• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ವಿಧಾನಸೌಧ ನಿರ್ಮಾಣವಾದದ್ದೇ 1.5 ಕೋಟಿ ರೂ.ಗಳಲ್ಲಿ, ಸಿದ್ದರಾಮಯ್ಯ ವ್ಯಯಿಸುತ್ತಿರುವುದು 10 ಕೋಟಿ!

-ನವೀನ್ ಶೆಟ್ಟಿ, ಬೆಳ್ತಂಗಡಿ Posted On October 21, 2017
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರ ಕೇಂದ್ರವಾದ, ಆಡಳಿತದ ಹೃದಯ ಭಾಗವಾದ ವಿಧಾನಸೌಧಕ್ಕೆ 60 ವರ್ಷ ತುಂಬಿದ ಸುವರ್ಣ ಘಳಿಗೆ ಸಂಭ್ರಮದಿಂದ ಆಚರಿಸುವುದು ಸಮಂಜಸ ಹಾಗೂ ಅದನ್ನು ನಿರ್ಮಿಸಿದ ಕೆಂಗಲ್ ಹನುಮಂತಯ್ಯನವರಿಗೆ ಸಲ್ಲಿಸುವ ಗೌರವಕ್ಕೆ ಸಮಾನ.

ಆದರೆ ಅದಕ್ಕೆ ಒಂದು ಮಿತಿ ಬೇಡವೇ? ಒಂದು ನಿರ್ದಿಷ್ಟ ಖರ್ಚು, ನಿರ್ದಿಷ್ಟ ಯೋಜನೆಯೊಂದಿಗೆ ಸರ್ಕಾರ ಮುಂದಡಿಯಿಡುವುದು ಬೇಡವೇ? ಯಾವುದೇ ಮುಂದಾಲೋಚನೆಯೇ ಇಲ್ಲದೆ ಶಾದಿ ಭಾಗ್ಯದಂಥ ಯೋಜನೆ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರ ಯೋಜನೆಗಳೇ ಹೀಗೆಯೇ?

ವಜ್ರ ಮಹೋತ್ಸವದ ವಿಷಯಕ್ಕೇ ಬರುವುದಾದರೆ, ಮೊದಲು ಸರ್ಕಾರ ಊಟಕ್ಕೂ ಕೋಟಿ ರೂಪಾಯಿ ಖರ್ಚಿನ ಲೆಕ್ಕ ತೋರಿಸಿ ಒಟ್ಟು 26.87 ಕೋಟಿ ರೂಪಾಯಿಗಳಲ್ಲಿ ವಜ್ರಮಹೋತ್ಸವ ಆಚರಿಸಲು ನಿರ್ಧರಿಸಿತ್ತು. ಆದರೆ ರಾಜ್ಯಾದ್ಯಂತ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ 10 ಕೋಟಿ ರೂಪಾಯಿಗೆ ಇಳಿಸಿದ್ದಾರೆ. ಹಾಗಂತ ಇದೇನು ಕಡಿಮೆ ವೆಚ್ಚವಲ್ಲ. ಅದೂ ಒಂದು ದಿನಕ್ಕೆ 10 ಕೋಟಿ ರೂಪಾಯಿ ಖರ್ಚು ಎಂದರೆ ಸುಮ್ಮನೆಯೇ?

ನೆನಪಿರಲಿ, ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಿಸಲು ಆಗ ಖರ್ಚು ಮಾಡಿದ್ದು ಸುಮಾರು 1.5 ಕೋಟಿ ರೂಪಾಯಿ. ಹೌದು ಕಾಲಘಟ್ಟದ ವ್ಯತ್ಯಾಸದಲ್ಲಿ ರೂಪಾಯಿ ವ್ಯತ್ಯಾಸವಾಗುತ್ತದೆ ಎನ್ನೋಣ. ಹಾಗೆ ನೋಡಿದರೆ ಕೆಂಗಲ್ ಹನುಮಂತಯ್ಯನವರಿಗೆ ದುಂದು ವೆಚ್ಚ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದವು. ಹಾಗಾಗಿ, ಆಗ ವಿಧಾನಸೌಧ ನಿರ್ಮಿಸಲು 1.5 ಕೋಟಿ ರೂಪಾಯಿ ದುಬಾರಿಯಾದರೆ, ಈಗ ಒಂದು ದಿನದ ಕಾರ್ಯಕ್ರಮಕ್ಕೆ 10 ಕೋಟಿ ರೂಪಾಯಿ ವ್ಯಯಿಸುವುದೂ ದುಬಾರಿಯೇ.

ಇನ್ನು ಈ ವಜ್ರ ಮಹೋತ್ಸವದ ಆಚರಣೆಯಲ್ಲಿ ಸರ್ಕಾರದ ಲೆಕ್ಕಾಚಾರ ಹೇಗಿದೆ ನೋಡಿ. ಒಂದು ಊಟಕ್ಕೆ 2000 ರೂಪಾಯಿ ನಿಗದಿಪಡಿಸಿದ್ದನ್ನು 380ಕ್ಕೆ ನಿಗದಿಡಪಿಸಲಾಗಿದೆ ಎಂದು ತಿಳಿದು ಬಂದಿದೆ. ಸಾಕ್ಷ್ಯ ಚಿತ್ರ ನಿರ್ಮಾಣಕ್ಕೆ ಟಿ.ಎನ್.ಸೀತಾರಾಂ ಅವರಿಗೆ ನಿಗದಿಪಡಿಸಿದ್ದ 1.58 ಕೋಟಿ ರೂಪಾಯಿ ಬದಲಿಗೆ 50 ಲಕ್ಷ, ಮಾಸ್ಟರ್ ಕಿಶನ್ ಅವರಿಗೆ 1.02 ಕೋಟಿ ರೂ. ಬದಲಿಗೆ 40 ಲಕ್ಷ. ಹೀಗೆ ಎಲ್ಲ ಖರ್ಚುಗಳನ್ನೂ ಕತ್ತರಿ ಹಾಕಲಾಗಿದೆ.

ಇದನ್ನು ಮೊದಲೇ ಯೋಚಿಸಿದರೆ ಈಗಿರುವ 10 ಕೋಟಿ ರೂಪಾಯಿಯಲ್ಲೂ ಕಡಿತಗೊಳಿಸಬಹುದಿತ್ತಲ್ಲವೇ ಮುಖ್ಯಮಂತ್ರಿಯವರೇ? ಸರಳ ದಸರಾದಂತೆಯೇ ಈ ಕಾರ್ಯಕ್ರಮವನ್ನೂ ಆಚರಿಸಬೇಕು ಎಂಬ ಮನೋಭಾವ ಎಲ್ಲರೂ ಟೀಕಿಸಿದ ಮೇಲೆಯೇ ಅರಿವಾಯಿತೇ? ಹೀಗೆ ದುಂದು ವೆಚ್ಚ ತಡೆದು ಬೆಂಗಳೂರಿನ ಗುಂಡಿಗಳಾದರೂ ಮುಚ್ಚಿಸಿ ಜನರ ಜೀವ ಉಳಿಸುವ ಕಲ್ಪನೆಯೇಕೆ ನಿಮ್ಮ ಯೋಚನೆಗೆ ಬರಲಿಲ್ಲ?

ಇನ್ನು, ವಜ್ರಮಹೋತ್ಸವದ ಅನುದಾನ ಬಿಡುಗಡೆಗೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರಂಥವರೇ ನಿಮ್ಮ ಮನೆ ಬಾಗಿಲಿಗೆ ಬರುವಂತಾಗಿದೆ ಎಂದರೆ ನಿಮ್ಮ ಸಂಪುಟದ, ಸರ್ಕಾರದ ಘನವೆತ್ತವರೇ ಹಣದ ವಿಚಾರದಲ್ಲಿ ಹೇಗೆ ವರ್ತಿಸುತ್ತಿದ್ದಾರೆ, ಘನವೆತ್ತ ಸ್ಥಾನದ ಮರ್ಯಾದೆಯನ್ನು ಎಷ್ಟರಮಟ್ಟಿಗೆ ಉಳಿಸುತ್ತಿದ್ದಾರೆ ಎಂಬುದು ಗೊತ್ತಾಗುತ್ತಿದೆ ಬಿಡಿ.

 

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
-ನವೀನ್ ಶೆಟ್ಟಿ, ಬೆಳ್ತಂಗಡಿ May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
-ನವೀನ್ ಶೆಟ್ಟಿ, ಬೆಳ್ತಂಗಡಿ May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search