• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಕಟೀಲಿನಲ್ಲಿ ಎಂಥಾ ಲೋಕವಯ್ಯಾ ಚಿತ್ರದ ಸ್ಕ್ರಿಪ್ಟ್ ಗೆ ಪೂಜೆ

ganesh kumar Posted On October 21, 2017
0


0
Shares
  • Share On Facebook
  • Tweet It

ಹೊಸತನದ ಆವಿಷ್ಕಾರದಲ್ಲಿ ಸಿನೆಮಾವೊಂದನ್ನು ನಿರ್ಮಾಣ ಮಾಡಲು ಯೋಜಿಸಲಾಗಿದ್ದು ಪ್ರಸ್ತುತ ಸಮಾಜದಲ್ಲಿರುವ ಮೂಢನಂಬಿಕೆಗಳಿಂದ ಜನ ಹೇಗೆ ತಮ್ಮತನವನ್ನು ಕಳೆದುಕೊಂಡು ಬದಲಾಗುತ್ತಾರೆ ಎನ್ನುವುದು ಚಿತ್ರದ ತಿರುಳು ಎಂದು ಎಂಥಾ ಲೋಕವಯ್ಯಾ ಚಿತ್ರದ ನಿರ್ಮಾಪಕ ಮಂಗಲ್ಪಾಡಿ ನರೇಶ್ ಹೇಳಿದ್ದಾರೆ. ಚಿತ್ರ ಕನ್ನಡ ಭಾಷೆಯಲ್ಲಿ ಬರಲಿದ್ದು ಅದರೊಂದಿಗೆ ನಮ್ಮ ತುಳು ಮತ್ತು ಕೊಂಕಣಿ ಭಾಷೆಗಳನ್ನು ಸಂದರ್ಭಾನುಸಾರವಾಗಿ ಬಳಸಿ ಇಲ್ಲಿನ ಮಣ್ಣಿನ ಆಚಾರ, ವಿಚಾರಗಳು, ಸಂಸ್ಕೃತಿ ಮತ್ತು ಕರಾವಳಿಯ ವಿವಿಧ ಸಮಸ್ಯೆಗಳನ್ನು ಹೇಗೆ ಸುಲಲಿತವಾಗಿ ಪರಿಹರಿಸಬಹುದು ಎನ್ನುವುದನ್ನು ಹಾಸ್ಯದ ಮಿಶ್ರಣದೊಂದಿಗೆ ನವಿರಾದ ನಿರೂಪಣೆಯಲ್ಲಿ ಚಿತ್ರೀಕರಿಸಲು ನಿರ್ಧರಿಸಿದ್ದೇವೆ. ಸ್ಥಳೀಯ ಕಲಾವಿದರು ಹಾಗೂ ನಾಡಿನ ಖ್ಯಾತ ನಟರೊಂದಿಗೆ ಚಿತ್ರೀಕರಣ ನಡೆಸಲು ಯೋಜಿಸಿದ್ದು ಚಿತ್ರ ಸಂಪೂರ್ಣವಾಗಿ ಮಂಗಳೂರಿನ ಆಸುಪಾಸಿನಲ್ಲಿ ನಡೆಯಲಿದೆ. ಕಡ್ಲೆಕಾಯಿ ಫಿಲ್ಮ್ಸ್ ಆಡಂಬರಕ್ಕಿಂತ ವಸ್ತುನಿಷ್ಟ ಕಥೆಯನ್ನು ಚಿತ್ರವಾಗಿಸಲು ತೀರ್ಮಾನಿಸಿದ್ದು ಹೊಸ ನಿರ್ಧೇಶಕರ ಹೊಸ ಪ್ರಯತ್ನಗಳಿಗೆ ಬೆನ್ನೆಲುಬಾಗಿ ನಿಂತಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಿತ್ರದ ಸ್ಕ್ರಿಪ್ಟ್ ಮತ್ತು ಕ್ಯಾಮೆರಾ ಗೆ ಪೂಜೆ ಸಲ್ಲಿಸಲಾಯಿತು. ಯುವ ಉದ್ಯಮಿ  ಮಂಗಲ್ಪಾಡಿ ನರೇಶ್ ಶೆಣೈ, ಬಹುಭಾಷಾ ನಟ ಗೋಪಿನಾಥ್, ಸಾಮಾಜಿಕ ಹೋರಾಟಗಾರ ಹನುಮಂತ ಕಾಮತ್ ಸಹಿತ ಚಿತ್ರದ ತಾಂತ್ರಿಕ ಬಳಗ ಭಾಗವಹಿಸಿದ್ದರು. ಒಂದು ಮೊಟ್ಟೆಯ ಕಥೆ ಚಿತ್ರದ ಸಹನಿರ್ದೇಶಕ ಸಿತೇಶ್ ಸಿ ಗೋವಿಂದ್ ಅವರು ಚಿತ್ರದ ನಿರ್ದೇಶಕರಾಗಿದ್ದಾರೆ. ಪೃರ್ಥಿ ಅಂಬರ್ ಚಿತ್ರದಲ್ಲಿ ಮುಖ್ಯವಾದ ಪಾತ್ರ ವಹಿಸಲಿದ್ದಾರೆ.

0
Shares
  • Share On Facebook
  • Tweet It


Entha LokavaiahKannada Movie


Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
ganesh kumar March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
ganesh kumar March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search