ಲೇಖಿಸುವುದು ಬೇಡ ಎಂದು ಹೆಗಡೆ ಅವರ ವೈಯಕ್ತಿಕ ಕಾರ್ಯದರ್ಶಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಕಳೆದ ವರ್ಷವೂ ಅನಂತಕುಮಾರ್ ಹೆಗಡೆ ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಉಲ್ಲೇಖಿಸದಂತೆ ಉತ್ತರ ಕನ್ನಡದ ಡೆಪ್ಯೂಟಿ ಕಮಿಷನರ್ ಅವರಿಗೆ ತಿಳಿಸಿದ್ದರು. 2015ರಿಂದಲೂ ಬಿಜೆಪಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದೆ.

ಅದರಲ್ಲೂ ಅನಂತಕುಮಾರ್ ಹೆಗಡೆ ಅವರಂತೂ, “ಟಿಪ್ಪು ಕನ್ನಡ ಹಾಗೂ ಹಿಂದೂ ವಿರೋಧಿ. ಅವರ ಜಯಂತಿ ಆಚರಣೆ ಸಲ್ಲ” ಎಂದು ಹೇಳಿಕೆ ನೀಡಿದ್ದರು.

 

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search