• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಕಟೀಲಿನಲ್ಲಿ ಎಂಥಾ ಲೋಕವಯ್ಯಾ ಚಿತ್ರದ ಸ್ಕ್ರಿಪ್ಟ್ ಗೆ ಪೂಜೆ

ganesh kumar Posted On October 21, 2017
0


0
Shares
  • Share On Facebook
  • Tweet It

ಹೊಸತನದ ಆವಿಷ್ಕಾರದಲ್ಲಿ ಸಿನೆಮಾವೊಂದನ್ನು ನಿರ್ಮಾಣ ಮಾಡಲು ಯೋಜಿಸಲಾಗಿದ್ದು ಪ್ರಸ್ತುತ ಸಮಾಜದಲ್ಲಿರುವ ಮೂಢನಂಬಿಕೆಗಳಿಂದ ಜನ ಹೇಗೆ ತಮ್ಮತನವನ್ನು ಕಳೆದುಕೊಂಡು ಬದಲಾಗುತ್ತಾರೆ ಎನ್ನುವುದು ಚಿತ್ರದ ತಿರುಳು ಎಂದು ಎಂಥಾ ಲೋಕವಯ್ಯಾ ಚಿತ್ರದ ನಿರ್ಮಾಪಕ ಮಂಗಲ್ಪಾಡಿ ನರೇಶ್ ಹೇಳಿದ್ದಾರೆ. ಚಿತ್ರ ಕನ್ನಡ ಭಾಷೆಯಲ್ಲಿ ಬರಲಿದ್ದು ಅದರೊಂದಿಗೆ ನಮ್ಮ ತುಳು ಮತ್ತು ಕೊಂಕಣಿ ಭಾಷೆಗಳನ್ನು ಸಂದರ್ಭಾನುಸಾರವಾಗಿ ಬಳಸಿ ಇಲ್ಲಿನ ಮಣ್ಣಿನ ಆಚಾರ, ವಿಚಾರಗಳು, ಸಂಸ್ಕೃತಿ ಮತ್ತು ಕರಾವಳಿಯ ವಿವಿಧ ಸಮಸ್ಯೆಗಳನ್ನು ಹೇಗೆ ಸುಲಲಿತವಾಗಿ ಪರಿಹರಿಸಬಹುದು ಎನ್ನುವುದನ್ನು ಹಾಸ್ಯದ ಮಿಶ್ರಣದೊಂದಿಗೆ ನವಿರಾದ ನಿರೂಪಣೆಯಲ್ಲಿ ಚಿತ್ರೀಕರಿಸಲು ನಿರ್ಧರಿಸಿದ್ದೇವೆ. ಸ್ಥಳೀಯ ಕಲಾವಿದರು ಹಾಗೂ ನಾಡಿನ ಖ್ಯಾತ ನಟರೊಂದಿಗೆ ಚಿತ್ರೀಕರಣ ನಡೆಸಲು ಯೋಜಿಸಿದ್ದು ಚಿತ್ರ ಸಂಪೂರ್ಣವಾಗಿ ಮಂಗಳೂರಿನ ಆಸುಪಾಸಿನಲ್ಲಿ ನಡೆಯಲಿದೆ. ಕಡ್ಲೆಕಾಯಿ ಫಿಲ್ಮ್ಸ್ ಆಡಂಬರಕ್ಕಿಂತ ವಸ್ತುನಿಷ್ಟ ಕಥೆಯನ್ನು ಚಿತ್ರವಾಗಿಸಲು ತೀರ್ಮಾನಿಸಿದ್ದು ಹೊಸ ನಿರ್ಧೇಶಕರ ಹೊಸ ಪ್ರಯತ್ನಗಳಿಗೆ ಬೆನ್ನೆಲುಬಾಗಿ ನಿಂತಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಿತ್ರದ ಸ್ಕ್ರಿಪ್ಟ್ ಮತ್ತು ಕ್ಯಾಮೆರಾ ಗೆ ಪೂಜೆ ಸಲ್ಲಿಸಲಾಯಿತು. ಯುವ ಉದ್ಯಮಿ  ಮಂಗಲ್ಪಾಡಿ ನರೇಶ್ ಶೆಣೈ, ಬಹುಭಾಷಾ ನಟ ಗೋಪಿನಾಥ್, ಸಾಮಾಜಿಕ ಹೋರಾಟಗಾರ ಹನುಮಂತ ಕಾಮತ್ ಸಹಿತ ಚಿತ್ರದ ತಾಂತ್ರಿಕ ಬಳಗ ಭಾಗವಹಿಸಿದ್ದರು. ಒಂದು ಮೊಟ್ಟೆಯ ಕಥೆ ಚಿತ್ರದ ಸಹನಿರ್ದೇಶಕ ಸಿತೇಶ್ ಸಿ ಗೋವಿಂದ್ ಅವರು ಚಿತ್ರದ ನಿರ್ದೇಶಕರಾಗಿದ್ದಾರೆ. ಪೃರ್ಥಿ ಅಂಬರ್ ಚಿತ್ರದಲ್ಲಿ ಮುಖ್ಯವಾದ ಪಾತ್ರ ವಹಿಸಲಿದ್ದಾರೆ.

0
Shares
  • Share On Facebook
  • Tweet It


Entha LokavaiahKannada Movie


Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
ganesh kumar September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
ganesh kumar September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search