• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಕಟೀಲಿನಲ್ಲಿ ಎಂಥಾ ಲೋಕವಯ್ಯಾ ಚಿತ್ರದ ಸ್ಕ್ರಿಪ್ಟ್ ಗೆ ಪೂಜೆ

ganesh kumar Posted On October 21, 2017
0


0
Shares
  • Share On Facebook
  • Tweet It

ಹೊಸತನದ ಆವಿಷ್ಕಾರದಲ್ಲಿ ಸಿನೆಮಾವೊಂದನ್ನು ನಿರ್ಮಾಣ ಮಾಡಲು ಯೋಜಿಸಲಾಗಿದ್ದು ಪ್ರಸ್ತುತ ಸಮಾಜದಲ್ಲಿರುವ ಮೂಢನಂಬಿಕೆಗಳಿಂದ ಜನ ಹೇಗೆ ತಮ್ಮತನವನ್ನು ಕಳೆದುಕೊಂಡು ಬದಲಾಗುತ್ತಾರೆ ಎನ್ನುವುದು ಚಿತ್ರದ ತಿರುಳು ಎಂದು ಎಂಥಾ ಲೋಕವಯ್ಯಾ ಚಿತ್ರದ ನಿರ್ಮಾಪಕ ಮಂಗಲ್ಪಾಡಿ ನರೇಶ್ ಹೇಳಿದ್ದಾರೆ. ಚಿತ್ರ ಕನ್ನಡ ಭಾಷೆಯಲ್ಲಿ ಬರಲಿದ್ದು ಅದರೊಂದಿಗೆ ನಮ್ಮ ತುಳು ಮತ್ತು ಕೊಂಕಣಿ ಭಾಷೆಗಳನ್ನು ಸಂದರ್ಭಾನುಸಾರವಾಗಿ ಬಳಸಿ ಇಲ್ಲಿನ ಮಣ್ಣಿನ ಆಚಾರ, ವಿಚಾರಗಳು, ಸಂಸ್ಕೃತಿ ಮತ್ತು ಕರಾವಳಿಯ ವಿವಿಧ ಸಮಸ್ಯೆಗಳನ್ನು ಹೇಗೆ ಸುಲಲಿತವಾಗಿ ಪರಿಹರಿಸಬಹುದು ಎನ್ನುವುದನ್ನು ಹಾಸ್ಯದ ಮಿಶ್ರಣದೊಂದಿಗೆ ನವಿರಾದ ನಿರೂಪಣೆಯಲ್ಲಿ ಚಿತ್ರೀಕರಿಸಲು ನಿರ್ಧರಿಸಿದ್ದೇವೆ. ಸ್ಥಳೀಯ ಕಲಾವಿದರು ಹಾಗೂ ನಾಡಿನ ಖ್ಯಾತ ನಟರೊಂದಿಗೆ ಚಿತ್ರೀಕರಣ ನಡೆಸಲು ಯೋಜಿಸಿದ್ದು ಚಿತ್ರ ಸಂಪೂರ್ಣವಾಗಿ ಮಂಗಳೂರಿನ ಆಸುಪಾಸಿನಲ್ಲಿ ನಡೆಯಲಿದೆ. ಕಡ್ಲೆಕಾಯಿ ಫಿಲ್ಮ್ಸ್ ಆಡಂಬರಕ್ಕಿಂತ ವಸ್ತುನಿಷ್ಟ ಕಥೆಯನ್ನು ಚಿತ್ರವಾಗಿಸಲು ತೀರ್ಮಾನಿಸಿದ್ದು ಹೊಸ ನಿರ್ಧೇಶಕರ ಹೊಸ ಪ್ರಯತ್ನಗಳಿಗೆ ಬೆನ್ನೆಲುಬಾಗಿ ನಿಂತಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಿತ್ರದ ಸ್ಕ್ರಿಪ್ಟ್ ಮತ್ತು ಕ್ಯಾಮೆರಾ ಗೆ ಪೂಜೆ ಸಲ್ಲಿಸಲಾಯಿತು. ಯುವ ಉದ್ಯಮಿ  ಮಂಗಲ್ಪಾಡಿ ನರೇಶ್ ಶೆಣೈ, ಬಹುಭಾಷಾ ನಟ ಗೋಪಿನಾಥ್, ಸಾಮಾಜಿಕ ಹೋರಾಟಗಾರ ಹನುಮಂತ ಕಾಮತ್ ಸಹಿತ ಚಿತ್ರದ ತಾಂತ್ರಿಕ ಬಳಗ ಭಾಗವಹಿಸಿದ್ದರು. ಒಂದು ಮೊಟ್ಟೆಯ ಕಥೆ ಚಿತ್ರದ ಸಹನಿರ್ದೇಶಕ ಸಿತೇಶ್ ಸಿ ಗೋವಿಂದ್ ಅವರು ಚಿತ್ರದ ನಿರ್ದೇಶಕರಾಗಿದ್ದಾರೆ. ಪೃರ್ಥಿ ಅಂಬರ್ ಚಿತ್ರದಲ್ಲಿ ಮುಖ್ಯವಾದ ಪಾತ್ರ ವಹಿಸಲಿದ್ದಾರೆ.

0
Shares
  • Share On Facebook
  • Tweet It


Entha LokavaiahKannada Movie


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
ganesh kumar January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
ganesh kumar January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search