• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಕಟೀಲಿನಲ್ಲಿ ಎಂಥಾ ಲೋಕವಯ್ಯಾ ಚಿತ್ರದ ಸ್ಕ್ರಿಪ್ಟ್ ಗೆ ಪೂಜೆ

ganesh kumar Posted On October 21, 2017
0


0
Shares
  • Share On Facebook
  • Tweet It

ಹೊಸತನದ ಆವಿಷ್ಕಾರದಲ್ಲಿ ಸಿನೆಮಾವೊಂದನ್ನು ನಿರ್ಮಾಣ ಮಾಡಲು ಯೋಜಿಸಲಾಗಿದ್ದು ಪ್ರಸ್ತುತ ಸಮಾಜದಲ್ಲಿರುವ ಮೂಢನಂಬಿಕೆಗಳಿಂದ ಜನ ಹೇಗೆ ತಮ್ಮತನವನ್ನು ಕಳೆದುಕೊಂಡು ಬದಲಾಗುತ್ತಾರೆ ಎನ್ನುವುದು ಚಿತ್ರದ ತಿರುಳು ಎಂದು ಎಂಥಾ ಲೋಕವಯ್ಯಾ ಚಿತ್ರದ ನಿರ್ಮಾಪಕ ಮಂಗಲ್ಪಾಡಿ ನರೇಶ್ ಹೇಳಿದ್ದಾರೆ. ಚಿತ್ರ ಕನ್ನಡ ಭಾಷೆಯಲ್ಲಿ ಬರಲಿದ್ದು ಅದರೊಂದಿಗೆ ನಮ್ಮ ತುಳು ಮತ್ತು ಕೊಂಕಣಿ ಭಾಷೆಗಳನ್ನು ಸಂದರ್ಭಾನುಸಾರವಾಗಿ ಬಳಸಿ ಇಲ್ಲಿನ ಮಣ್ಣಿನ ಆಚಾರ, ವಿಚಾರಗಳು, ಸಂಸ್ಕೃತಿ ಮತ್ತು ಕರಾವಳಿಯ ವಿವಿಧ ಸಮಸ್ಯೆಗಳನ್ನು ಹೇಗೆ ಸುಲಲಿತವಾಗಿ ಪರಿಹರಿಸಬಹುದು ಎನ್ನುವುದನ್ನು ಹಾಸ್ಯದ ಮಿಶ್ರಣದೊಂದಿಗೆ ನವಿರಾದ ನಿರೂಪಣೆಯಲ್ಲಿ ಚಿತ್ರೀಕರಿಸಲು ನಿರ್ಧರಿಸಿದ್ದೇವೆ. ಸ್ಥಳೀಯ ಕಲಾವಿದರು ಹಾಗೂ ನಾಡಿನ ಖ್ಯಾತ ನಟರೊಂದಿಗೆ ಚಿತ್ರೀಕರಣ ನಡೆಸಲು ಯೋಜಿಸಿದ್ದು ಚಿತ್ರ ಸಂಪೂರ್ಣವಾಗಿ ಮಂಗಳೂರಿನ ಆಸುಪಾಸಿನಲ್ಲಿ ನಡೆಯಲಿದೆ. ಕಡ್ಲೆಕಾಯಿ ಫಿಲ್ಮ್ಸ್ ಆಡಂಬರಕ್ಕಿಂತ ವಸ್ತುನಿಷ್ಟ ಕಥೆಯನ್ನು ಚಿತ್ರವಾಗಿಸಲು ತೀರ್ಮಾನಿಸಿದ್ದು ಹೊಸ ನಿರ್ಧೇಶಕರ ಹೊಸ ಪ್ರಯತ್ನಗಳಿಗೆ ಬೆನ್ನೆಲುಬಾಗಿ ನಿಂತಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಿತ್ರದ ಸ್ಕ್ರಿಪ್ಟ್ ಮತ್ತು ಕ್ಯಾಮೆರಾ ಗೆ ಪೂಜೆ ಸಲ್ಲಿಸಲಾಯಿತು. ಯುವ ಉದ್ಯಮಿ  ಮಂಗಲ್ಪಾಡಿ ನರೇಶ್ ಶೆಣೈ, ಬಹುಭಾಷಾ ನಟ ಗೋಪಿನಾಥ್, ಸಾಮಾಜಿಕ ಹೋರಾಟಗಾರ ಹನುಮಂತ ಕಾಮತ್ ಸಹಿತ ಚಿತ್ರದ ತಾಂತ್ರಿಕ ಬಳಗ ಭಾಗವಹಿಸಿದ್ದರು. ಒಂದು ಮೊಟ್ಟೆಯ ಕಥೆ ಚಿತ್ರದ ಸಹನಿರ್ದೇಶಕ ಸಿತೇಶ್ ಸಿ ಗೋವಿಂದ್ ಅವರು ಚಿತ್ರದ ನಿರ್ದೇಶಕರಾಗಿದ್ದಾರೆ. ಪೃರ್ಥಿ ಅಂಬರ್ ಚಿತ್ರದಲ್ಲಿ ಮುಖ್ಯವಾದ ಪಾತ್ರ ವಹಿಸಲಿದ್ದಾರೆ.

0
Shares
  • Share On Facebook
  • Tweet It


Entha LokavaiahKannada Movie


Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
ganesh kumar December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
ganesh kumar December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search